Rakesh Poojary Death: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ' ನಿಧನ
ಬೆಂಗಳೂರು, ಮೇ 12: ಎಲ್ಲಾರನ್ನು ಯಾವಾಗಲೂ ನಕ್ಕು ನಗಿಸುತ್ತಾ ಇದ್ದವರು ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ನಿಧನರಾದರು ಎಂದು ವರದಿಯಾಗಿದೆ. ತುಂಬಾ ಕಷ್ಟದ ಜೀವನ ನೋಡಿ, ನಂತರ ಹಾಸ್ಯದ ಮೂಲಕ ಎಲ್ಲರ ಮನ ಗೆದ್ದರು. ತುಂಬಾ ಅವಮಾನಗಳನ್ನು ಮೆಟ್ಟಿ ನಿಂತರು. ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನ ಗಳಿಸಿದ್ದರು.
ವಿಶ್ವರೂಪ್ ಎಂದೇ ರಾಕೇಶ್ ಪೂಜಾರಿ ಜನಪ್ರಿಯತೆ ಪಡೆದಿದ್ದರು. ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಇದ್ದರು. ಆದರೆ, 'ಕಾಮಿಡಿ ಕಿಲಾಡಿಗಳು' ವೇದಿಕೆ ಅವರ ಬದುಕನ್ನು ಬದಲಿಸಿತು. 'ಕಾಮಿಡಿ ಕಿಲಾಡಿಗಳು' ಮೂರನೇ ಸೀಸನ್ನಲ್ಲಿ ಅವರು ವಿನ್ನರ್ ಆಗಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕಾಮಿಡಿ ಕಿಲಾಡಿಗಳು ವಿನ್ನರ್ ಆಗ್ಬೇಕು ಎಂಬ ಕನಸು ಕಂಡಿದ್ದ ರಾಕೇಶ್ ಪೂಜಾರಿ ಅವರು ಬಹುದಿನ ಕನಸು ನನಸಾಗಿದೆ ಎಂದು ಬರೆದುಕೊಂಡಿದ್ದರು.

ಕಷ್ಟ ಪಟ್ಟು, ತುಂಬಾ ಅವಮಾನಗಳನ್ನು ಮೆಟ್ಟಿ ನಿಂತು ಉತ್ತಮ ಬದುಕು ಕಟ್ಟಿಕೊಂಡಿದ್ದ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನ ಹೊಂದಿದ್ದಾರೆ. ಹಾಗಂತ ಇದು ವದಂತಿ ಅಲ್ಲ. ಈ ಸುದ್ದಿ ನಂಬಲು ಅಸಾಧ್ಯ ಎನಿಸಿದರೂ ಸತ್ಯವೇ. ಆರೋಗ್ಯವಾಗಿದ್ದ ನಟ ರಾಕೇಶ್ ಪೂಜಾರಿ ಅವರು ಬಾಳಿ ಬದುಕ ಬೇಕಿದ್ದ ಅವರು ಕೊನೆಯುಸಿರು ಎಳೆದಿದ್ದಾರೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ ಎಂದು ಸದ್ಯ ತಿಳಿದು ಬಂದಿದ್ದು, ರಾಕೇಶ್ ಪೂಜಾರಿ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್ ಪೇಟೆ ಅವರು ಖಚಿತಪಡಿಸಿದ್ದಾರೆ. ಸಾವಿಗೆ ಅವರ ಆಪ್ತ ಬಳಗ ಶಾಕ್ ಆಗಿದೆ. ರಾಕೇಶ್ ಪೂಜಾರಿ ಅವರ ಸಾವಿಗೆ ಅಭಿಮಾನಿಗಳು ಹಾಗೂ ಆಪ್ತರು ಕಂಬನಿ ಮಿಡಿಯುತ್ತಿದ್ದಾರೆ.
ರಾಕೇಶ್ ಅವರು ತಮ್ಮ ನಟನಾ ಪಯಣವನ್ನು ಚೈತನ್ಯ ಕಲಾವಿದರು ನಾಟಕ ತಂಡದಿಂದ ಆರಂಭಿಸಿದ್ದು, 20214 ರಲ್ಲಿ ಖಾಸಗಿ ಚಾನೆಲ್ ನಲ್ಲಿ ಕಡ್ಲೆ ಬಜಿಲ್ ಎಂಬ ತುಳು ರಿಯಾಲಿಟಿ ಶೋ ಮೂಲ ಅನೇಕ ಜನರ ಮನ ಗೆದಿದ್ದರು. ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದ್ದರು. ಸುಮಾರು 150 ಆಡಿಪನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ಕಾಮಿಡಿ ಕಿಲಾಡಿಗಳು ಸೀಸನ್ 2 ಶೋ ಗೆ ರನ್ನರ್ ಆಪ್ ಆಗಿದ್ದು, ಕಾಮಿಕಿ ಕಿಲಾಡಿಗಳು ಸೀಸನ್ 3 ವಿಜೇತರಾಗಿದ್ದರು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications