Chillar Manju: ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಗಿಚ್ಚಿ ಗಿಲಿ ಗಿಲಿ ಖ್ಯಾತಿಯ ಚಿಲ್ಲರ್ ಮಂಜು: ಫೋಟೋ ವೈರಲ್
Chillar Manju: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಗಿಚ್ಚಿ ಗಿಲಿ ಗಿಲಿ ಕಾರ್ಯಕ್ರಮದ ಮೂಲಕ ಮನೆಮಾತಾಗಿರುವ ಚಿಲ್ಲರ್ ಮಂಜು ಅವರು ಕಾರುಣ್ಯ ಎಂಬುವರ ಜೊತೆ ಇಂದು (ಫೆಬ್ರವರಿ 19) ಸದ್ದಿಲ್ಲದೆ, ನಿಶ್ಚಿತಾರ್ಥ ಮಾಡಿಕೊಂಡಿಕೊಂಡಿದ್ದಾರೆ. ಸರಳವಾಗಿ ನಡೆದ ಈ ಕಾರ್ಯಕ್ರಮದ ಫೋಟೋಗಳನ್ನು ಸ್ವತಃ ಮಂಜು ಅವರೇ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕಲಾವಿದರು ಈ ಜೋಡಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಕಾಮಿಡಿ ಶೋ ಮೂಲಕ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಪ್ರೇಕ್ಷಕರನ್ನು ಮನರಂಜಿಸಿರುವ ಮಂಜು, ಈಗ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡುತ್ತಿದ್ದಾರೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದ ಸದಸ್ಯರು ಹಾಗೂ ಆಪ್ತರು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಮಂಜು ಸಾಮಾಜಿಕ ಜಾಲತಾಣ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಸಂತಸದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಮನರಂಜನಾ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಚಿಲ್ಲರ್ ಮಂಜು ಅವರಿಗೆ ಅಭಿಮಾನಿಗಳು ಮತ್ತು ಸಹ ಕಲಾವಿದರು ಶುಭಾಶಯ ತಿಳಿಸಿದ್ದು, ಇದೀಗ ಮದುವೆ ದಿನಾಂಕ ಯಾವಾಗ ಎಂಬ ಕುತೂಹಲವೂ ಅಭಿಮಾನಿಗಳಲ್ಲಿ ಮೂಡಿದೆ.

ವೀಕ್ಷಕರ ಮನಸು ಕದ್ದ ಚಿಲ್ಲರ್ ಮಂಜು
ಇತ್ತೀಚೆಗಷ್ಟೇ ಗಿಚ್ಚಿ ಗಿಲಿ ಗಿಲಿ ಖ್ಯಾತಿಯ ಮತ್ತೊಬ್ಬ ಹಾಸ್ಯ ನಟ ಶಿವು ಹಾಗೂ ಮಾನಸ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಚಿಲ್ಲರ್ ಮಂಜು ಅವರು ಸಹ ಸದಿಲ್ಲದೆ, ನಿಶ್ಚಿತಾರ್ಥ ಮಾಡಿಕೊಂಡು ಗಮನ ಸೆಳೆದಿದ್ದಾರೆ. ಜೀವನದಲ್ಲಿ ಏಳುಬೀಳುಗಳನ್ನು ದಾಟಿ ಬಂದಿರುವ ಚಿಲ್ಲರ್ ಮಂಜು ಪಕ್ಕಾ ಗ್ರಾಮೀಣ ಪ್ರತಿಭೆ ಆಗಿದ್ದು, ಕಲರ್ಸ್ ಕನ್ನಡ ವಾಹಿನಿಯಾಲ್ಲಿ ಪ್ರಸಾರ ಆಗುತ್ತಿದ್ದ ಮಜಾ ಭಾರತ ಹಾಗೂ ಗಿಚ್ಚಿ ಗಿಲಿ ಗಿಲಿ ಶೋನಲ್ಲಿ ಹಾಸ್ಯದ ಮೂಲಕ ರಂಜಿಸುವ ಮೂಲಕ ವೀಕ್ಷಕರ ಮನಸು ಕದ್ದುಬಿಟ್ಟಿದ್ದಾರೆ ಅಂದ್ರೆ ತಪ್ಪಾಗಲಾರದು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications