ಲಕ್ಷ್ಮೀ ನಿವಾಸ ಧಾರಾವಾಹಿ ನಟನ ಬದುಕಲ್ಲಿ ಬಿರುಗಾಳಿ: ಅಷ್ಟಕ್ಕೂ ಆಗಿದ್ದೇನು?
ಬೆಂಗಳೂರು, ಏಪ್ರಿಲ್ 01: ಇತ್ತೀಚಿನ ದಿನಗಳಲ್ಲಿ ಒಂದೇ ಕ್ಷೇತ್ರದಲ್ಲಿ ಇದ್ದವರು ಪ್ರೀತಿಸಿ ಮದುವೆಯಾಗುವುದು ತೀರಾ ಸಾಮಾನ್ಯವಾಗಿದೆ. ತಮ್ಮ ಕೆಲಸದ ಬಗ್ಗೆ ಪರಸ್ಪರ ತಿಳಿದಿರುತ್ತದೆ. ಕೆಲಸದ ಒತ್ತಡ ಹಾಗೂ ಆಗು ಹೋಗುಗಳ ಬಗ್ಗೆ ಅರ್ಥವಾಗುತ್ತದೆ. ಹೀಗಿದ್ದಾಗ ಸಂಸಾರದಲ್ಲಿ ಹೊಂದಾಣಿಕೆ ಇರುತ್ತದೆ ಎನ್ನುವ ಲೆಕ್ಕಾಚಾರದಲ್ಲಿ ಮದುವೆಯಾಗುತ್ತಾರೆ. ಅದರಲ್ಲೂ ಮನೋರಂಜನಾ ಕ್ಷೇತ್ರದಲ್ಲಿ ಅನೇಕ ನಟ-ನಟಿಯರು ಪ್ರೀತಿಸಿ ಮದುವೆಯಾಗಿದ್ದಾರೆ. ಇದೇ ರೀತಿ ಪ್ರೀತಿಸಿ ಮದುವೆಯಾದ ನಟ-ನಟಿಯ ಜೀವನದಲ್ಲಿ ಇದೀಗ ಬಿರುಗಾಳಿ ಎದ್ದಿದೆ.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಅಭಿನಯಿಸಿದ್ದ ನಟ ಮಿಥುನ್ ಕುಮಾರ್ ಎನ್ನುವವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ನಟನ ಪತ್ನಿಯೂ ಕೂಡ ನಟಿಯಾಗಿದ್ದು, ಇದೀಗ ವಿರುದ್ಧ ತಮ್ಮ ಪತಿಯ ವಿರುದ್ಧ ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.

ಇತ್ತ ಪತ್ನಿ ದೂರು ದಾಖಲಿಸುತ್ತಿದ್ದಂತೆ ನಟ ಮಿಥುನ್ ಕುಮಾರ್ ಕೂಡ ಪತ್ನಿಯ ವಿರುದ್ಧ ಪ್ರತಿದೂರು ದಾಖಲಿಸಿದ್ದು, ಪತ್ನಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ, ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನನ್ನ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ನಟ ಮಿಥುನ್ ಕುಮಾರ್ ಆರೋಪಿಸಿದ್ದಾರೆ.
ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಅಭಿನಯಿಸಿದ್ದ ನಟ ಮಿಥುನ್ ಕುಮಾರ್ 2024ರ ಅಕ್ಟೋಬರ್ 7ರಂದು ಧಾರಾವಾಹಿ ನಟಿಯ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆರು ತಿಂಗಳು ಸುಂದರ ದಾಂಪತ್ಯ ನಡೆಸಿದ್ದ ಈ ಜೋಡಿಯ ಮಧ್ಯೆ ಬಳಿಕ ಕಲಹ ಆರಂಭವಾಗಿದೆ. ನನ್ನ ಗಂಡ ಕೆಲ ದಿನಗಳು ಮಾತ್ರ ಚೆನ್ನಾಗಿ ನೋಡಿಕೊಂಡಿದ್ದರು. ಬಾಡಿಗೆ ಮನೆ ಸಹ ಮಾಡಿದ್ದರು. ಅದಾಗ ಮೇಲೆ ಅವರ ವರ್ತನೆಯಲ್ಲಿ ಬದಲಾವಣೆಯಾಗಿದೆ.

ಗೆಳೆಯ ಆಸ್ಪತ್ರೆಯಲ್ಲಿದ್ದಾನೆ ಎಂದು ಮನೆಯಿಂದ ಹೋದವರು ಒಂದು ವಾರ ಕಳೆದರೂ ಮನೆಗೆ ಬಂದಿಲ್ಲ. ನನ್ನ ಫೋನ್ ಕರೆಗಳನ್ನು ಎತ್ತುವುದಿಲ್ಲ. ಹೀಗೆ ಅನೇಕ ಸಮಯ ದೂಡಿದ್ದಾರೆ. ಬಳಿಕ ವಿಚಾರಿಸದಾಗ ಅವರಿಗೆ ಬೇರೆ ಹುಡುಗಿಯ ಜೊತೆ ಸಂಬಂಧ ಇರುವ ಬಗ್ಗೆ ನನಗೆ ತಿಳಿದು ಬಂದಿದೆ. ಅದನ್ನು ಪ್ರಶ್ನಿಸಿದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ವಿಪರೀತ ಕುಡಿದು ಬಂದು ಮನಬಂದಂತೆ ಹಲ್ಲೆ ಮಾಡಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನನಗೆ ಮಾನಸಿಕ ಹಿಂಸೆ ನೀಡುತ್ತಾರೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.
ನಟ ಮಿಥುನ್ ಕುಮಾರ್ ಪ್ರತಿದೂರಿನಲ್ಲಿ ಏನಿದೆ?
ನನ್ನ ಪತ್ನಿಗೆ ನನ್ನ ಮೇಲೆ ಅನುಮಾನ. ನನ್ನ ಸಹ ನಟಿಯ ಜೊತೆ ಸಂಬಂಧ ಇದೆ ಎಂದು ಅನುಮಾನ ಪಡುತ್ತಾರೆ. ನನಗೂ ಮತ್ತು ಆ ಸಹನಟಿಗೂ ಯಾವುದೇ ಸಂಬಂಧ ಇಲ್ಲ. ನಾವಿಬ್ಬರು ಸಹದ್ಯೋಗಿಗಳಾಗಿ ನಮ್ಮ ಪಾಡಿಗೆ ಕೆಲಸ ಮಾಡಿಕೊಂಡಿದ್ದೇವೆ. ಆದರೆ ನನ್ನ ಪತ್ನಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾಳೆ. ಆಕೆಯಿಂದ ನನಗೆ ಮಾನಸಿಕೆ ಹಿಂಸೆಯಾಗಿದೆ ಎಂದು ನಟ ಆರೋಪಿಸಿದ್ದಾರೆ. ಈ ಪ್ರಕರಣ ಸಂಬಂಧ ವಿಜಯನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications