ಚಟಕ್ಕೆ ದಾಸ ದರ್ಶನ್! ಸಿಗರೇಟ್ ಕೊಡುವಂತೆ ಪೊಲೀಸರಿಗೆ ಅಂಗಲಾಚುತ್ತಿರುವ ನಟ
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬಂಧಿತನಾಗಿರುವ ನಟ ದರ್ಶನ್ ಚಟಕ್ಕೂ ಕೂಡ ದಾಸನಾಗಿದ್ದಾರಾ ಎನ್ನುವ ಅನುಮಾನ ಕಾಡುತ್ತಿದೆ. ಮಂಗಳವಾರ ಬೆಳಗ್ಗೆಯೇ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಂಜೆ ಕೋರ್ಟ್ಗೆ ಹಾಜರುಪಡಿಸಿದ್ದರು, ಕೋರ್ಟ್ ದರ್ಶನ್, ಪವಿತ್ರಾಗೌಡ ಸೇರಿ 13 ಮಂದಿಯನ್ನು 6 ದಿನ ಪೊಲೀಸರ ವಶಕ್ಕೆ ಒಪ್ಪಿಸಿದೆ.
ಒಂದು ದಿನ ಪೊಲಿಸ್ ಠಾಣೆಯಲ್ಲಿ ಕಳೆಯುತ್ತಿದ್ದಂತೆ ದರ್ಶನ್ಗೆ ಸಿಗರೇಟ್ ಸೇದುವ ಬಯಕೆ ಹೆಚ್ಚಾಗಿದ್ದು ಸಿಗರೇಟ್ ಕೊಡುವಂತೆ ಪೊಲೀಸರಿಗೆ ಪರಿಪರಿಯಾಗಿ ಮನವಿ ಮಾಡಿದ್ದಾರೆ.

ನನ್ನ ಕೈ ನಡುಗುತ್ತಿದೆ ದಯವಿಟ್ಟು ಒಂದು ಸಿಗರೇಟ್ ಸೇದಲು ಅವಕಾಶ ಕೊಡಿ ಎಂದು ಪೊಲೀಸರ ಬಳಿ ಕೇಳಿಕೊಂಡಿರುವುದಾಗಿ ವರದಿಯಾಗಿದೆ. ಅನೇಕ ಸಂದರ್ಶನಗಳಲ್ಲಿ ದರ್ಶನ್ ನಾನು ಬೆಳಗ್ಗೆ ಎದ್ದ ತಕ್ಷಣವೇ ಸಿಗರೇಟ್ ಸೇದುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಆದರೆ ಅವರಿಗೆ ಈ ಮಟ್ಟದಲ್ಲಿ ಸಿಗರೇಟ್ ಸೇದುವ ಚಟ ಎನ್ನುವುದು ಜಗಜ್ಜಾಹೀರಾಗಿದೆ.
ಸ್ಥಳ ಮಹಜರು ಮಾಡಿದ ಪೊಲೀಸರು
ರೇಣುಕಾಸ್ವಾಮಿ ಕೊಲೆಯಾದ ಪಟ್ಟಣಗೆರೆ ಶೆಡ್ನಲ್ಲಿ ಪೊಲೀಸರು ಇಂದು ಸ್ಥಳ ಮಹಜರು ಮಾಡಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಸ್ಥಳಕ್ಕೆ ಕರೆತಂದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.
ಬೆಳಗ್ಗೆ ದರ್ಶನ್, ಪವಿತ್ರಾ ಗೌಡರನ್ನು ಹೊರತುಪಡಿಸಿ ಇತರೆ ಆರೋಪಿಗಳನ್ನು ಕರೆ ತಂದು ರೇಣುಕಾಸ್ವಾಮಿ ಶವ ಎಸೆದಿದ್ದ ಸುಮನಹಳ್ಳಿ ಸಮೀಪದ ಅನುಗ್ರಹ ಅಪಾರ್ಟ್ಮೆಂಟ್ ಬಳಿ ಇರುವ ಮೋರಿ ಬಳಿ ಸ್ಥಳ ಮಹಜರು ನಡೆಸಲಾಗಿತ್ತು.
ಮಧ್ಯಾಹ್ನದ ಬಳಿಕ ಪಟ್ಟಣಗೆರೆಯಲ್ಲಿರುವ ಶೆಡ್ಗೆ ದರ್ಶನ್, ಪವಿತ್ರಾ ಗೌಡರನ್ನು ಕರೆತಂದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಸ್ಥಳ ಮಹಜರು ಮಾಡಿದರು.
ರಾತ್ರಿ ಬಿರಿಯಾನಿ ಊಟ
ಮಂಗಳವಾರ ಬೆಳಗ್ಗೆ ದರ್ಶನ್ ಸೇರಿ 13 ಆರೋಪಿಗಳನ್ನು ಬಂಧಿಸಿದ್ದು, ರಾತ್ರಿ ಎಲ್ಲಾ ಆರೋಪಿಗಳಿಗೆ ಬಿರಿಯಾನಿ ತರಿಸಿಕೊಡಲಾಗಿದೆ. ಕೊಲೆ ಆರೋಪಿಗಳಿಗೆ ಬಿರಿಯಾನಿ ತಂದುಕೊಟ್ಟಿರುವುದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications