ವಿಚ್ಛೇದನ ಬಳಿಕವೂ ಜಂಟಿಯಾಗಿ ಸುದ್ದಿಗೋಷ್ಠಿ ಕರೆದ ಚಂದನ್ ಶೆಟ್ಟಿ-ನಿವೇದಿತಾ
ಇತ್ತೀಚೆಗಷ್ಟೇ ಬಿಗ್ಬಾಸ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ವಿಚ್ಛೇದನ ನೀಡಿದ್ದರು. ಆದರೂ ಈ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆಯೇ ಈ ಇಬ್ಬರು ಒಟ್ಟಿಗೆ ಸುದ್ದಿಗೋಷ್ಠಿ ಕರೆದಿದ್ದು, ಭಾರೀ ಕುತೂಹಲ ಸೃಷ್ಟಿಸಿದೆ. ಹಾಗಾದರೆ ಪತ್ರಿಕಾಗೋಷ್ಠಿ ಎಲ್ಲಿ ನಡೆಯಲಿದೆ ಹಾಗೂ ಸಮಯದ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನದ ವಿಚಾರ ಎಲ್ಲೆಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಳೆದ ಒಂದು ವರ್ಷಗಳಿಂದ ಇವರು ಈ ಬಗ್ಗೆ ಚರ್ಚೆ ಮಾಡುತ್ತಿದ್ದರು. ಆದರೆ ಎಲ್ಲಿಯೂ ಸುದ್ದಿಯಾಗದಂತೆ ನೋಡಿಕೊಂಡಿದ್ದರು. ಇದೀಗ ದಿಢೀರ್ ವಿಚ್ಛೇದನದವರೆಗೂ ಹೋಗಿದ್ದು, ಅಭಿಮಾನಿಗಳಿಗೆ ಅಚ್ಚರಿ ಆಗುವಂತೆ ಮಾಡಿದೆ. ಅಲ್ಲದೆ, ಸಾಮಾಜಿ ಜಾಲತಾಣಗಳಿದಂಲೂ ಪರಸ್ಪರ ಅನ್ಫಾಲೋ ಮಾಡಿಕೊಂಡಿದ್ದು, ಇದೀಗ ಇಬ್ಬರೂ ಜಂಟಿ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೂಲಕ ಹಲವು ವದಂತಿಗಳಿಗೆ ತೆರೆ ಎಳೆಯಲಿದ್ದಾರೆ ಎನ್ನಲಾಗಿದೆ.

ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ನಿವೇದಿತಾ ದಾಂಪತ್ಯಕ್ಕೆ ಕಾಲಿಟ್ಟು ನಾಲ್ಕು ವರ್ಷ ಆಗಿದ್ದು, ಇವರು ಯಾವುದೇ ಕಲಹಗಳಿಲ್ಲದೇ ಸಂಸಾರ ಸಾಗಿಸಿಕೊಂಡು ಹೋಗುತ್ತಿದ್ದರು. ಆದರೆ ಏನಾಯ್ತೋ ಏನೋ.. ಇವರು ವಿಚ್ಛೇದನದವರೆಗೂ ಹೋಗಿದ್ದು, ಇದಕ್ಕೆ ಕಾರಣ ಏನೆಂದು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಹಲವು ರೀತಿಯಲ್ಲಿ ವದಂತಿಗಳು ಎದ್ದಿದ್ದು, ಈ ಹಿನ್ನೆಲೆ ಇದಕ್ಕೆಲ್ಲ ತೆರೆ ಎಳೆಯಲು ಇಬ್ಬರು ಒಟ್ಟಿಗೆ ಸುದ್ದಿಗೋಷ್ಠಿ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನ ಜಿಟಿ ಮಾಲ್ನಲ್ಲಿರುವ ಎಂಬಿ ಲೆಗಸಿಯಲ್ಲಿ ಇಂದು (ಜೂನ್ 10) ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ಆರಂಭವಾಗಲಿದ್ದು, ಈ ವೇಳೆ ಯಾವೆಲ್ಲ ವಿಚಾರಗಳ ಬಗ್ಗೆ ಮಾತನಾಡುತ್ತಾರೆ ಎನ್ನುವುದೇ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟುಹಾಕಿದೆ.
ಮಗು ಪಡೆಯಲು ಒಪ್ಪಿಗೆ ಇಲ್ಲದಿದ್ದರಿಂದ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರೆಯಬೇಕು ಎಂದು ಗಂಡನಿಂದ ದೂರ ಆಗುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇನ್ನು ಇದೀಗ ಇದಕ್ಕೆಲ್ಲ ಸುದ್ದಿಗೋಷ್ಠಿಯಲ್ಲಿ ಇವರು ಸ್ಪಷ್ಟನೆ ಕೊಡಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications