Ram Gopal Varma: ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ!
Director Ram Gopal Varma: ತೆಲುಗು ಚಿತ್ರರಂಗದ ಪ್ರಮುಖ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಭಾರೀ ಸಂಕಷ್ಟವೊಂದು ಎದುರಾಗಿದೆ. ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳಿಂದಲೇ ಸಂಕಷ್ಟಕ್ಕೆ ಒಳಗಾಗುವ ವರ್ಮಾ ಅವರಿಗೆ ಇದೀಗ ಬರೋಬ್ಬರಿ 3 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗುವ ಪರಿಸ್ಥಿತಿ ಎದುರಾಗಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಅವರ ಕುಟುಂಬದವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ವರ್ಮಾ ಅವರು ಬಂಧನಕ್ಕೆ ಒಳಗಾಗಬೇಕಾಗಿತ್ತು. ಇದೀಗ ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಸಂಕಷ್ಟ ಎದುರಾಗಿದ್ದು ಜೈಲು ಸೇರುವ ಆತಂಕ ಸೃಷ್ಟಿಯಾಗಿದೆ. ಮೂರು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಟಾಲಿವುಡ್ನ ಪ್ರಮುಖ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಭಾರೀ ದೊಡ್ಡ ಸಂಕಷ್ಟ ಎದುರಾಗಿದೆ. ಮುಂಬೈನ ಸ್ಥಳೀಯ ಕೋರ್ಟ್ನಿಂದ ಮೂರು ತಿಂಗಳಗಳ ಕಾಲ ವರ್ಮಾಗೆ ಜೈಲು ಶಿಕ್ಷೆ ನೀಡಲಾಗಿದೆ. ನಿರ್ದೇಶಕ ಹಾಗೂ ನಟ ವರ್ಮಾ ಅವರ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಆದರೆ ವರ್ಮಾ ಅವರು ಈ ಪ್ರಕರಣದ ತೀರ್ಪು ಪ್ರಕಟವಾಗುವ ಸಂದರ್ಭದಲ್ಲಿ ಕೋರ್ಟ್ಗೆ ಹಾಜರಾಗಿಲ್ಲ. ಇದನ್ನು ಅಲ್ಲಿನ ಸ್ಥಳೀಯ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ರಾಮ್ ಗೋಪಾಲ್ ವರ್ಮಾ ಅವರ ವಿರುದ್ಧ ಇದೀಗ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.

ಏಳು ವರ್ಷಗಳ ಪ್ರಕರಣ: ಇನ್ನು ಈ ಪ್ರಕರಣವು ಬರೋಬ್ಬರಿ 7 ವರ್ಷಗಳ ಹಿಂದಿನದ್ದಾಗಿದೆ. ಕಳೆದ ಏಳು ವರ್ಷಗಳಿಂದ ಈ ಪ್ರಕರಣದ ತನಿಖೆ ನಡೆದಿದೆ . 2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್ ಆರೋಪ ಕೇಳಿ ಬಂದಿತ್ತು. ಅಲ್ಲದೆ ಪ್ರಕರಣ ಸಹ ದಾಖಲಾಗಿತ್ತು. ಮಹೇಶ್ಚಂದ್ರ ಮಿಶ್ರಾ ಎನ್ನುವವರಿಗೆ ಕೊಟ್ಟ ಚೆಕ್ ಬೌನ್ಸ್ ಆಗಿದೆ ಎನ್ನುವ ಆರೋಪ ವರ್ಮಾ ಮೇಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಕೋರ್ಟ್ಗೆ ಹಾಜರಾಗುವಂತೆ ಸೂಚನೆ ಕೊಟ್ಟಿದ್ದರೂ ಅವರು ಕೋರ್ಟ್ಗೆ ಹಾಜರಾಗಿರಲಿಲ್ಲ ಎಂದು ಹೇಳಲಾಗಿದೆ.
ಇದೀಗ ಮೂರು ತಿಂಗಳ ಒಳಗಾಗಿ ಮಿಶ್ರಾ ಅವರಿಗೆ 3.72 ಲಕ್ಷ ರೂಪಾಯಿ ಪರಿಹಾರ ಕೊಡುವಂತೆ ಸೂಚನೆ ನೀಡಲಾಗಿದೆ. ಒಂದೊಮ್ಮೆ ಈ ಅವಧಿಯ ಒಳಗಾಗಿ ಹಣ ಕೊಡದೆ ಇದ್ದರೆ. 3 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಸದಾ ವಿವಾದ: ಇನ್ನು ರಾಮ್ ಗೋಪಾಲ್ ವರ್ಮಾ ಅವರು ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗಿದ್ದೇ ಹೆಚ್ಚು. ಅವರು ಕೊಡುವ ಹೇಳಿಕೆಗಳು ಕೆಲವೊಮ್ಮೆ ಭಾರೀ ವಿವಾದಕ್ಕೆ ಗುರಿಯಾಗಿದ್ದು ಇದೆ. ಕೆಲವೇ ತಿಂಗಳುಗಳ ಮುಂಚೆ ಅವರು ಈಗಿನ ಆಂಧ್ರಪ್ರದೇಶದ ಮುಖ್ಯಮಂತ್ರಿ ಹಾಗೂ ಅವರ ಕುಟುಂಬದವರ ಬಗ್ಗೆ ವಿವಾದಾತ್ಮಕ ಹಾಗೂ ಅಶ್ಲೀಲ ಪೋಸ್ಟ್ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications