Devil: ಡಿ-ಬಾಸ್ ದರ್ಶನ್ ಅಭಿನಯದ 'ಡೆವಿಲ್' ಸಿನಿಮಾದ ಬಿಗ್ ಅಪ್ಡೇಟ್: ಬಿಡುಗಡೆ ದಿನಾಂಕ ಫಿಕ್ಸ್
ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರದ ಬಗ್ಗೆ ಎಕ್ಸಕ್ಲೂಸಿವ್ ಅಪ್ಡೇಟ್ ಸಿಕ್ಕಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ 'ಡೆವಿಲ್' ಚಿತ್ರ ಇದೇ ವರ್ಷ 2024ರಲ್ಲಿ ತೆರೆಕಾಣಲಿದೆ ಎನ್ನುವುದು ಖಚಿತವಾಗಿದೆ.
ಸ್ವತಃ ಚಾಲೆಂಜಿಂಗ್ ಸ್ಟಾರ್ ದರ್ಶನ್ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಡೆವಿಲ್ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ದರ್ಶನ್, 'ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ - 'ಡೆವಿಲ್' ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ' ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ಇದೇ ವರ್ಷ 2024ರ ಕ್ರಿಸ್ಮಸ್ ದಿನ ಅಂದರೆ ಡಿಸೆಂಬರ್ 25ರಂದು 'ಡೆವಿಲ್' ಚಿತ್ರ ತೆರೆಕಾಣಲಿದೆ ಎನ್ನುವ ಸಿಹಿ ಸುದ್ದಿಯನ್ನು ದರ್ಶನ್ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.ಕಳೆದ ಡಿಸೆಂಬರ್ನಲ್ಲಿ ಬಿಡುಗಡೆಯಾದ ದರ್ಶನ್ ಅಭಿನಯದ 'ಕಾಟೇರ' ಸಿನಿಮಾ 200 ಕೋಟಿ ರೂಪಾಯಿ ಗಳಿಸುವ ಮೂಲಕ ಬಾಕ್ಸ್ ಆಫೀಸ್ನಲ್ಲಿ ಸೂಪರ್ ಹಿಟ್ ಆಗಿತ್ತು. ಇದೀಗ ದರ್ಶನ್ ಅವರ ಮುಂದಿನ ಚಿತ್ರವು ಸಹ ಡಿಸೆಂಬರ್ ಅಂತ್ಯಕ್ಕೆ ತೆರೆಮೇಲೆ ಬರಲಿದ್ದು, ಅಭಿಮಾನಿಗಳು ಕಾತುರರಾಗಿದ್ದಾರೆ.
ಈ ಹಿಂದೆ ರೀಲಿಸ್ ಆದ 'ಡೆವಿಲ್' ಚಿತ್ರದ ಫಸ್ಟ್ಲುಕ್ ಕೂಡ ಸಖತ್ ವೈರಲ್ ಆಗಿತ್ತು. ಫಸ್ಟ್ಲುಕ್ ನೋಡಿದ ಸಿನಿ ಪ್ರಿಯರು ಕನ್ನಡ ಚಿತ್ರರಂಗದ ಮತ್ತೊಂದು ಭರವಸೆಯ ಚಿತ್ರ ಎಂದು ನಿರ್ಧರಿಸಿದ್ದರು. ಹೀಗಾಗಿ ಡೆವಿಲ್ ಚಿತ್ರದ ರಿಲೀಸ್ ಬಗ್ಗೆ ಕಾಯುತ್ತಿದ್ದವರಿಗೆ ಇಂದು ಗುಡ್ನ್ಯೂಸ್ ಸಿಕ್ಕಿದೆ. ಇನ್ನು ಚಿತ್ರದ ಹಾಡು ಹಾಗೂ ಟೀಸರ್, ಟ್ರೈಲರ್ಗಳು ಬೇಗ ಬರಲಿ ಎಂದು ದರ್ಶನ್ ಅಭಿಮಾನಿಗಳು ಕಾಯುತ್ತಿದ್ದಾರೆ.
'ಡೆವಿಲ್' ಚಿತ್ರವನ್ನು ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡುತ್ತಿದ್ದು, ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಸಿನಿಮಾದ ಮೇಕಿಂಗ್ ವಿಡಿಯೋನ ತಂಡ ರಿಲೀಸ್ ಮಾಡಿದ್ದರು. ಈ ಮೊದಲು ದರ್ಶನ್ ನಟನೆಯ 'ತಾರಕ್' ಚಿತ್ರವನ್ನು ಪ್ರಕಾಶ್ ವೀರ್ ನಿರ್ದೇಶಿಸಿದ್ದು ಚಿತ್ರ ಹಿಟ್ ಆಗಿತ್ತು. ಹೀಗಾಗಿ ಈಗ ಪ್ರಕಾಶ್ ವೀರ್ ಹಾಗೂ ದರ್ಶನ್ ಕಾಂಬಿನೇಷನ್ನಲ್ಲಿ ಬರುತ್ತಿರುವ 'ಡೆವಿಲ್' ಚಿತ್ರದ ಬಗ್ಗೆ ನಿರೀಕ್ಷೆಗಳು ದುಪ್ಪಟ್ಟಾಗಿದೆ. ಚಿತ್ರ ಇನ್ನುಳಿದ ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಬಹಿರಂಗ ಪಡಿಸುವ ಸಾಧ್ಯತೆ ಇದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications