Darshan Thoogudeepa: ಬಳ್ಳಾರಿ ಜೈಲಿನಲ್ಲಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಜಾಮೀನು...

ಬಳ್ಳಾರಿ ಜೈಲಿನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕಾರಣಕ್ಕೆ ದರ್ಶನ್ ತೂಗುದೀಪ್ ಅಭಿಮಾನಿಗಳು ಇದೀಗ ಭಾರಿ ಚಿಂತೆಯಲ್ಲಿ ಮುಳುಗಿದ್ದಾರೆ. ಅದರಲ್ಲೂ ತಮ್ಮ ನೆಚ್ಚಿನ ನಟ ದರ್ಶನ್ ತೂಗುದೀಪ್‌ಗೆ ಹಿಂಗಾಯ್ತಾ? ಅನ್ನೋ ಚಿಂತೆಯು ಕೂಡ ಅಭಿಮಾನಿಗಳಲ್ಲಿ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆಯ ಕೇಸ್‌ನಲ್ಲಿ 'ಡಿ-ಬಾಸ್' ದರ್ಶನ್ ತೂಗುದೀಪ್ ಅವರು ಪರದಾಡುತ್ತಿರುವ ಸಮಯಕ್ಕೆ ಬಳ್ಳಾರಿ ಜೈಲಿನಲ್ಲಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಜಾಮೀನು...

ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೇಸ್‌ನಲ್ಲಿ ಲಾಕ್ ಆಗಿ ಬಳ್ಳಾರಿ ಜೈಲು ಸೇರಿದ್ದ ಕಾರಣಕ್ಕೆ, ದರ್ಶನ್ ತೂಗುದೀಪ್ ಅವರ ಕುಟುಂಬ ಸದಸ್ಯರು ನೂರಾರು ದೇವಸ್ಥಾನ ಸುತ್ತಾಡಿ, ವಿಶೇಷ ಪೂಜೆಗಳನ್ನ ಕೂಡ ಮಾಡಿದ್ದಾರೆ. ಅದರಲ್ಲೂ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬರಲಿ ಅಂತಾ ಕೋಟ್ಯಂತರ ಅಭಿಮಾನಿಗಳು ಹರಕೆ ಕೂಡ ಹೊತ್ತಿದ್ದಾರೆ. ಇಷ್ಟೆಲ್ಲದರ ನಡುವೆ ದರ್ಶನ್ ತೂಗುದೀಪ್ ಅವರು ಜೈಲು ಸೇರಿ ಈಗಾಗಲೇ 100 ದಿನ ಕಳೆದಿದ್ದು, ಇಂತಹ ಸಮಯದಲ್ಲೇ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಲಾಗಿತ್ತು. ಬಳ್ಳಾರಿ ಜೈಲಿನಲ್ಲಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇದೀಗ ಜಾಮೀನು...

Darshan Thoogudeepa Bail Update In Renukaswamy Matter

ದರ್ಶನ್ ತೂಗುದೀಪ್ ರಿಲೀಸ್ ಯಾವಾಗ?

ದರ್ಶನ್ ತೂಗುದೀಪ್ ಜೀವನದಲ್ಲಿ ಸಾಕಷ್ಟು ಕಷ್ಟಪಟ್ಟು ಈಗ ಮೇಲೆ ಬಂದಿದ್ದಾರೆ ಕನ್ನಡ ಸಿನಿಮಾ ಇಂಡಸ್ಟ್ರಿಗೆ ದರ್ಶನ್ ತೂಗುದೀಪ್ ಎಂಟ್ರಿ ಕೊಟ್ಟಾಗ ಬೇಕು ಅಂತಾ ಕೆಲ ಜನ ದರ್ಶನ್ ತೂಗುದೀಪ್ ಅವರನ್ನ ತುಳಿದರು ಎಂಬ ಆರೋಪ ಕೂಡ ಕೇಳಿಬರುತ್ತಿದೆ. ದರ್ಶನ್ ತೂಗುದೀಪ್ ಅವರನ್ನು ಬೇಕು ಅಂತಲೇ ಕಾಟ ಕೊಟ್ಟು ಓಡಿಸಲು ನೋಡಿದ್ದರು ಎಂಬ ಆರೋಪ ಕೂಡ ಇದೆ. ಈ ವೇಳೆ, ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬರಲಿ. ಆ ನಂತರ ನಮ್ಮ ಶಕ್ತಿ ತೋರಿಸುತ್ತೀವಿ ಅಂತಿದ್ದಾರೆ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್. ಈ ಸಮಯದಲ್ಲೇ ದರ್ಶನ್ ತೂಗುದೀಪ್ ಅವರು ರಿಲೀಸ್ ಆಗುವ ನಿರೀಕ್ಷೆ ಇತ್ತು.

ಅಕ್ಟೋಬರ್ 8 ರಂದು ದರ್ಶನ್ ಅವರ...

ಅಂದಹಾಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಬೇಡಿ ದರ್ಶನ್ ಹಾಗೂ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. 57ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆ ನಡೆಸಿತ್ತು. ಇದೀಗ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ನೀಡುವ ಕುರಿತಾಗಿ, ತೀವ್ರ ಕುತೂಹಲ ಕೆರಳಿತ್ತು. ಇಂತಹ ಸಮಯದಲ್ಲೇ ಬಳ್ಳಾರಿ ಜೈಲಿನಲ್ಲಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಅಕ್ಟೋಬರ್ 8 ರಂದು ವಿಚಾರಣೆ ಮುಂದೂಡಲಾಗಿದ್ದು, ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಅಂದು ವಾದ ಮಂಡಿಸಲಿದ್ದಾರೆ.

ದರ್ಶನ್ ತೂಗುದೀಪ್ ದೂರ.. ದೂರ..?

ಪವಿತ್ರಾ ಗೌಡ ಮತ್ತು ದರ್ಶನ್ ತೂಗುದೀಪ್ ನಡುವೆ 10 ವರ್ಷಗಳ ಸುದೀರ್ಘ ಸಂಬಂಧವಿದೆ. ದರ್ಶನ್ ತೂಗುದೀಪ್‌ಗೂ ಮೊದಲು ಪವಿತ್ರಾ ಗೌಡ ಒಂದು ಮದುವೆ ಕೂಡ ಆಗಿದ್ದರಂತೆ. ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ಸಂಬಂಧ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ನಟ ದರ್ಶನ್ ತೂಗುದೀಪ್ ವಿರುದ್ಧವೇ ಪವಿತ್ರಾ ಗೌಡ ಆರೋಪ ಮಾಡಿದ್ರು ಎಂಬ ಆರೋಪವು ಕೇಳಿಬಂತು. ಪೊಲೀಸರ ಎದುರು ದರ್ಶನ್ ತೂಗುದೀಪ್ ವಿರುದ್ಧ ಪವಿತ್ರಾ ಗೌಡ ಆರೋಪ ಮಾಡಿದ್ದರಂತೆ. ಹೀಗಾಗಿ ಇಬ್ಬರೂ ಈಗ ದೂರವಾಗಲು ಇಚ್ಛಿಸಿದ್ದಾರೆ ಎನ್ನಲಾಗಿದೆ.

ದರ್ಶನ್ ತೂಗುದೀಪ್ ತಮ್ಮ ಸಿನಿಮಾಗಳ ಮೂಲಕ ದೇಶಾದ್ಯಂತ ಹೆಸರು ಮಾಡಿದ್ದರು. ಈ ಕಾರಣಕ್ಕೆ ದರ್ಶನ್ ತೂಗುದೀಪ್ ಅವರ ಸಿನಿಮಾಗಳು ಹಿಂದಿ ಸೇರಿದಂತೆ ಬೇರೆ ಬೇರೆ ಭಾಷೆಗೆ ಕೂಡ ವಾಯ್ಸ್ ಡಬ್ಬಿಂಗ್ ಆಗುತ್ತಿತ್ತು. ಹೀಗಿದ್ದಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ್ ಅವರ ವಿಚಾರ ಈಗ ಭಾರತದ ಮೂಲೆ ಮೂಲೆಯಲ್ಲೂ ಸದ್ದು ಮಾಡುತ್ತಿದೆ. ರಾಷ್ಟ್ರೀಯ ಮಾಧ್ಯಮಗಳು ಕೂಡ ಈ ವಿಚಾರವಾಗಿ ಚರ್ಚೆ ನಡೆಸುತ್ತಿವೆ. ಮತ್ತೊಂದು ಕಡೆ ಬಳ್ಳಾರಿ ಜೈಲಿನಿಂದ ಬಿಡುಗಡೆ ಆಗಿ, ನಟ ದರ್ಶನ್ ತೂಗುದೀಪ್ ಅವರು ಹೊರಗೆ ಬರುತ್ತಾರೆ ಅಂತಾ ಕಾಯುತ್ತಿದ್ದ ಅಭಿಮಾನಿಗಳಿಗೆ ಆಘಾತವೇ ಎದುರಾಗಿದೆ.

ಸಮಸ್ಯೆ ಸುಳಿಯಲ್ಲಿ ದರ್ಶನ್ ತೂಗುದೀಪ್?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ, ದರ್ಶನ್ ತೂಗುದೀಪ್ ಅವರ ವಿರುದ್ಧ ಗಂಭೀರ ಆರೋಪ ಒಂದು ಕೇಳಿಬಂದಿತ್ತು. ದರ್ಶನ್ ತೂಗುದೀಪ್ ಮತ್ತು ರೌಡಿಶೀಟರ್ ನಾಗ ಸೇರಿ, ಮತ್ತಿಬ್ಬರು ಪಾತಕಿಗಳು ಒಟ್ಟಾಗಿ ಕೂತು ಸಿಗರೇಟು ಸೇದುತ್ತಾ ಟೀ ಕುಡಿಯುತ್ತಿದ್ದ ಫೋಟೋ ವೈರಲ್ ಆಗಿತ್ತು. ಆ ನಂತರ ದರ್ಶನ್ ತೂಗುದೀಪ್ ಅವರ ಜೊತೆಗೆ ಇನ್ನುಳಿದ ಆರೋಪಿ ಪಡೆಯನ್ನು ಬೇರೆ ಬೇರೆ ಜೈಲಿಗೆ ಎತ್ತಂಗಡಿ ಮಾಡಲಾಗಿತ್ತು. ಇದೀಗ ನೋಡಿದರೆ ದರ್ಶನ್ ತೂಗುದೀಪ್‌ಗೆ ಪರಪ್ಪನ ಅಗ್ರಹಾರದಲ್ಲಿ ಸಿಗರೇಟು ಸೇದಿರುವ ವಿಚಾರವೇ ದೊಡ್ಡ ಕಂಟಕ ತರುವ ಸಾಧ್ಯತೆ ದಟ್ಟವಾಗಿದ್ದು, ಜಾಮೀನು ಸಿಗುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+