Darshan Thoogudeepa: ಬಳ್ಳಾರಿ ಜೈಲಿನಲ್ಲಿ ದರ್ಶನ್ ತೂಗುದೀಪ್ಗೆ ಕಾಟ ಕೊಡುತ್ತಿರುವ ರೇಣುಕಾಸ್ವಾಮಿ ಆತ್ಮ...
ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಲ್ಲಿ ಒಬ್ಬರೇ ಒದ್ದಾಡುತ್ತಿದ್ದು, ಹೈ ಸೆಕ್ಯುರಿಟಿ ಅಂದ್ರೆ ಅತಿಹೆಚ್ಚು ಭದ್ರತೆ ಇರುವ ಜೈಲಿನ ಕೋಣೆಯಲ್ಲಿ ಪರದಾಡುತ್ತಿದ್ದಾರೆ. ಹೀಗಿದ್ದಾಗಲೇ ನಟ ದರ್ಶನ್ ತೂಗುದೀಪ್ ಅವರು ರಾತ್ರಿ ಸಮಯದಲ್ಲಿ ಜೋರಾಗಿ ಕೂಗುತ್ತಿದ್ದು, ಅವರಿಗೆ ಜೈಲಿನ ಕೋಣೆಯಲ್ಲಿ ಸಮಸ್ಯೆ ಆಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಈಗ, ಬಳ್ಳಾರಿ ಜೈಲಲ್ಲಿ ದರ್ಶನ್ ತೂಗುದೀಪ್ಗೆ ಕಾಟ ಕೊಡುತ್ತಿರುವ ರೇಣುಕಾಸ್ವಾಮಿ ಆತ್ಮ...
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ತೂಗುದೀಪ್ ಜೈಲು ಸೇರಿದ ಕಾರಣಕ್ಕೆ ಇದೀಗ ದರ್ಶನ್ ತೂಗುದೀಪ್ ಅವರ ಕುಟುಂಬಸ್ಥರಿಗೆ ತುಂಬಾ ನೋವಾಗಿದೆ. ಹೀಗಾಗಿ ಕಟುಂಬದ ಸದಸ್ಯರು ಪದೇ ಪದೇ ವಿಶೇಷ ಪೂಜೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಾಗೇ ನಟರಾದ ದರ್ಶನ್ ತೂಗುದೀಪ್ ಆದಷ್ಟು ಬೇಗ ಬಿಡುಗಡೆ ಆಗಲಿ ಎಂದು ಚಾಮುಂಡೇಶ್ವರಿ ದೇವಿಗೆ ಕೂಡ ಈ ಸಮಯದಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಆದಷ್ಟು ಬೇಗ ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಲಿ ಎಂಬುದು ಅವರ ಅಭಿಮಾನಿಗಳ ಆಶಯವಾಗಿದೆ. ಇಷ್ಟೆಲ್ಲದರ ನಡುವೆ ಬಳ್ಳಾರಿ ಜೈಲಿನಲ್ಲಿ ದರ್ಶನ್ ತೂಗುದೀಪ್ಗೆ ಕಾಟ ಕೊಡುತ್ತಿರುವ ರೇಣುಕಾಸ್ವಾಮಿ ಆತ್ಮ...

ದರ್ಶನ್ ತೂಗುದೀಪ್ಗೆ ರೇಣುಕಾಸ್ವಾಮಿ ಆತ್ಮದ ಕಾಟ?
ಇಂತಹ ಒಂದು ಸುದ್ದಿ ಇದೀಗ ಇಂಟರ್ನೆಟ್ನಲ್ಲಿ ಮಿಂಚಿನ ಸಂಚಲನ ಸೃಷ್ಟಿ ಮಾಡುತ್ತಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್ ತೂಗುದೀಪ್ ಅವರಿಗೆ ಒಂದು ಸಂಪೂರ್ಣವಾದ ಕೋಣೆಯನ್ನೇ ನೀಡಲಾಗಿದೆ. ಹೀಗಿದ್ದಾಗ ದರ್ಶನ್ ತೂಗುದೀಪ್ ಅವರು ಒಂಟಿಯಾಗಿ ಜೈಲಿನ ಕೋಣೆಯ ಒಳಗೆ ಪರದಾಡುತ್ತಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ ದರ್ಶನ್ ತೂಗುದೀಪ್ ಅವರ ಜೊತೆಗೆ ಸುಮಾರು 15 ರಿಂದ 20 ಜನರು ಇರುತ್ತಿದ್ದರು. ಆದ್ರೆ ಇದೇ ಸಮಯದಲ್ಲಿ ದರ್ಶನ್ ತೂಗುದೀಪ್ ಅವರ ಶತ್ರುಗಳು ಜೈಲಿನ ಒಳಗಿನ ಫೋಟೋ ವೈರಲ್ ಮಾಡಿ ದರ್ಶನ್ ತೂಗುದೀಪ್ ಪರಪ್ಪನ ಅಗ್ರಹಾರ ಜೈಲಲ್ಲಿ ಸಿಗರೇಟು ಸೇದಿ ಟೀ ಕುಡಿಯುತ್ತಿದ್ದ ಫೋಟೋ ಹೊರಗೆ ಬಿಟ್ಟರು. ಇದಾದ ನಂತರ ಬಳ್ಳಾರಿ ಜೈಲಿಗೆ ಹೋಗಿರುವ ನಟ ದರ್ಶನ್ ತೂಗುದೀಪ್ ಅವರಿಗೆ ರೇಣುಕಾಸ್ವಾಮಿ ಆತ್ಮದ ಕಾಟ ಶುರುವಾಗಿದೆ ಎಂಬ ಸುದ್ದಿ ಹಬ್ಬಿದೆ. ಸೋಷಿಯಲ್ ಮೀಡಿಯಾದಲ್ಲಿ ಇದರ ಬಗ್ಗೆ ಸುದ್ದಿ ಹಬ್ಬಿಸಲಾಗುತ್ತಿದೆ.
ರಾತ್ರಿ ನಿದ್ದೆ ಮಾಡದೆ ದರ್ಶನ್ ಒದ್ದಾಟ?
ದರ್ಶನ್ ತೂಗುದೀಪ್ ಅವರಿಗೆ ಬಳ್ಳಾರಿ ಜೈಲಿನಲ್ಲಿ ರೇಣುಕಾಸ್ವಾಮಿ ದೆವ್ವವಾಗಿ ಬಂದು, ರಾತ್ರಿ ವೇಳೆ ಕಾಟ ಕೊಡುತ್ತಿದ್ದಾನೆ ಎಂಬ ಸುದ್ದಿ ಹಬ್ಬಿದ್ದರೂ ಬಳ್ಳಾರಿ ಜೈಲಿನ ಸಿಬ್ಬಂದಿ ಆಗಲಿ, ಅಥವಾ ಬಳ್ಳಾರಿ ಜೈಲಿನ ಅಧಿಕಾರಿಗಳೇ ಆಗಲಿ ಸ್ಪಷ್ಟನೆ ನೀಡಿಲ್ಲ. ಆದರೆ ಜೈಲಿನಲ್ಲಿ ನಟ ದರ್ಶನ್ ತೂಗುದೀಪ್ ಅವರಿಗೆ ರಾತ್ರಿ ವೇಳೆ ಸಮಸ್ಯೆ ಆಗುತ್ತಿದ್ದು, ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ತೂಗುದೀಪ್ ಒದ್ದಾಡುತ್ತಿದ್ದಾರೆ ಎನ್ನಲಾಗಿದೆ. ಅದರಲ್ಲೂ ರಾತ್ರಿ ವೇಳೆಯಲ್ಲಿ ನಿದ್ದೆ ಮಾಡುತ್ತಿಲ್ಲ ಎನ್ನಲಾಗಿದ್ದು, ಹೀಗಾಗಿ ಅಭಿಮಾನಿಗಳಿಗೆ ಕೂಡ ಆತಂಕ ಶುರುವಾಗಿದೆ.
ದರ್ಶನ್ ತೂಗುದೀಪ್ ದೂರ.. ದೂರ..?
ಪವಿತ್ರಾ ಗೌಡ ಮತ್ತು ದರ್ಶನ್ ತೂಗುದೀಪ್ ನಡುವೆ 10 ವರ್ಷಗಳ ಸುದೀರ್ಘ ಸಂಬಂಧವಿದೆ. ದರ್ಶನ್ ತೂಗುದೀಪ್ಗೂ ಮೊದಲು ಪವಿತ್ರಾ ಗೌಡ ಒಂದು ಮದುವೆ ಕೂಡ ಆಗಿದ್ದರಂತೆ. ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ಸಂಬಂಧ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಡಿ-ಬಾಸ್ ನಟ ದರ್ಶನ್ ತೂಗುದೀಪ್ ವಿರುದ್ಧವೇ ಪವಿತ್ರಾ ಗೌಡ ಆರೋಪ ಮಾಡಿದ್ರು ಎಂಬ ಆರೋಪವು ಕೇಳಿಬಂತು. ಪೊಲೀಸರ ಎದುರು ದರ್ಶನ್ ತೂಗುದೀಪ್ ವಿರುದ್ಧ ಪವಿತ್ರಾ ಗೌಡ ಆರೋಪ ಮಾಡಿದ್ದರಂತೆ. ಹೀಗಾಗಿ ಇಬ್ಬರೂ ಈಗ ದೂರವಾಗಲು ಇಚ್ಛಿಸಿದ್ದಾರೆ ಎನ್ನಲಾಗಿದೆ.












Click it and Unblock the Notifications