ಡಾಲಿಯ "ಹಲಗಲಿ" ಅವತಾರ ನೋಡಿ ಸಿಎಂ ಸಿದ್ದರಾಮಯ್ಯ ಏನಂದ್ರು?
ನಟ ಡಾಲಿ ಧನಂಜಯ್ ಅವರ ಮುಂದಿನ ಸಿನಿಮಾ ಹಲಗಲಿ. ಈ ಸಿನಿಮಾದ ಟೀಸರ್ ರಿಲೀಸ್ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಇದು ನಮ್ಮ ಮಣ್ಣಿನ ಕಥೆ, ನಮ್ಮ ನೆಲದ "ಹಲಗಲಿ" ಬಂಡಾಯದ ಕಥೆ ಎಂದು ಡಾಲಿ ಹೇಳಿದ್ದಾರೆ. ಡಾಲಿಯ ಫಸ್ಟ್ ಲುಕ್ ಕೂಡ ಅನಾವರಣಗೊಂಡಿದ್ದು, ಐತಿಹಾಸಿಕ ಹಿನ್ನೆಲೆಯುಳ್ಳ ಈ ಸಿನಿಮಾಗೆ ಸಿನಿರಂಗದ ಹಲವರಿಂದ ಪ್ರಶಂಸೆಗೆ ಒಳಗಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಈ ಹಲಗಲಿ ಟೀಸರ್ ನೋಡಿ ಮೆಚ್ಚಿದ್ದಾರೆ.
ಬ್ರಿಟಿಷರ ಸರ್ವಾಧಿಕಾರಿ ಸಾಮ್ರಾಜ್ಯದ ನಿಶಸ್ತ್ರೀಕರಣ ನೀತಿಯ ವಿರುದ್ಧ ಸಿಡಿದೆದ್ದ ಹಲಗಲಿಯ ಬೇಡರು ತಮ್ಮ ಅಸ್ಮಿತೆಗಾಗಿ ಕೆಚ್ಚೆದೆಯಿಂದ ಹೋರಾಟ ನಡೆಸಿ, ಹುತಾತ್ಮರಾದರು. ಹಲಗಲಿಯ ದಂಗೆ ಭಾರತದ ಇತಿಹಾಸದಲ್ಲಿ ಎಂದೂ ಮರೆಯಲಾಗದ ಘಟನೆ ಎಂದು ಸಿಎಂ ಸಿದ್ದರಾಮಯ್ಯ ನೆನೆದಿದ್ದಾರೆ.
ಬ್ರಿಟಿಷರ ತುಪಾಕಿ, ಪಿರಂಗಿಗಳಿಗೆ ಎದೆಕೊಟ್ಟು ನಿಂತ ಸ್ವಾತಂತ್ರ್ಯ ಪ್ರೇಮಿಗಳ ಸತ್ಯ ಘಟನೆಯಾಧಾರಿತ "ಹಲಗಲಿ" ಚಿತ್ರದ ಟೀಸರ್ ಅನ್ನು ಸ್ವಾತಂತ್ರ್ಯ ದಿನದಂದೇ ವೀಕ್ಷಿಸಿದ್ದು ಹೆಚ್ಚು ಖುಷಿ ಕೊಟ್ಟಿತು. ಚಿತ್ರದ ನಾಯಕನಟ ಡಾಲಿ ಧನಂಜಯ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭ ಹಾರೈಕೆಗಳು. ನಮ್ಮ ಮಣ್ಣಿನ ಕತೆಯನ್ನು ಜನರೆದುರು ತರುವ ಈ ಪ್ರಯತ್ನವು ಯಶಸ್ಸು ಕಾಣಲಿ ಎಂದು ಶುಭಕೋರಿದ್ದಾರೆ.

ನಿಮ್ಮ ದಯೆಯ ಮಾತುಗಳಿಗೆ ಗೌರವ ಮತ್ತು ಕೃತಜ್ಞತೆಗಳು ಸರ್. ನಿಮ್ಮ ಪ್ರೋತ್ಸಾಹ ಇಡೀ ಹಲಗಲಿ ತಂಡಕ್ಕೆ ತುಂಬಾ ಅರ್ಥಪೂರ್ಣವಾಗಿದೆ ಧನ್ಯವಾದಗಳು ಎಂದು ನಟ ಡಾಲಿ ರಿಪ್ಲೈ ಮಾಡಿದ್ದಾರೆ. ಡಾಲಿ ಧನಂಜಯ್ ಅವರ ಹಲಗಲಿ ಚಿತ್ರದ ಫಸ್ಟ್ ಲುಕ್ ಟೀಸರ್ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಪ್ರತಿಯೊಬ್ಬ ಕನ್ನಡಿಗ ನೋಡಲೇಬೇಕಾದ ಚಿತ್ರ. ಕನ್ನಡ ನೆಲದ ಮಣ್ಣಿನ ಯಶೋಗಾಥೆ ಹೇಗೆ ಸಾಮಾನ್ಯ ಬೇಡ ನಾಯಕರು ಬ್ರಿಟಿಷರನ್ನ ಬಗ್ಗು ಬಡೆದರು ಎಂಬವುದರ ಬಗ್ಗೆ ಈ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ.
ಹಲಗಲಿ ಸಿನಿಮಾದ ಫಸ್ಟ್ಲುಕ್ ಟೀಸರ್ನಲ್ಲಿ ಡಾಲಿ ಹಲಗಲಿ ಬೇಡರ ನಾಯಕನಾಗಿ ಅಬ್ಬರಿಸಿದ್ದಾರೆ. ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ ಹುಟ್ಟಡಗಿಸುವ ದೃಶ್ಯಗಳು ಮೈರೋಮಾಂಚನಗೊಳಿಸುವಂತಿವೆ. ಸಿನಿಮಾಗೆ ಸುಕೇಶ್ ನಾಯಕ್ ಆಕ್ಷನ್ ಕಟ್ ಹೇಳಿದ್ದು, ವಾಸುಕಿ ವೈಭವ್ ಸಂಗೀತವಿದೆ. ಡಾಲಿ ಧನಂಜಯ್ ಜೊತೆಗೆ ಸಪ್ತಮಿಗೌಡ ಮತ್ತೊಮ್ಮೆ ಜತೆಯಾಗಿದ್ದಾರೆ. ಬಿ.ಸುರೇಶ್, ಶರತ್ ಲೋಹಿತಾಶ್ವ, ಬಿರಾದರ್ ಸೇರಿದಂತೆ ಹಿರಿಯ ಪೋಷಕ ಕಲಾವಿದರೂ ಈ ಸಿನಿಮಾದಲ್ಲಿ ಇದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರಲಿದೆ.
ಹಲಗಲಿ ಬೇಡರ ಇತಿಹಾಸವೇನು?
ಬ್ರಿಟೀಷ್ ವಿರುದ್ಧದ ಹೋರಾಟದಲ್ಲಿ ಕರ್ನಾಟಕದ ಪಾಲು ಗಮನಾರ್ಹವಾಗಿತ್ತು. ಈ ಬಂಡಾಯಗಳ ಪೈಕಿ ಹಲಗಲಿ ಬಂಡಾಯ ಕೂಡ ಪ್ರಮುಖವಾದದ್ದು. ಹಲಗಲಿ ಎಂಬ ಸಣ್ಣ ಊರಿನ ದೊಡ್ಡ ಬಂಡಾಯ ರೋಮಾಂಚನಕಾರಿ ಮತ್ತು ವೀರೋಚಿತವಾದುದು. ಹಲಗಲಿ ಬಂಡಾಯಕ್ಕೆ ಕೂಡ ಸುಮಾರು 150 ವರ್ಷಗಳ ಇತಿಹಾಸವಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಗಲಿ ಎಂಬ ಗ್ರಾಮದಲ್ಲಿ ನಡೆದ ಈ ಬಂಡಾಯ ಹಲಗಲಿಯ ಬೇಡರ ಬಂಡಾಯವೆಂದೇ ಇತಿಹಾಸದಲ್ಲಿ ಪುಟದಲ್ಲಿದೆ. ಇಲ್ಲಿನ ನಾಯಕ ಸಮುದಾಯದವರು ಜೀವನೋಪಾಯಕ್ಕಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರು. ಬ್ರಿಟಿಷರ ಶಸ್ತ್ರಾಸ್ತ್ರ ಅಧಿಸೂಚನೆ ನಿರಾಕರಿಸಿ, ತಮ್ಮ ಆಯುಧಗಳನ್ನು ಸರ್ಕಾರಕ್ಕೆ ಒಪ್ಪಿಸದೇ ಅಲ್ಲಿನ ಬೇಡರು ಪ್ರತಿಭಟಿಸಿದ್ದೇ ಹಲಗಲಿ ಬಂಡಾಯ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications