"ನೆಮ್ಮದಿಯಾಗಿ ಊಟ ಮಾಡಿ" ನಾನ್ವೆಜ್ ಹೋಟೆಲ್ ತೆರೆದ ನಟ ದರ್ಶನ್ ಸೋದರಳಿಯ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ತೂಗುದೀಪ ಮತ್ತೆ ಜೈಲುವಾಸಕ್ಕೆ ಮರಳಿದ್ದಾರೆ. ದರ್ಶನ್ ಅವರ ಇದ್ರೆ ನೆಮ್ದಿಯಾಗಿ ಇರ್ಬೇಕ್ ಅನ್ನೋ ದರ್ಶನ್ ಅವರ ಡೈಲಾಗ್ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಇದೇ ಕಾರಣಕ್ಕೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾದಲ್ಲೂ ಇದ್ರೆ ನೆಮ್ದಿಯಾಗ್ ಇರ್ಬೇಕ್ ಅನ್ನೋ ಸಾಂಗ್ ಕೂಡ ಕಂಪೋಸ್ ಆಗಿತ್ತು. ಆದರೆ ಈ ಹಾಡು ರಿಲೀಸ್ ಆಗುವ ಹೊತ್ತಿಗೆ ಜಾಮೀನು ರದ್ದಾಗಿ ದರ್ಶನ್ ಮತ್ತೆ ಜೈಲು ಸೇರಿದ್ದರು. ನಂತರ ಚಿತ್ರತಂಡ ಹಾಡು ರಿಲೀಸ್ ಕೂಡ ಮಾಡಿತ್ತು. ಇದೀಗ ದರ್ಶನ್ ಅವರ ಅಕ್ಕನ ಮಗ ಚಂದನ್ ಕುಮಾರ್ ಇದೇ ಹೆಸರಿನಲ್ಲಿ ನಾನ್ವೆಜ್ ಹೋಟೆಲ್ ತೆರೆದಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಮೈಸೂರು ದಸರಾದಂತೆಯೇ ಅಲ್ಲಿ ನಡೆಯುವ ದಸರಾ ಆಹಾರ ಮೇಳ ಕೂಡ ಸಖತ್ ಫೇಮಸ್. ಬೇರೆ ಬೇರೆ ಊರುಗಳಿಂದ ಈ ಆಹಾರ ಮೇಳದಲ್ಲಿ ತಿಂದು ತೇಗಲು ಜನ ಇಲ್ಲಿಗೆ ಬರುತ್ತಾರೆ. ಈ ಬಾರಿ ದರ್ಶನ್ ಅವರ ಅಳಿಯ ಚಂದು ಕೂಡ ಆಹಾರ ಮೇಳದಲ್ಲಿ ನಾನ್ವೆಜ್ ಹೋಟೆಲ್ ತೆರೆದಿದ್ದಾರೆ. ಇದಕ್ಕೆ "ನೆಮ್ಮದಿಯಾಗಿ ಊಟ ಮಾಡಿ" ಎಂದು ಹೆಸರಿಡುವ ಮೂಲಕ ಗಮನ ಸೆಳೆದಿದ್ದಾರೆ. ದರ್ಶನ್ ಅವರ ತಾಯಿ ಮೀನಾ ಅವರು ಈ ಮಳಿಗೆಗೆ ಭೇಟಿ ನೀಡಿರುವ ವಿಡಿಯೋ ವೈರಲ್ ಆಗಿದೆ.

ಮೈಸೂರಿನ ಆಹಾರ ಮೇಳದಲ್ಲಿ ಭಾರೀ ಜನ ಸೇರುವ ಹಿನ್ನೆಲೆ ಚಂದನ್ ಕುಮಾರ್ ಕೂಡ ಫೇಮಸ್ ಡೈಲಾಗ್ ಅನ್ನೇ ತಮ್ಮ ಮಳಿಗೆಗೆ ಇಟ್ಟಿದ್ದಾರೆ. ಈಗಾಗಲೇ ಇದ್ರೆ ನೆಮ್ದಿಯಾಗ್ ಇರ್ಬೇಕು ಅನ್ನೋದು ದರ್ಶನ್ ಅಭಿಮಾನಿಗಳ ಬಾಯಲ್ಲಿ ಹರಿದಾಡುತ್ತಿದ್ದು, ಆಹಾರ ಮೇಳಕ್ಕೆ ಬರುವವರನ್ನು ಸೆಳೆಯಲು ಈ ವಿಭಿನ್ನ ಪ್ರಯತ್ನ ಮಾಡಿದ್ದಾರೆ. ದರ್ಶನ್ ಅವರ ಅಕ್ಕ ದಿವ್ಯ ಅವರ ಮಗ ಚಂದನ್ ಹೋಟೆಲ್ ತೆರೆದಿದ್ದು, ಮೀನಾ ತೂಗುದೀಪ ಕೂಡ ಸಾಥ್ ನೀಡಿದ್ದಾರೆ.
ಹೋಟೆಲ್ನಲ್ಲಿ ಏನೆಲ್ಲ ಸಿಗುತ್ತೆ?
ಚಂದು ತೆರೆದಿರುವ ಮಳಿಗೆಯಲ್ಲಿ ಚಿಕನ್ ಪಲಾವ್, ಮಟನ್ ಪಲಾವ್, ಮಟನ್ ಚಾಪ್ಸ್, ಚಿಕನ್ ಫ್ರೈ, ಚಿಕನ್ ಕಬಾಬ್ ಸೇರಿದಂತೆ ಬಾಯಲ್ಲಿ ನೀರೂರಿಸುವ ನಾನ್ವೆಜ್ ಮೆನು ಇಡಲಾಗಿದೆ. ಈ ವಿಡಿಯೋ ಇನ್ಸ್ಟಾಗ್ರಾಂ ಹಾಗೂ ಯುಟ್ಯೂಬ್ನಲ್ಲಿ ವೈರಲ್ ಆಗಿದ್ದು, ದರ್ಶನ್ ಅವರ ಅಳಿಯನ ಅಂಗಡಿ ಎಂದು ಜನ ಮುಗಿಬೀಳುತ್ತಿದ್ದಾರೆ. ಚಂದನ್ ಜೊತೆ ಸೆಲ್ಫಿ ಕೂಡ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.
ದರ್ಶನ್ ಅವರು ಕೊಲೆ ಕೇಸ್ನಲ್ಲಿ ಅರೆಸ್ಟ್ ಆದಾಗ ಜೈಲಿಗೆ ಚಂದನ್ ಕುಮಾರ್ ಅವರೇ ಬಟ್ಟೆ ಹಾಗು ಇತರೆ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಿ ಕೊಡುತ್ತಿದ್ದರು. ಅಲ್ಲದೆ ದರ್ಶನ್ ಅವರ ಕುಟುಂಬದಿಂದ ಮುಂದಿನ ತಲೆಮಾರಿನವರಾದ ಚಂದನ್ ಹಾಗೂ ಪುತ್ರ ವಿನೀಶ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಲು ದರ್ಶನ್ ಮುಂದಾಗಿದ್ದಾರೆ. ದರ್ಶನ್ ಬಳಿಕ ಚಂದನ್ ಚಿತ್ರರಂಗಕ್ಕೆ ಎಂಟ್ರಿ ಕೊಡುವುದು ಪಕ್ಕಾ ಎನ್ನಲಾಗುತ್ತಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications