ಸೋನು ನಿಗಮ್ ವಿರುದ್ಧ ದೂರು ದಾಖಲು
ಬೆಂಗಳೂರು ಮೇ 3: ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಕನ್ನಡ ಹಾಡು ಹಾಡುವಂತೆ ಕೇಳಿದ್ದಕ್ಕೆ ಗಾಯಕ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಇದೀಗ ಸೋನು ನಿಗಮ್ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಕನ್ನಡ ಹಾಡಿನಿಂದ ಹಾಗೂ ಕರ್ನಾಟಕದಿಂದ ಅವರನ್ನು ದೂರ ಇಡುವಂತೆ ನಿರ್ಮಾಪಕರು ಹಾಗೂ ಕನ್ನಡ ಪರ ಹೋರಾಟಗಾರರು ಒತ್ತಾಯ ಹೇರುತ್ತಿದ್ದಾರೆ. ಜೊತೆಗೆ ಸೋನು ನಿಗಮ್ ವಿರುದ್ಧ ದೂರು ಕೂಡ ದಾಖಲಿಸಲಾಗಿದೆ.
ಹೌದು ಕನ್ನಡಿಗರ ಕನ್ನಡ ಪ್ರೀತಿಯನ್ನು ಭಯೋತ್ಪಾದನೆಗೆ ಗಾಯಕ ಸೋನು ನಿಗಮ್ ಹೋಲಿಸಿದ್ದು ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಇವರ ವಿವಾದಾತ್ಮಕ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡಪರ ಸಂಘಟನೆಗಳು ಸೋನು ನಿಗಂ ವಿರುದ್ಧ ದೂರು ನೀಡಿವೆ.

ಕರವೇ ನಾರಾಯಣಗೌಡ ಬಣದ ಸದಸ್ಯರು ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದಕತೆಗೆ ಹೋಲಿಸಿದ ಸೋನು ನಿಗಮ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಜೊತೆಗೆ ಸೋನು ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೂ ದೂರು ನೀಡಲು ನಿರ್ಧರಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರು, 'ಸೋನು ನಿಗಮ್ ಕನ್ನಡದಿಂದ ಬ್ಯಾನ್ ಆಗಬೇಕು. ಅವರು ಒಬ್ಬ ಸಾಂಸ್ಕೃತಿಕ ಭಯೋತ್ಪಾದಕ, ಕನ್ನಡಿಗರನ್ನು ಉಗ್ರರಿಗೆ ಹೋಲಿಸುತ್ತಾನಾ? ಸೋನು ಈಗಲೇ ಕನ್ನಡಿಗರಿಗೆ ಕ್ಷಮೆ ಕೇಳಬೇಕು. ಇಲ್ಲವಾದರೆ ಸೋನು ಕನ್ನಡ ಹಾಡು ಹಾಡುವಂತಿಲ್ಲ. ಅವರ ಮೇಲೆ ಕನ್ನಡ ಚಲನಚಿತ್ರ ಮಂಡಳಿ ನಿಷೇಧ ಹೇರಬೇಕು ಎಂದು ನಿರ್ಮಾಪಕ ಸಂಘಕ್ಕೆ ಆಗ್ರಹಿಸುತ್ತೇನೆ' ಎಂದಿದ್ದಾರೆ.

ಕನ್ನಡ ಹಾಡು ಕೇಳಿದಾಗ ಹಾಡಬೇಕು ಇಲ್ಲವಾದಲ್ಲಿ ತೆಪ್ಪಗಿರಬೇಕು. ಬಾಲಿವುಡ್ ಕೈಬಿಟ್ಟಾಗ ಸೋನು ನಿಗಮ್ ಅವರನ್ನು ಕೈ ಹಿಡಿದು ಮೇಲಕ್ಕೆ ಎತ್ತಿದ್ದು ಕನ್ನಡದವರು. ನಮ್ಮ ಹಣ, ಅನ್ನ ತಿಂದು ನಮಗೇ ಮಾತನಾಡ್ತಾಯಾ? ಕನ್ನಡಿಗರ ಸ್ವಾಭಿಮಾನ ಕೆಣಕುವ ಕೆಲಸ ಮಾಡ್ತೀಯಾ? ಭಯೋತ್ಪಾದಕರ ರೀತಿ ಮಾಡಿದರೆ ನಾವು ಸುಮ್ಮನಿರೋದಿಲ್ಲ. ಎಸ್ಪಿಬಿ ಅಂಥಹ ಶ್ರೇಷ್ಠ ಗಾಯಕರು ಕನ್ನಡದ ಬಗ್ಗೆ ಎಷ್ಟೊಂದು ಗೌರವ ಇಟ್ಟುಕೊಂಡಿದ್ದಾರೆ. ಆದರೆ ನೀವು ಈ ರೀತಿ ನಡೆದುಕೊಂಡಿರುವುದು ಸರಿಯಲ್ಲ. ಕನ್ನಡಿಗರಿಗೆ ಕೂಡಲೇ ಕ್ಷಮೆ ಕೇಳಬೇಕು' ಎಂದು ನಾರಾಯಣಗೌಡ ಆಗ್ರಹಿಸಿದ್ದಾರೆ.
ಆಗಿದ್ದೇನು?
ಇತ್ತೀಚೆಗೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುವೊಂದರಲ್ಲಿ ಸೋನು ನಿಗಮ್ ಅವರ ಗಾಯನಗೋಷ್ಠಿ ಆಯೋಜನೆ ಮಾಡಲಾಗಿತ್ತು. ಸೋನು ನಿಗಮ್ ಹಿಂದಿ ಹಾಡು ಹಾಡುವಾಗ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಕೇಳಲು ಕನ್ನಡ ಕನ್ನಡ ಎಂದು ಕೂಗಿದ್ದಾನೆ. ಆಗ 'ಕನ್ನಡ ಕನ್ನಡ ಇದರಿಂದಲೇ ಪಹಲ್ಗಾಮ್ ದಾಳಿ ಆಗಿರುವುದು' ಎಂದು ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಕೆ ಮಾಡಿದ್ದಾರೆ ಸೋನು ನಿಗಮ್. ಸೋನು ನಿಗಮ್ ಈ ಹೇಳಿಕೆ ಇದೀಗ ಭಾರೀ ಆಕ್ರೋಶಕ್ಕೆ ಗುರಿಯಾಗಿದ್ದು ತೀವ್ರ ಖಂಡನೆ ವ್ಯಕ್ತವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications