ವಿಚ್ಛೇದನ ಬಳಿಕವೂ ಜಂಟಿಯಾಗಿ ಸುದ್ದಿಗೋಷ್ಠಿ ಕರೆದ ಚಂದನ್ ಶೆಟ್ಟಿ-ನಿವೇದಿತಾ
ಇತ್ತೀಚೆಗಷ್ಟೇ ಬಿಗ್ಬಾಸ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ವಿಚ್ಛೇದನ ನೀಡಿದ್ದರು. ಆದರೂ ಈ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆಯೇ ಈ ಇಬ್ಬರು ಒಟ್ಟಿಗೆ ಸುದ್ದಿಗೋಷ್ಠಿ ಕರೆದಿದ್ದು, ಭಾರೀ ಕುತೂಹಲ ಸೃಷ್ಟಿಸಿದೆ. ಹಾಗಾದರೆ ಪತ್ರಿಕಾಗೋಷ್ಠಿ ಎಲ್ಲಿ ನಡೆಯಲಿದೆ ಹಾಗೂ ಸಮಯದ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನದ ವಿಚಾರ ಎಲ್ಲೆಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಳೆದ ಒಂದು ವರ್ಷಗಳಿಂದ ಇವರು ಈ ಬಗ್ಗೆ ಚರ್ಚೆ ಮಾಡುತ್ತಿದ್ದರು. ಆದರೆ ಎಲ್ಲಿಯೂ ಸುದ್ದಿಯಾಗದಂತೆ ನೋಡಿಕೊಂಡಿದ್ದರು. ಇದೀಗ ದಿಢೀರ್ ವಿಚ್ಛೇದನದವರೆಗೂ ಹೋಗಿದ್ದು, ಅಭಿಮಾನಿಗಳಿಗೆ ಅಚ್ಚರಿ ಆಗುವಂತೆ ಮಾಡಿದೆ. ಅಲ್ಲದೆ, ಸಾಮಾಜಿ ಜಾಲತಾಣಗಳಿದಂಲೂ ಪರಸ್ಪರ ಅನ್ಫಾಲೋ ಮಾಡಿಕೊಂಡಿದ್ದು, ಇದೀಗ ಇಬ್ಬರೂ ಜಂಟಿ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೂಲಕ ಹಲವು ವದಂತಿಗಳಿಗೆ ತೆರೆ ಎಳೆಯಲಿದ್ದಾರೆ ಎನ್ನಲಾಗಿದೆ.

ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ನಿವೇದಿತಾ ದಾಂಪತ್ಯಕ್ಕೆ ಕಾಲಿಟ್ಟು ನಾಲ್ಕು ವರ್ಷ ಆಗಿದ್ದು, ಇವರು ಯಾವುದೇ ಕಲಹಗಳಿಲ್ಲದೇ ಸಂಸಾರ ಸಾಗಿಸಿಕೊಂಡು ಹೋಗುತ್ತಿದ್ದರು. ಆದರೆ ಏನಾಯ್ತೋ ಏನೋ.. ಇವರು ವಿಚ್ಛೇದನದವರೆಗೂ ಹೋಗಿದ್ದು, ಇದಕ್ಕೆ ಕಾರಣ ಏನೆಂದು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಹಲವು ರೀತಿಯಲ್ಲಿ ವದಂತಿಗಳು ಎದ್ದಿದ್ದು, ಈ ಹಿನ್ನೆಲೆ ಇದಕ್ಕೆಲ್ಲ ತೆರೆ ಎಳೆಯಲು ಇಬ್ಬರು ಒಟ್ಟಿಗೆ ಸುದ್ದಿಗೋಷ್ಠಿ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನ ಜಿಟಿ ಮಾಲ್ನಲ್ಲಿರುವ ಎಂಬಿ ಲೆಗಸಿಯಲ್ಲಿ ಇಂದು (ಜೂನ್ 10) ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ಆರಂಭವಾಗಲಿದ್ದು, ಈ ವೇಳೆ ಯಾವೆಲ್ಲ ವಿಚಾರಗಳ ಬಗ್ಗೆ ಮಾತನಾಡುತ್ತಾರೆ ಎನ್ನುವುದೇ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟುಹಾಕಿದೆ.
ಮಗು ಪಡೆಯಲು ಒಪ್ಪಿಗೆ ಇಲ್ಲದಿದ್ದರಿಂದ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರೆಯಬೇಕು ಎಂದು ಗಂಡನಿಂದ ದೂರ ಆಗುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇನ್ನು ಇದೀಗ ಇದಕ್ಕೆಲ್ಲ ಸುದ್ದಿಗೋಷ್ಠಿಯಲ್ಲಿ ಇವರು ಸ್ಪಷ್ಟನೆ ಕೊಡಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications