Pavithra Gowda: ಕೈಯಲ್ಲಿ ಗುಲಾಬಿ ಹಿಡಿದು 'ಡಿಯರ್' ಎಂದ ಪವಿತ್ರಾ ಗೌಡ
ನಟ ದರ್ಶನ್ ತೂಗುದೀಪ ಹಾಗೂ ಅವರ ಆಪ್ತೆ ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪ ಹೊತ್ತು ಜೈಲು ಸೇರಿದ್ದರು. ಸದ್ಯ ಜಾಮೀನಿನ ಮೇಲೆ ಇಬ್ಬರೂ ಹೊರಬಂದಿದ್ದು, ದರ್ಶನ್ ಹಾಗೂ ಪವಿತ್ರಾ ಗೌಡ ಅವರಿಗೆ ಬೇರೆ ರಾಜ್ಯಗಳಿಗೆ ತೆರಳಲು ಕೋರ್ಟ್ ಅನುಮತಿ ನೀಡಿದೆ. ಜಾಮೀನು ಸಿಕ್ಕ ಬಳಿಕ ಇಬ್ಬರೂ ಭೇಟಿಯಾಗಿರಲಿಲ್ಲ. ಇದೀಗ ಪವಿತ್ರಾ ಗೌಡ ಅವರು ಡಿಯರ್ ಎಂದು ಸ್ಪೆಷಲ್ ವಿಡಿಯೋ ಶೇರ್ ಮಾಡಿದ್ದಾರೆ.
ಪವಿತ್ರಾ ಗೌಡ ಕೂಡ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ನಟ ದರ್ಶನ್ ಅವರಿಗೆ ತೀರಾ ಆಪ್ತರಾಗಿ ಗುರುತಿಸಿಕೊಂಡಿದ್ದರು. ಪವಿತ್ರಾ ಗೌಡ ಅವರ ಬಗ್ಗೆ ಕೆಟ್ಟದಾಗಿ, ಅಶ್ಲೀಲವಾಗಿ ಮೆಸೇಜ್ ಮಾಡಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ದರ್ಶನ್ ಅವರ ಗ್ಯಾಂಗ್ ಕಿಡ್ನ್ಯಾಪ್ ಮಾಡಿಕೊಂಡು ಬಂದು ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ಥಳಿಸಿದ್ದರು ಎಂಬ ಆರೋಪವಿದೆ. ರೇಣುಕಾಸ್ವಾಮಿಯನ್ನು ಥಳಿಸಿದ್ದರಿಂದಲೇ ಆತ ಸಾವನ್ನಪ್ಪಿದ ಎಂದೂ ಆರೋಪಿಸಲಾಗಿದೆ. ಹಾಗಾಗಿ ಪವಿತ್ರಾಗೌಡ ಅವರ ಕಾರಣದಿಂದಲೇ ದರ್ಶನ್ ಜೈಲು ಸೇರುವಂತಾಯಿತು ಎಂದು ಹೇಳಲಾಗಿದೆ.

ತೀರಾ ಆಪ್ತರಾಗಿದ್ದ ದರ್ಶನ್ ಹಾಗೂ ಪವಿತ್ರಾ ಗೌಡ ಅವರು ಈ ಕೇಸ್ ಬಳಿಕ ಮಾತು ಬಿಟ್ಟಿರುವುದು ಅಚ್ಚರಿ ಮೂಡಿಸಿದೆ. ಕೋರ್ಟ್ನಲ್ಲಿ ಇದೇ ಕೇಸ್ ವಿಚಾರಣೆ ವೇಳೆ ಎದುರು ಬದುರಾದರೂ ಪರಿಚಯವೇ ಇಲ್ಲ ಎನ್ನುವಂತೆ ನಡೆ ತೋರಿದ್ದರು. ಸದ್ಯ ದರ್ಶನ್ ಅವರು ಸಿನಿಮಾಗಳಲ್ಲಿ ಬ್ಯುಸಿಯಾದರೆ, ಪವಿತ್ರಾ ಗೌಡ ತಮ್ಮ ಬಿಸಿನೆಸ್ ಕಡೆ ಗಮನಹರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಫುಲ್ ಆಕ್ಟೀವ್ ಆಗಿದ್ದು, ಇದೀಗ ಡಿಯರ್ ಎನ್ನುವ ವಿಡಿಯೋ ಶೇರ್ ಮಾಡಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ಪವಿತ್ರಾ ಗೌಡ, ಇಂದು ಮಹಿಳಾ ದಿನಾಚರಣೆಗೆ ವಿಶ್ ಕೂಡ ಮಾಡಿದ್ದಾರೆ. ವಿಡಿಯೋದಲ್ಲಿ ಹ್ಯಾಪಿ ವುಮನ್ಸ್ ಡೇ ಎಂದು ವಿಶ್ ಮಾಡಿ ವಿಶೇಷ ಸಂದೇಶವನ್ನು ನೀಡಿದ್ದಾರೆ. ಕೈಯಲ್ಲಿ ಕೆಂಗುಲಾಬಿ ಹಿಡಿದಿರುವ ವಿಡಿಯೋ ಹಂಚಿಕೊಂಡಿರುವ ಅವರು, ಡಿಯರ್.. "ನೆನ್ನೆಗಿಂತ ನಿಮ್ಮನ್ನು ಹೆಚ್ಚಾಗಿ ಪ್ರೀತಿಸು, ನಿಮ್ಮನ್ನು ನೀವು ಆದ್ಯತೆಯಾಗಿ ಮಾಡಿಕೊಳ್ಳಿ. ನಿಮ್ಮ ಗುರಿಗಳ ಹಿಂದೆ ಬೀಳಿ. ನಿಮ್ಮಲ್ಲಿರುವ ವಸ್ತುಗಳಿಗೆ ಕೃತಜ್ಞರಾಗಿರಿ, ನಿಮ್ಮ ಬಗ್ಗೆ ನೀವು ಹೆಮ್ಮೆಯಿಂದ ಇರಿ. ನೀವು ಅದ್ಭುತವಾದ ಮಹಿಳೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಮಹಿಳಾ ದಿನ ಆಚರಿಸಿ" ಎಂದು ಸಂದೇಶ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಬಳಿಕ ಹೊರ ರಾಜ್ಯದ ದೇವಸ್ಥಾನಗಳಿಗೆ ತೆರಳಲು ಅನುಮತಿ ಕೇಳಿದ್ದರು. ಕೋರ್ಟ್ ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿತ್ತು. ಬಳಿಕ ಶಿರಡಿಗೆ ಹೋಗಿ ದೇವರ ದರ್ಶನ ಪಡೆದಿದ್ದರು. ಪ್ರಯಾಗ್ರಾಜ್ ಮಹಾಕುಂಭ ಮೇಳಕ್ಕೂ ಹೋಗಿ ಬಂದಿದ್ದರು. ಇತ್ತೀಚೆಗೆ ಅವರು ತಮ್ಮ ಸ್ಟುಡಿಯೋ ಅನ್ನು ಅದ್ಧೂರಿಯಾಗಿ ರೀಲಾಂಚ್ ಮಾಡಿ ಬಿಸಿನೆಸ್ನಲ್ಲಿ ಬ್ಯುಸಿಯಾಗಿದ್ದಾರೆ. ಇಂದು ಮಹಿಳಾ ದಿನಕ್ಕೆ ವಿಶ್ ಮಾಡಿ ಗಮನ ಸೆಳೆದಿದ್ದಾರೆ.
-
Dhurandhar 2: ಬಾಕ್ಸ್ ಆಫೀಸ್ನಲ್ಲಿ 'ಧುರಂಧರ್ 2' ಸುನಾಮಿ: 3 ದಿನಕ್ಕೆ 500 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್ ಸಿನಿಮಾ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications