ನಟ ದರ್ಶನ್ಗೆ ಜೂನ್ ವೇಳೆಗೆ ಜಾಮೀನು, 2029ರೊಳಗೆ ಕೇಸ್ನಿಂದ ಖುಲಾಸೆ: ಖ್ಯಾತ ಜ್ಯೋತಿಷಿ ಭವಿಷ್ಯ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ಸಿಗುವ ವಿಚಾರದ ಬಗ್ಗೆ ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ (Prashanth Kini) ಅಚ್ಚರಿ ಭವಿಷ್ಯ ನುಡಿದಿದ್ದಾರೆ. ದರ್ಶನ್ ಅವರಿಗೆ ಯಾವ ತಿಂಗಳಲ್ಲಿ ಜಾಮೀನು ಸಿಗಲಿದೆ? ಹಾಗೂ ಈ ಕೇಸ್ನಿಂದ ಯಾವಾಗ ಹೊರಬರುತ್ತಾರೆ? ಎಂಬ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ದರ್ಶನ್ ಅಭಿಮಾನಿಗಳಲ್ಲಷ್ಟೇ ಅಲ್ಲ, ಸಿನಿ ಹಾಗೂ ರಾಜಕೀಯ ವಲಯದಲ್ಲಿಯೂ ಈ ಭವಿಷ್ಯ ಕುತೂಹಲಕ್ಕೆ ಕಾರಣವಾಗಿದೆ.
ಪ್ರಶಾಂತ್ ಕಿಣಿ ಅವರ ಭವಿಷ್ಯದ ಪ್ರಕಾರ, ದರ್ಶನ್ ಜೀವನದಲ್ಲಿ ನಡೆಯುತ್ತಿರುವ ಈ ಕಠಿಣ ಹಂತ ದೀರ್ಘ ಕಾಲ ಮುಂದುವರಿಯುವುದಿಲ್ಲ. ಈಗಿನ ಸಂಕಷ್ಟಗಳು ಅವರ ಜೀವನದಲ್ಲಿ ದೊಡ್ಡ ತಿರುವು ತರಲಿದ್ದು, ಮುಂದೆ ನಿಧಾನವಾಗಿ ಸಕಾರಾತ್ಮಕ ಬೆಳವಣಿಗೆಗಳು ಕಾಣಿಸಿಕೊಳ್ಳಲಿವೆ ಎಂದು ಅವರು ಸೂಚಿಸಿದ್ದಾರೆ.

ಕೇಸ್ನಿಂದ ದರ್ಶನ್ಗೆ ಮುಕ್ತಿ
ಪ್ರಶಾಂತ್ ಕಿಣಿ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡು, ʼʼಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾನೂನು ಹೋರಾಟದ ಭವಿಷ್ಯದ ಬಗ್ಗೆ ಸ್ಪಷ್ಟವಾಗಿ ಭವಿಷ್ಯ ನುಡಿದಿದ್ದಾರೆ. 2026ರ ಜೂನ್ ತಿಂಗಳೊಳಗೆ ದರ್ಶನ್ ಅವರಿಗೆ ಜಾಮೀನು ಸಿಗಲಿದೆ. 2029ರೊಳಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಸಂಪೂರ್ಣವಾಗಿ ಖುಲಾಸೆಯಾಗಲಿದ್ದಾರೆʼʼ ಎಂದು ಭವಿಷ್ಯ ನುಡಿದಿದ್ದಾರೆ.
ಈ ಭವಿಷ್ಯ ಹೊರಬಂದ ಬಳಿಕ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷೆಯ ಮಾತುಗಳನ್ನು ಹಂಚಿಕೊಳ್ಳುತ್ತಿದ್ದಾರೆ. "ಜೈಲಿನಿಂದ ಹೊರಬಂದು ಮತ್ತೆ ದರ್ಶನ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಬೇಕು. "ದೇವರು, ಕಾಲ ಮತ್ತು ನ್ಯಾಯ ಒಮ್ಮೆ ದರ್ಶನ್ ಪರ ನಿಲ್ಲುತ್ತವೆ" ಎಂದು ಅಭಿಮಾನಿಗಳ ಕಾಮೆಂಟ್ಗಳು ಹೆಚ್ಚಾಗಿವೆ.
ಇನ್ನೊಂದೆಡೆ, ಜ್ಯೋತಿಷ್ಯದ ಭವಿಷ್ಯವನ್ನು ಎಲ್ಲರೂ ಒಪ್ಪಿಕೊಳ್ಳುವುದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ. ಕೆಲವರು, "ಇದು ಕಾನೂನು ವಿಚಾರ, ಜ್ಯೋತಿಷ್ಯದಿಂದಲ್ಲ, ನ್ಯಾಯಾಲಯದಿಂದಲೇ ನಿರ್ಧಾರವಾಗಬೇಕು"ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಆದರೂ, ಪ್ರಶಾಂತ್ ಕಿಣಿ ಅವರ ಹಿಂದಿನ ಕೆಲವು ಭವಿಷ್ಯಗಳು ನಿಜವಾಗಿದ್ದವು ಎಂಬ ಕಾರಣಕ್ಕೆ, ಈ ಭವಿಷ್ಯಕ್ಕೂ ಹೆಚ್ಚಿನ ಗಮನ ಸೆಳೆಯುತ್ತಿದೆ.
ಪ್ರಸ್ತುತ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ಮತ್ತು ಕಾನೂನು ಪ್ರಕ್ರಿಯೆಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಅದೇ ಸಮಯದಲ್ಲಿ ಪ್ರಶಾಂತ್ ಕಿಣಿ ಅವರ ಈ ಅಚ್ಚರಿ ಭವಿಷ್ಯವು ದರ್ಶನ್ ಪ್ರಕರಣಕ್ಕೆ ಮತ್ತೊಂದು ಆಯಾಮವನ್ನು ನೀಡಿದೆ. ಜಾಮೀನು, ಖುಲಾಸೆ ಇವೆಲ್ಲವೂ ಯಾವಾಗ, ಹೇಗೆ ನಡೆಯಲಿದೆ? ಎಂಬುದು ಕಾನೂನಿನ ಕೈಯಲ್ಲಿದ್ದರೂ, ಈ ಭವಿಷ್ಯ ದರ್ಶನ್ ಅಭಿಮಾನಿಗಳಿಗೆ ಕನಿಷ್ಠ ಮಟ್ಟದ ಭರವಸೆ ಮತ್ತು ಧೈರ್ಯ ನೀಡಿರುವುದಂತೂ ಸತ್ಯ.
Challenging Star Darshan will get bail within june 2026...
— Prashanth Kini (@AstroPrashanth9) January 19, 2026
Get acquitted from the case within 2029... https://t.co/LCVRrxFEU2
ಗಿಲ್ಲಿ ಬಿಗ್ಬಾಸ್ ಗೆಲ್ಲಲ್ಲ ಎಂದಿದ್ದ ಜ್ಯೋತಿಷಿ
ಇದೇ ಪ್ರಶಾಂತ್ ಕಿಣಿ ಅವರು ಗಿಲ್ಲಿ ನಟ ಬಿಗ್ಬಾಸ್ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದಿದ್ದರು. ಈ ಬಗ್ಗೆಯೂ ಭಾರೀ ಚರ್ಚೆಯಾಗಿತ್ತು. ಆದರೆ ಅಂತಿಮವಾಗಿ ಗಿಲ್ಲಿ ಬಿಗ್ಬಾಸ್ ವಿನ್ನರ್ ಆಗಿ ಹೊರಹೊಮ್ಮಿದರು. ಹೀಗಾಗಿ ದರ್ಶನ್ ಅವರ ಬಗ್ಗೆ ನುಡಿದಿರುವ ಭವಿಷ್ಯ ಕೂಡ ಎಷ್ಟರಮಟ್ಟಿಗೆ ನಿಜವಾಗುತ್ತೆ? ಎಂಬುದು ಸದ್ಯದಲ್ಲೇ ತಿಳಿಯಲಿದೆ.
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ












Click it and Unblock the Notifications