ರಾಜಧಾನಿ ಬೆಂಗಳೂರಿನಲ್ಲಿ ‘ಸಂವಿಧಾನ ಜಾಗೃತಿ ಜಾಥ’
ಬೆಂಗಳೂರು: ಗಣರಾಜ್ಯೋತ್ಸವ ಸಂಭ್ರಮಕ್ಕೆ ಇನ್ನೇನು ಒಂದೇ ಒಂದು ದಿನ ಬಾಕಿ ಇದ್ದು, ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಲ್ಲೂ ಕನ್ನಡಿಗರ ರಾಜಧಾನಿ ಬೆಂಗಳೂರು ಇದೀಗ 75ನೇ ಗಣರಾಜ್ಯೋತ್ಸವಕ್ಕೆ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ವೇಳೆ ಹಲವು ಪ್ರಮುಖ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದ್ದು, ಇದೇ ರೀತಿ 'ಸಂವಿಧಾನ ಜಾಗೃತಿ ಜಾಥ'ವೂ ನಡೆಯಲಿದೆ.
ಭಾರತ ಸಂವಿಧಾನ ಅಂಗೀಕರಿಸಿ 75ನೇ ವರ್ಷದ ಆಚರಣೆಯ ಪ್ರಯುಕ್ತ "ಸಂವಿಧಾನ ಜಾಗೃತಿ ಜಾಥ" ಕಾರ್ಯಕ್ರಮ ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಸಂವಿಧಾನ ಪೀಠಿಕೆ ಸ್ಥಬ್ಧ ಚಿತ್ರದ ಮೆರವಣಿಗೆ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗೆ, ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಜನವರಿ 26 2024 ರಿಂದ ಫೆಬ್ರವರಿ 23 2024 ರವರೆಗೆ ಸಂಚರಿಸಲಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಅಸ್ಪೃಶ್ಯತೆ ನಿವಾರಣೆ ಬಗ್ಗೆ ಅರಿವು
ಮತ್ತೊಂದು ಕಡೆ ಅಸ್ಪೃಶ್ಯತೆ ನಿವಾರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ "ಸಮಾನತೆಯ ಕಡೆಗೆ" ಎಂಬ ಕನ್ನಡ ಚಲನಚಿತ್ರವನ್ನ ಜನವರಿ 26 ರಂದು ಗಣರಾಜ್ಯೋತ್ಸವ ದಿನ ಚಂದನ ವಾಹಿನಿಯಲ್ಲಿ ಮಧ್ಯಾಹ್ನ 2.30 ರಿಂದ 4.30ರ ತನಕ ಪ್ರಸಾರ ಮಾಡಲಾಗುವುದು. ಇದೀಗ ಈ ಬಗ್ಗೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ
ಮತ್ತೊಂದು ಕಡೆ ಬೆಂಗಳೂರಿನಲ್ಲಿ, ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ. ಜನವರಿ 26 ರಂದು ಬೆಳಗ್ಗೆ 8.58 ಕ್ಕೆ ರಾಜ್ಯಪಾಲರು ಮೈದಾನದಕ್ಕೆ ಆಗಮಿಸಲಿದ್ದು, 9 ಗಂಟೆ ವೇಳೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣ ಬಳಿಕ ಮಾನ್ಯ ರಾಜ್ಯಪಾಲರು ತೆರೆದ ಜೀಪಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ನಾಡಿನ ಜನತೆಗೆ ಗಣರಾಜ್ಯೋತ್ಸವ ಸಂದೇಶವನ್ನ ಆ ನಂತರ ನೀಡಲಿದ್ದಾರೆ. ಪಂಥ ಸಂಚಲನದಲ್ಲಿ ಪೊಲೀಸ್ & ಸ್ಕೌಟ್ಸ್, ಗೈಡ್ಸ್, ಎನ್ಸಿಸಿ, ಸೇವಾದಳ ಹಾಗೇ ವಿವಿಧ ಶಾಲೆಗಳ ಮಕ್ಕಳನ್ನ ಒಳಗೊಂಡಂತೆ ಕವಾಯತು, ಬ್ಯಾಂಡ್ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1150 ಜನ ಭಾಗವಹಿಸಲಿದ್ದಾರೆ.
ರಾಜಧಾನಿ ಬೆಂಗಳೂರಿಗೆ ಭಾರಿ ಭದ್ರತೆ
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಯಾವುದೆ ರೀತಿ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲ ವಿಭಾಗದಿಂದ 9 ಡಿಸಿಪಿ, 16 ಎಸಿಪಿ, 46 ಪಿಐ, 109 ಪಿಎಸ್ಐ, 77 ಎಎಸ್ಐ, 594 ಎಚ್ಸಿ/ಪಿಸಿ, 87 ಮಹಿಳಾ ಸಿಬ್ಬಂದಿ ಜೊತೆ 184 ಸಾದಾ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿ, 56 ಕ್ಯಾಮರಾ ಸಿಬ್ಬಂದಿಯ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಸಂಚಾರ ನಿರ್ವಹಣೆಗೆ 04 ಡಿಸಿಪಿ, 06 ಎಸಿಪಿ, 21 ಪಿಐ, 33 ಪಿಎಸ್ ಐ & 97-ಎಎಸ್ಐ & 414 ಎಚ್ಸಿ/ಪಿಸಿ ಒಟ್ಟಾರೆ 575 ಅಧಿಕಾರಿ ಹಾಗೂ ಸಿಬ್ಬಂದಿ ಬಂದೋಬಸ್ತ್ ಕರ್ತವ್ಯಕ್ಕೋಸ್ಕರ ನಿಯೋಜಿಸಲಾಗಿದೆ. ಮೈದಾನ ಬಂದೋಬಸ್ತ್ ಕರ್ತವ್ಯಕ್ಕಾಗಿ 10 ಕೆಎಸ್ಆರ್ಪಿ / ಸಿಎಆರ್ ತುಕಡಿ, 2 ಅಗ್ನಿ ಶಾಮಕ ವಾಹನಗಳು, 2 ಅಂಬುಲೆನ್ಸ್, 4- ಖಾಲಿ ವಾಹನಗಳು, 1 ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಡಿ ಸ್ವಾಟ್, 1 ಆರ್ಐಪಿ ಭದ್ರತೆಗೆ ನಿಯೋಜಿಸಲಾಗಿದೆ. ಮೈದಾನ ಸುತ್ತ ಭದ್ರತೆ ಮತ್ತು ಸುರಕ್ಷತೆಗೆ 100 ಸಿಸಿ ಕ್ಯಾಮೆರಾ ವ್ಯವಸ್ಥೆ ಮತ್ತೆ 3 ಬ್ಯಾಗೇಜ್ ಸ್ಕ್ಯಾನರ್, 20 ಡಿಎಫ್ಎಂಡಿ, 40 ಎಚ್ಎಚ್ಎಂಡಿ ಅಳವಡಿಸಲಾಗಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications