ಲಕ್ಷ್ಮೀ ನಿವಾಸ ಧಾರಾವಾಹಿ ನಟನ ಬದುಕಲ್ಲಿ ಬಿರುಗಾಳಿ: ಅಷ್ಟಕ್ಕೂ ಆಗಿದ್ದೇನು?
ಬೆಂಗಳೂರು, ಏಪ್ರಿಲ್ 01: ಇತ್ತೀಚಿನ ದಿನಗಳಲ್ಲಿ ಒಂದೇ ಕ್ಷೇತ್ರದಲ್ಲಿ ಇದ್ದವರು ಪ್ರೀತಿಸಿ ಮದುವೆಯಾಗುವುದು ತೀರಾ ಸಾಮಾನ್ಯವಾಗಿದೆ. ತಮ್ಮ ಕೆಲಸದ ಬಗ್ಗೆ ಪರಸ್ಪರ ತಿಳಿದಿರುತ್ತದೆ. ಕೆಲಸದ ಒತ್ತಡ ಹಾಗೂ ಆಗು ಹೋಗುಗಳ ಬಗ್ಗೆ ಅರ್ಥವಾಗುತ್ತದೆ. ಹೀಗಿದ್ದಾಗ ಸಂಸಾರದಲ್ಲಿ ಹೊಂದಾಣಿಕೆ ಇರುತ್ತದೆ ಎನ್ನುವ ಲೆಕ್ಕಾಚಾರದಲ್ಲಿ ಮದುವೆಯಾಗುತ್ತಾರೆ. ಅದರಲ್ಲೂ ಮನೋರಂಜನಾ ಕ್ಷೇತ್ರದಲ್ಲಿ ಅನೇಕ ನಟ-ನಟಿಯರು ಪ್ರೀತಿಸಿ ಮದುವೆಯಾಗಿದ್ದಾರೆ. ಇದೇ ರೀತಿ ಪ್ರೀತಿಸಿ ಮದುವೆಯಾದ ನಟ-ನಟಿಯ ಜೀವನದಲ್ಲಿ ಇದೀಗ ಬಿರುಗಾಳಿ ಎದ್ದಿದೆ.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಅಭಿನಯಿಸಿದ್ದ ನಟ ಮಿಥುನ್ ಕುಮಾರ್ ಎನ್ನುವವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ನಟನ ಪತ್ನಿಯೂ ಕೂಡ ನಟಿಯಾಗಿದ್ದು, ಇದೀಗ ವಿರುದ್ಧ ತಮ್ಮ ಪತಿಯ ವಿರುದ್ಧ ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.

ಇತ್ತ ಪತ್ನಿ ದೂರು ದಾಖಲಿಸುತ್ತಿದ್ದಂತೆ ನಟ ಮಿಥುನ್ ಕುಮಾರ್ ಕೂಡ ಪತ್ನಿಯ ವಿರುದ್ಧ ಪ್ರತಿದೂರು ದಾಖಲಿಸಿದ್ದು, ಪತ್ನಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ, ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನನ್ನ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ನಟ ಮಿಥುನ್ ಕುಮಾರ್ ಆರೋಪಿಸಿದ್ದಾರೆ.
ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಅಭಿನಯಿಸಿದ್ದ ನಟ ಮಿಥುನ್ ಕುಮಾರ್ 2024ರ ಅಕ್ಟೋಬರ್ 7ರಂದು ಧಾರಾವಾಹಿ ನಟಿಯ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆರು ತಿಂಗಳು ಸುಂದರ ದಾಂಪತ್ಯ ನಡೆಸಿದ್ದ ಈ ಜೋಡಿಯ ಮಧ್ಯೆ ಬಳಿಕ ಕಲಹ ಆರಂಭವಾಗಿದೆ. ನನ್ನ ಗಂಡ ಕೆಲ ದಿನಗಳು ಮಾತ್ರ ಚೆನ್ನಾಗಿ ನೋಡಿಕೊಂಡಿದ್ದರು. ಬಾಡಿಗೆ ಮನೆ ಸಹ ಮಾಡಿದ್ದರು. ಅದಾಗ ಮೇಲೆ ಅವರ ವರ್ತನೆಯಲ್ಲಿ ಬದಲಾವಣೆಯಾಗಿದೆ.

ಗೆಳೆಯ ಆಸ್ಪತ್ರೆಯಲ್ಲಿದ್ದಾನೆ ಎಂದು ಮನೆಯಿಂದ ಹೋದವರು ಒಂದು ವಾರ ಕಳೆದರೂ ಮನೆಗೆ ಬಂದಿಲ್ಲ. ನನ್ನ ಫೋನ್ ಕರೆಗಳನ್ನು ಎತ್ತುವುದಿಲ್ಲ. ಹೀಗೆ ಅನೇಕ ಸಮಯ ದೂಡಿದ್ದಾರೆ. ಬಳಿಕ ವಿಚಾರಿಸದಾಗ ಅವರಿಗೆ ಬೇರೆ ಹುಡುಗಿಯ ಜೊತೆ ಸಂಬಂಧ ಇರುವ ಬಗ್ಗೆ ನನಗೆ ತಿಳಿದು ಬಂದಿದೆ. ಅದನ್ನು ಪ್ರಶ್ನಿಸಿದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ವಿಪರೀತ ಕುಡಿದು ಬಂದು ಮನಬಂದಂತೆ ಹಲ್ಲೆ ಮಾಡಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನನಗೆ ಮಾನಸಿಕ ಹಿಂಸೆ ನೀಡುತ್ತಾರೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.
ನಟ ಮಿಥುನ್ ಕುಮಾರ್ ಪ್ರತಿದೂರಿನಲ್ಲಿ ಏನಿದೆ?
ನನ್ನ ಪತ್ನಿಗೆ ನನ್ನ ಮೇಲೆ ಅನುಮಾನ. ನನ್ನ ಸಹ ನಟಿಯ ಜೊತೆ ಸಂಬಂಧ ಇದೆ ಎಂದು ಅನುಮಾನ ಪಡುತ್ತಾರೆ. ನನಗೂ ಮತ್ತು ಆ ಸಹನಟಿಗೂ ಯಾವುದೇ ಸಂಬಂಧ ಇಲ್ಲ. ನಾವಿಬ್ಬರು ಸಹದ್ಯೋಗಿಗಳಾಗಿ ನಮ್ಮ ಪಾಡಿಗೆ ಕೆಲಸ ಮಾಡಿಕೊಂಡಿದ್ದೇವೆ. ಆದರೆ ನನ್ನ ಪತ್ನಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾಳೆ. ಆಕೆಯಿಂದ ನನಗೆ ಮಾನಸಿಕೆ ಹಿಂಸೆಯಾಗಿದೆ ಎಂದು ನಟ ಆರೋಪಿಸಿದ್ದಾರೆ. ಈ ಪ್ರಕರಣ ಸಂಬಂಧ ವಿಜಯನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications