ಕೆಟ್ಟದಾಗಿ ನೋಡ್ತಿದ್ದ, ನಾನು ಸತ್ತರೆ ಅವನೇ ಕಾರಣ: ಹಾಸ್ಯನಟ ಅಪ್ಪಣ್ಣ ಮೇಲೂ ಗಂಭೀರ ಆರೋಪ
ನಟ ಹಾಗೂ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಅವರ ಮೇಲೆ ಕಿರುತೆರೆ ನಟಿಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದಾರೆ. ಇದು ರಾಜ್ಯದಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಕೇಸ್ ವಿಚಾರಣೆ ಚುರುಕುಗೊಂಡಿದ್ದು, ಮನು ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿದೆ. ಇದೀಗ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮತ್ತೊಬ್ಬ ಹಾಸ್ಯ ಕಲಾವಿದನ ಮೇಲೂ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಆಡಿಯೋವೊಂದು ವೈರಲ್ ಆಗಿದ್ದು, ಹಾಸ್ಯ ನಟ ಅಪ್ಪಣ್ಣ ರಾಮದುರ್ಗ ಮೇಲೂ ಆ ಸಂತ್ರಸ್ತೆ ಆರೋಪ ಮಾಡಿದ್ದಾರೆ.
ವೈರಲ್ ಆಗಿರುವ ಆಡಿಯೋದಲ್ಲಿ ಹಾಸ್ಯ ನಟ ಅಪ್ಪಣ್ಣ ರಾಮದುರ್ಗ ಅವರ ಹೆಸರು ಕೂಡ ಕೇಳಿಬಂದಿದೆ. ʼಕಾಮಿಡಿ ಕಿಲಾಡಿಗಳು ಶೋನಲ್ಲಿ ಅಪ್ಪಣ್ಣ ರಾಮದುರ್ಗ ಅಂತ ಇದಾನೆ, ಅವರನು ಕಾಮಿಡಿ ಕಿಲಾಡಿಗಳು ಸೀಸನ್ ಎರಡರಿಂದಲೂ ನನಗೆ ಸಿಕ್ಕಾಪಟ್ಟೆ ಟಾರ್ಚರ್ ಕೊಡ್ತಿದ್ದಾನೆ. ಶೋಗಳಿಗೆ ಕರೆದುಕೊಂಡು ಹೋಗಿ ಕೆಟ್ಟ ದೃಷ್ಟಿಯಲ್ಲಿ ನೋಡೋದು ಎಲ್ಲ ಮಾಡ್ತಿದ್ದ. ತುಂಬಾ ದಿನಗಳವರೆಗೆ ಅವುಗಳಿಂದ ನಾನು ತಪ್ಪಿಸಿಕೊಂಡು ಬರುತ್ತಿದ್ದೆ. ಇತ್ತೀಚೆಗೆ ಅವನ ಕಾಟ ಹೆಚ್ಚಾಗಿದ್ದು, ನನಗೆ ಅವನ ಕಿರುಕುಳ ತಪ್ಪಿಲ್ಲʼ ಎಂದು ಯುವತಿ ಆರೋಪ ಮಾಡಿದ್ದಾರೆ.

ʼಶೋಗೆ ಬಾ ಎಂದು ತುಂಬಾ ದಿನೇ ದಿನೇ ಕಾಟ ಕೊಡುತ್ತಲೇ ಇದ್ದಾನೆ. ಇದರಿಂದಾಗಿ ನನ್ನ ಬಾಯ್ಫ್ರೆಂಡ್ ಜೊತೆಗೂ ಬಿರುಕು ಮೂಡಿದೆ. ಕೊನೆಗೆ ಬ್ರೇಕ್ಅಪ್ ಕೂಡ ಆಗಿದ್ದು, ಇದಕ್ಕೆ ಕಾರಣ ಅಪ್ಪಣ್ಣ ಎಂದು ಯುವತಿಯೊಬ್ಬರು ಆರೋಪ ಮಾಡಿರುವುದು ಆಡಿಯೋದಲ್ಲಿದೆ. ನಾನೇನಾದ್ರೂ ಒಂದು ವೇಳೆ ಸೂಸೈಡ್ ಮಾಡಿಕೊಂಡು ಸತ್ತರೆ ಅದಕ್ಕೆ ಕಾರಣವೂ ಅಪ್ಪಣ್ಣ, ಅವನನ್ನ ಸುಮ್ಮನೆ ಬಿಡಬೇಡಿ. ಈ ಆಡಿಯೋ ಎಲ್ಲರಿಗೂ ಶೇರ್ ಮಾಡಿʼ ಎಂದೂ ಕಣ್ಣೀರು ಹಾಕಿದ್ದಾರೆ.
ಸ್ಪಷ್ಟನೆ ಕೊಟ್ಟ ಅಪ್ಪಣ್ಣ
ಆಡಿಯೋ ವೈರಲ್ ಆಗಿರುವ ಬಗ್ಗೆ ಹಾಸ್ಯ ಕಲಾವಿದ ಅಪ್ಪಣ್ಣ ರಾಮದುರ್ಗ ಸ್ಪಷ್ಟನೆ ನೀಡಿದ್ದಾರೆ. ಸಂತ್ರಸ್ತೆ ಮಾಡಿರುವ ಆರೋಪ ಸುಳ್ಳು, ಅವರಿಬ್ಬರ ಜಗಳದಲ್ಲಿ ನನ್ನ ಹೆಸರು ತರುತ್ತಿದ್ದಾರೆ. ಇದು ಒಂದೂವರೆ ವರ್ಷದ ಹಿಂದಿನ ಹಳೆಯ ಆಡಿಯೋ. ನನ್ನ ಜೊತೆ ಶೋ ಮಾಡಬಾರದು ಎಂದು ಮನು ಮಾಡಿಸಿರುವ ಆಡಿಯೋ ಇದು. ಇದರ ಬಗ್ಗೆ ಸಂತ್ರಸ್ತೆ ನನ್ನ ಬಳಿ ಹೇಳಿಕೊಂಡಿದ್ರು. ನಮ್ಮನ್ನು ದೂರ ಇಡಲು ಮನು ಮಾಡಿಸಿರುವ ಆಡಿಯೋ ಇದು. ನಾನು ಆಕೆಗೆ ಯಾವುದೇ ಕಿರುಕುಳ ನೀಡಿಲ್ಲ. ಸಂತ್ರಸ್ತೆಯ ಬಳಿಯ ಇದರ ಬಗ್ಗೆ ಮಾಹಿತಿ ಸಿಗುತ್ತೆ ಎಂದು ಅಪ್ಪಣ್ಣ ಸ್ಪಷ್ಟನೆ ನೀಡಿದ್ದಾರೆ.

ಅತ್ಯಾಚಾರ ಕೇಸ್ನಲ್ಲಿ ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದ ತನಿಖೆ ಜೋರಾಗಿರುವ ನಡುವೆಯೇ ಅಪ್ಪಣ್ಣ ವಿರುದ್ಧವೂ ಈ ಆರೋಪ ಕೇಳಿಬಂದಿದೆ. ಅಪ್ಪಣ್ಣ ಅವರು ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ಡಿಯರ್ ಸತ್ಯ, ರಾಮಾರ್ಜುನ, ಪೈಲ್ವಾನ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಅವರ ಮೇಲೂ ಗಂಭೀರ ಆರೋಪಗಳು ಸಂಚಲನ ಸೃಷ್ಟಿಸಿವೆ.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications