ರಮೇಶ್ ಅರವಿಂದ್, ಅನುಶ್ರೀ ಸೇರಿ ಹಲವರ ವಿರುದ್ಧ ದೂರು: ಕಾರಣ ಇಲ್ಲಿದೆ!
ಬೆಂಗಳೂರು, ಏಪ್ರಿಲ್ 29: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಬಳಸಲಾದ ಪದದಿಂದ ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆ ರಿಯಾಲಿಟಿ ಶೋವೊಂದರ ವಿರುದ್ಧ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರ ನಿರ್ಮಾಪಕ, ನಿರ್ದೇಶಕ, ತೀರ್ಪುಗಾರರಾದ ನಟ ರಮೇಶ್ ಅರವಿಂದ್, ನಟಿ ಪ್ರೇಮಾ, ಸ್ಪರ್ಧಿ, ನಿರೂಪಕಿ ಅನುಶ್ರೀ ಹಾಗೂ ಇತರರ ವಿರುದ್ಧ ಚಿಕ್ಕನಾಯಕನಹಳ್ಳಿ ಪಟ್ಟಣದ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚಿಗೆ ಆರಂಭವಾದ ಈ ರಿಯಾಲಿಟಿ ಶೋ ತನ್ನ ವಿಶೇಷತೆಗಳಿಂದ ಪ್ರೇಕ್ಷಕರ ಮನಗೆದ್ದಿದ್ದು, ಟಿಆರ್ಪಿಯಲ್ಲೂ ಉತ್ತಮ ಸ್ಥಾನ ಪಡೆದುಕೊಂಡು ಮುನ್ನುಗ್ಗುತ್ತಿದೆ. ಪ್ರತಿ ವೀಕೆಂಡ್ನಲ್ಲಿ ಪ್ರಸಾರವಾಗುವ ಈ ಶೋನಲ್ಲಿ ಈ ಬಾರಿ ಫ್ಯಾಮಿಲಿ ರೌಂಡ್ ಆಯೋಜನೆ ಮಾಡಲಾಗಿತ್ತು. ಸ್ಪರ್ಧಿಗಳು ತಮ್ಮ ಕುಟುಂಬದ ಸದಸ್ಯರೊಂದಿಗೆ ನಟಿಸಬೇಕಿತ್ತು. ಈ ವಾರಾಂತ್ಯ ಪ್ರಸಾರವಾದ ಈ ಸಂಚಿಕೆ ಕೂಡ ಪ್ರೇಕ್ಷಕರಿಗೆ ಇಷ್ಟವಾಗಿದೆ. ಆದರೆ ಸ್ಪರ್ಧಿಯೊಬ್ಬರು ಬಳಸಿದ ಒಂದು ಪದದಿಂದ ಶ್ರಮಿಕರಿಗೆ ನೋವಾಗಿದೆ.
ಈ ರಿಯಾಲಿಟಿ ಶೋ ಸ್ಪರ್ಧಿಯೊಬ್ಬರು ದೃಶ್ಯವೊಂದರ ನಟನೆಯಲ್ಲಿ 'ಮ್ಯಾಕನಿಕ್ನನ್ನು ಮದುವೆಯಾದರೆ ಗ್ರೀಸ್ ತಿಂದುಕೊಂಡು ಬದುಕಲಾಗದು...' ಎಂಬ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿದೆ. ಈ ಮಾತಿನಿಂದ ವೃತ್ತಿಪರ ಮೆಕ್ಯಾನಿಕ್ ಸಮುದಾಯಕ್ಕೆ ನೋವಾಗಿದೆ. ಮೆಕ್ಯಾನಿಕ್ ಸಮುದಾಯ ಶ್ರಮಪಟ್ಟು ಕೆಲಸ ಮಾಡುತ್ತಾರೆ. ಹಗಲಿರುಳು ಬೆವರು ಸುರಿಸಿ ದುಡಿಯುತ್ತಾರೆ. ಹೀಗಾಗಿ ಶ್ರಮಿಕ ವರ್ಗದ ದುಡಿಮೆಯ ಬಗ್ಗೆ, ವೃತ್ತಿಯ ಬಗ್ಗೆ ಹೀಗೆ ತಿರಸ್ಕಾರದ, ಕುಹಕದ ಮತ್ತು ನಿಂದನಾತ್ಮಕ ಮಾತುಗಳು ಸರಿಯಲ್ಲ.
ಈ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದ ಫ್ರೆಂಡ್ಸ್ ದ್ವಿಚಕ್ರ ವಾಹನ ವರ್ಕ್ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ರಿಯಾಲಿಟಿ ಶೋನ ಸ್ಪರ್ಧಿ ಹಾಗೂ ಆಕೆಯ ಮಾತುಗಳಿಗೆ ಉತ್ತೇಜನ ನೀಡಿದ ನಿರೂಪಕಿ, ನಿರ್ದೇಶಕರು, ನಿರ್ಮಾಪಕರು, ತೀರ್ಪುಗಾರರು ಹಾಗೂ ವಾಹಿನಿಯ ವಿರುದ್ಧ ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದೂರು ದಾಖಲಿಸಿದ್ದಾರೆ. ಶ್ರಮಿಕರನ್ನು ಅವಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ವರಿಷ್ಠಾಧಿಕಾರಿಗೆ ಪಟ್ಟಣದ ಠಾಣೆಯ ಮೂಲಕ ದೂರು ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ












Click it and Unblock the Notifications