Actor Niranjan: ದರ್ಶನ್ ತಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ನಿರಂಜನ್ ಮೇಲೆ ಬಾರ್ನಲ್ಲಿ ಬಿಯರ್ ಬಾಟಲಿಗಳಿಂದ ಹಲ್ಲೆ
ಸ್ಯಾಂಡಲ್ವುಡ್ ನಟ ನಿರಂಜನ್ ಅವರ ಮೇಲೆ ಬೆಂಗಳೂರಿನ ಬಾರ್ವೊಂದರಲ್ಲಿ ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ನಟ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾರ್ಚ್ 28ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ "ಒಡೆಯ" ಸಿನಿಮಾದಲ್ಲಿ ಅವರ ತಮ್ಮನ ಪಾತ್ರದಲ್ಲಿ ನಿರಂಜನ್ ನಟಿಸಿದ್ದರು.
ಘಟನೆಯ ವಿವರ
ನಟ ನಿರಂಜನ್ ಅವರು ತಮ್ಮ ಸ್ನೇಹಿತನ ಮನೆಯಿಂದ ವಾಪಸ್ ಬರುತ್ತಿದ್ದಾಗ, ಉತ್ತರಹಳ್ಳಿ ರಸ್ತೆಯ ಸಮೀಪವಿರುವ ಬಾರ್ವೊಂದರಲ್ಲಿ ನೀರು ಕುಡಿಯಲು ನಿಂತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ನಟನಿಗೆ ತಳ್ಳಿದ್ದಾರೆ ಎನ್ನಲಾಗಿದೆ. ಇದನ್ನು ನಿರಂಜನ್ ಅವರು ಪ್ರಶ್ನಿಸಿದಾಗ, ಆ ವ್ಯಕ್ತಿಯು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಗಲಾಟೆಯ ಕುರಿತು ನಿರಂಜನ್ ಅವರು ಬಾರ್ ಮಾಲೀಕರಿಗೆ ದೂರು ನೀಡುತ್ತಿದ್ದಂತೆ, ಸ್ಥಳಕ್ಕೆ ಕಾರಿನಲ್ಲಿ ಬಂದ ನಾಲ್ವರು ವ್ಯಕ್ತಿಗಳ ಗುಂಪು ನಟನೊಂದಿಗೆ ಜಗಳ ತೆಗೆದಿದೆ.

ಸಿನಿಮಾ ನಟನಾದ್ರೆ ನಮಗೇನು?
ವಾಗ್ವಾದ ವಿಕೋಪಕ್ಕೆ ತಿರುಗಿದಾಗ, ಇಬ್ಬರು ವ್ಯಕ್ತಿಗಳು ಬಿಯರ್ ಬಾಟಲಿಗಳಿಂದ ನಿರಂಜನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ ನಿರಂಜನ್ ಅವರ ತಲೆಗೆ ಪೆಟ್ಟಾಗಿದ್ದು, ರಕ್ತಸ್ರಾವವಾಗಿದೆ. ಉಳಿದವರು ಕೈಗಳಿಂದ ನಟನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆರಂಭದಲ್ಲಿ ಸಣ್ಣದಾಗಿ ಶುರುವಾದ ಈ ಗಲಾಟೆ ನಂತರ ವಿಕೋಪಕ್ಕೆ ತಿರುಗಿದೆ.
ಅಪರಿಚಿತ ವ್ಯಕ್ತಿಗಳು ನಿರಂಜನ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, "ನೀನು ಸಿನಿಮಾ ನಟನಾಗಿದ್ದರೆ ನಮಗೇನು? ಇದು ನಮ್ಮ ಏರಿಯಾ" ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ನಡುವೆ ಇನ್ನೋವಾ ಕಾರಿನಲ್ಲಿ ಬಂದ ಮೂರ್ನಾಲ್ಕು ವ್ಯಕ್ತಿಗಳ ಗುಂಪು ನಟನ ಮೇಲೆ ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಿದೆ. ಈ ದಾಳಿಯಲ್ಲಿ ನಿರಂಜನ್ ಅವರ ತಲೆಗೆ ಗಾಯವಾಗಿದ್ದು, ಅವರ ವಾಚ್ ಕೂಡ ಕಳೆದುಹೋಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ನಿರಂಜನ್ ಅವರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಈಗಾಗಲೆ ಎಫ್ಐಆರ್ (FIR) ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಕೈಗೊಂಡಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಗಲಾಟೆಯೋ ಅಥವಾ ಪೂರ್ವನಿಯೋಜಿತ ಕೃತ್ಯವೋ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈಗಾಗಲೇ ಆರೋಪಿಗಳನ್ನು ಗುರುತಿಸಿರುವ ಪೊಲೀಸರು, ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಯಾರು ಈ ನಿರಂಜನ್?
ನಿರಂಜನ್ ಅವರು 'ಜಲ್ಸಾ' ಚಿತ್ರದ ಮೂಲಕ ನಾಯಕನಾಗಿ ಪರಿಚಯವಾದವರು. ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಒಡೆಯ' ಚಿತ್ರದಲ್ಲಿ ದರ್ಶನ್ ಅವರ ನಾಲ್ವರು ಸಹೋದರರಲ್ಲಿ ಒಬ್ಬರಾಗಿ ನಟಿಸಿ ಗಮನ ಸೆಳೆದಿದ್ದರು. ಇತ್ತೀಚೆಗೆ 'ಬಡವ ರಾಸ್ಕಲ್' ಮತ್ತು 'ಹೆಡ್ ಬುಷ್' ಚಿತ್ರಗಳಲ್ಲೂ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಚಿತ್ರರಂಗದಲ್ಲಿ ಉದಯೋನ್ಮುಖ ನಟರಾಗಿ ಗುರುತಿಸಿಕೊಂಡಿದ್ದಾರೆ.
-
Viral Video: ತಮಿಳುನಾಡು ಚುನಾವಣೆ: ಹಸಿ ಸೊಪ್ಪು, ತರಕಾರಿ ತಿನ್ನುತ್ತಾ ಮತಯಾಚಿಸಿದ ಸ್ವತಂತ್ರ ಅಭ್ಯರ್ಥಿ ನಟ ಮನ್ಸೂರ್ ಅಲಿ ಖಾನ್ -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications