ಪರಪ್ಪನ ಅಗ್ರಹಾರ ಜೈಲಿಗೆ ನಟ ಮಡೆನೂರು ಮನು, ಎಷ್ಟು ದಿನ ನ್ಯಾಯಾಂಗ ಬಂಧನ?
ಕಿರುತೆರೆ ನಟಿ ಮೇಲೆ ಅತ್ಯಾಚಾರ, ಕೊಲೆ ಬೆದರಿಕೆ, ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಪೊಲೀಸರ ಬಂಧನದಲ್ಲಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಅವರಿಗೆ ಮತ್ತೆ ಜೈಲೇ ಗತಿಯಾಗಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ನಟಿ ನೀಡಿದ್ದ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮನು ಅವರನ್ನು ಅರೆಸ್ಟ್ ಮಾಡಿದ್ದರು. ಬಳಿಕ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.
ಎರಡು ದಿನ ಪೊಲೀಸ್ ಕಸ್ಟಡಿ ನೀಡಿದ್ದರಿಂದ ಮನು ಅವರ ಮೇಲಿನ ಆರೋಪ ಸಂಬಂಧ ಸ್ಥಳ ಮಹಜರು, ಹೇಳಿಕೆ ದಾಖಲು ಸೇರಿದಂತೆ ತನಿಖೆ ನಡೆಸಿದ್ದರು. ಇಂದು ಪೊಲೀಸ್ ಕಸ್ಟಡಿ ಮುಗಿದ ಕಾರಣ ಮತ್ತೆ ಅವರನ್ನು 3ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಮಡೆನೂರು ಮನುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ 14 ದಿನ ಮನು ಪರಪ್ಪನ ಅಗ್ರಹಾರ ಜೈಲಿನಲ್ಲಿರಲಿದ್ದಾರೆ.

ಖ್ಯಾತ ನಟ-ನಟಿಯರಿಗೂ ಕಂಟಕ
ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ 31 ತಿಂಗಳ ವಾಟ್ಸಾಪ್ ಮೆಸೇಜ್ಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಸಂತ್ರಸ್ತೆ ಹಾಗೂ ಮನು ನಡುವೆ ನಡೆದಿದ್ದ ಸಾವಿರಾರು ವಾಟ್ಸಾಪ್ ಮೆಸೇಜ್ಗಳನ್ನು ಕಲೆಹಾಕಿ ಪರಿಶೀಲನೆ ನಡೆಸುತ್ತಿದ್ದಾರೆ. ಸಂತ್ರಸ್ತೆ ಹಾಗೂ ಆರೋಪಿ ಮನು ನಡುವಿನ ಹಲವು ಆಡಿಯೋ ಹಾಗೂ ವಿಡಿಯೊ ಸಂಭಾಷಣೆ ನಡೆದಿದ್ದು, ಇದರಲ್ಲಿ ಖ್ಯಾತ ಕಿರುತೆರೆ, ಹಿರಿತೆರೆಯ ನಟ-ನಟಿಯರ ಹೆಸರುಗಳು ಕೂಡ ಪ್ರಸ್ತಾಪವಾಗಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಆ ನಟ-ನಟಿಯರಿಗೂ ಪೊಲೀಸರು ನೋಟಿಸ್ ನೀಡಿ ಹೇಳಿಕೆ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ. ಸಂತ್ರಸ್ತೆ ನಟಿ ಹಾಗೂ ಮನು ಬಳಿ ಇದ್ದ ಎರಡು ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳಿಸಿದ್ದಾರೆ.
ಸಂತ್ರಸ್ತೆ ಈ ಹಿಂದೆ ಮನು ನನ್ನ ಮೇಲೆ ಅತ್ಯಾಚಾರ ಮಾಡಿ ಅದನ್ನು ಮೊಬೈಲ್ನಲ್ಲಿ ವಿಡಿಯೊ ರೆಕಾರ್ಡ್ ಮಾಡಿದ್ದ ಎಂದು ಆರೋಪ ಮಾಡಿದ್ದರು. ಆದರೆ ಮನು ಬಳಿ ಇದ್ದ ಮೊಬೈಲ್ಗಳಲ್ಲಿ ಆ ರೀತಿಯ ಯಾವುದೇ ವಿಡಿಯೋಗಳು ಇಲ್ಲ ಎಂದು ತನಿಖೆ ವೇಳೆ ತಿಳಿದುಬಂದಿದೆ. ಒಂದು ವೇಳೆ ಕೇಸ್ ದಾಖಲಾದ ಬೆನ್ನಲ್ಲೇ ಆ ವಿಡಿಯೊಗಳನ್ನು ಡಿಲೀಟ್ ಮಾಡಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಸದ್ಯ ಈ ಮೊಬೈಲ್ಗಳನ್ನು ಪೊಲೀಸರು ಎಫ್ಎಸ್ಎಲ್ಗೆ ಕಳುಹಿಸಿ ತನಿಖೆ ಚುರುಕುಗೊಳಿಸಿದ್ದಾರೆ.
ಆಡಿಯೋಗಳು ವೈರಲ್
ಮಡೆನೂರು ಮನುಗೆ ಸಂಬಂಧಿಸಿದ್ದು ಎನ್ನಲಾದ ಹಲವು ಆಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಸಂತ್ರಸ್ತೆ ನಟಿಯನ್ನು ಮದುವೆ ಆಗಿರುವುದಾಗಿ ಮನು ಹೇಳಿದ್ದಾರೆ ಎನ್ನಲಾದ ಆಡಿಯೋ ಕೂಡ ಸದ್ದು ಮಾಡುತ್ತಿದೆ. ಅದರಲ್ಲಿ ನಾನು ಅವಳನ್ನು ಮದುವೆ ಆಗಿದ್ದೀನಿ. ಎಲ್ಲಿ ಬೇಕಾದ್ರೂ ಈ ಮಾತು ಹೇಳ್ತೀನಿ, ಆಕೆ ನನ್ನ ಹೆಂಡತಿ, ಏನು ಬೇಕಾದ್ರೂ ಮಾಡ್ತೀನಿ, ನಮ್ಮಿಬ್ಬರ ವಿಚಾರದಲ್ಲಿ ಯಾರೂ ಮಧ್ಯಪ್ರವೇಶಿಸುವ ಅಗತ್ಯ ಇಲ್ಲ ಎಂದು ಹೇಳಲಾಗಿದೆ. ಮತ್ತೊಂದೆಡೆ ಸ್ಯಾಂಡಲ್ವುಡ್ ನಟರ ಬಗ್ಗೆ ಮನು ಕೆಟ್ಟದಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕೂಡ ಹರಿದಾಡುತ್ತಿದ್ದು, ಶಿವಣ್ಣ, ದರ್ಶನ್, ಧ್ರುವ ಸರ್ಜಾ ಅವರ ಹೆಸರು ಉಲ್ಲೇಖಿಸಲಾಗಿದೆ. ಈ ಸಂಬಂಧ ಮನು ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications