Darshan@25: ಇಂಡಸ್ಟ್ರೀಲಿ 25 ವರ್ಷ ಪೂರೈಸಿದ ಡಿ.ಬಾಸ್ ದಚ್ಚು: 'ದರ್ಶನ್ ಬೆಳ್ಳಿ ಪರ್ವ' ಆಯೋಜನೆ: ಸ್ಥಳ, ದಿನಾಂಕ, ಅತಿಥಿ ವಿವರ
ಬೆಂಗಳೂರು, ಫೆಬ್ರವರಿ 12: ಕನ್ನಡ ಚಿತ್ರರಂಗ ಸ್ಟಾರ್ ನಟರಲ್ಲಿ ಒಬ್ಬರಾದ ನಟ ದರ್ಶನ್ ತೂಗುದೀಪ (Darshan Thoogudeepa) ಅವರು ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟು ಅಲ್ಲಿಂದ 'ಕಾಟೇರ' ಸಿನಿಮಾ (Kateraa) ವರೆಗಿನ 25ವರ್ಷಗಳ ಸಿನಿ ಜರ್ನಿ ಪೂರೈಸಿದ್ದಾರೆ. ಇದರೊಂದಿಗೆ ಅವರ ಕಾಟೇರ ಸಿನಿಮಾ ಜನಮನ್ನಣೆ ಗಳಿಸುವಲ್ಲಿ ಸಫಲವಾಗಿದೆ.
ನಟ ದರ್ಶನ್ ಅವರು ಕನ್ನಡ ಇಂಡ್ರಸ್ಟ್ರಿಗೆ ಬಂದು 25ವರ್ಷಗಳು ಕಳೆದ ಪ್ರಯುಕ್ತ ಅವರ ಅವರ ಸ್ನೇಹಿತರು ಮತ್ತು ಅಭಿಮಾನಿಗಳು ಸೇರಿ 'ದರ್ಶನ್ ಬೆಳ್ಳಿ ಪರ್ವ' (Darshan Silver jubilee) ಕಾರ್ಯಕ್ರಮವನ್ನು ಶ್ರೀರಂಗಪಟ್ಟಣ್ಣದಲ್ಲಿ ಹಮ್ಮಿಕೊಂಡಿದ್ದಾರೆ. ಹಾಗಾದರೆ ಕಾರ್ಯಕ್ರಮ ಯಾವಾಗ ನಡೆಯಲಿದೆ?, ಯಾರೆಲ್ಲ ಗಣ್ಯರು, ಚಿತ್ರ ಕಲಾವಿದರು, ಸ್ನೇಹಿತರು ಆಗಮಿಸಲಿದ್ದಾರೆ ಎಂಬ ಡಿಟೇಲ್ಸ್ ಇಲ್ಲಿದೆ.

ಅಂದು ಲೈಟ್ ಬಾಯ್ ಆಗಿ 70ರೂಪಾಯಿ ಗಳಿಸುತ್ತಿದ್ದ ದರ್ಶನ್ ಇಂದು ಐಶಾರಾಮಿ ಲ್ಯಾಂಬೋರ್ಗಿನಿ ಕಾರಿನ ಮಾಲೀಕರಾಗಿದ್ದಾರೆ. ''ಇಷ್ಟವಾಗಿದ್ದನ್ನು ಕಣ್ತುಂದೆ ಕಾಣುವಂತೆ ಇಟ್ಟುಕೊಂಡಿರಿ, ಆಗಾಗ ನೋಡುತ್ತಲೇ ಇರಿ ಒಂದಲ್ಲಾ ಒಂದು ದಿನ ನೀವು ಅದನ್ನು ಮಾಡುತ್ತೀರಿ, ಗುರಿ ಮುಟ್ಟುತ್ತೀರಿ'' ಎಂದು ತಮ್ಮದೇ ದಾಟಿಯಲ್ಲಿ ಜೀವನ, ಗುರಿ ಬಗ್ಗೆ ಮಾತನಾಡುವ ದರ್ಶನ್ ಅವರು ತಮ್ಮ ಜರ್ನಿಯಲ್ಲಿ ಸಾಕಷ್ಟು ಏಳು ಬೀಳು ಕಂಡಿದ್ದಾರೆ.
ಫೆಬ್ರವರಿ 17ರಂದು ಕಾರ್ಯಕ್ರಮ
ಸಣ್ಣ ಪುಟ್ಟ ಪಾತ್ರ ಮಾಡಿ, ನಂತರ ಹಿರೋ ಆಗಿ, ಇದೀಗ ಸ್ಯಾಂಡಲ್ವುಡ್ ಚಾಲೆಂಜಿಂಗ್ ಸ್ಟಾರ್ ಆಗಿ ತಮ್ಮ ಸಿನಿಮಾ, ಅಭಿನಯದಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅಭಿಮಾನಿಗಳ ಪಾಲಿನ 'ಡಿಬಾಸ್' (D Boss) ಚಂದನವನದಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಸ್ನೇಹಿತರ ಕಷ್ಟಕ್ಕೆ ಸ್ಪಂದಿಸುವ ಗುಣ, ಸಹಾಯ ಹಸ್ತದಿಂದಲೇ ಎಲ್ಲರಿಗೂ ಅತ್ಯಾಪ್ತರಾಗುವ ದರ್ಶನ್ ಅವರ 'ಬೆಳ್ಳಿ ಪರ್ವ'ವು ಇದೇ ಫೆಬ್ರವರಿ 17ರಂದು ಶನಿವಾರ ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ನಟ ದರ್ಶನ್ ಚಿತ್ರರಂಗದಲ್ಲಿ ಭರ್ತಿ 25 ವರ್ಷ ಕಳೆದಿದ್ದು, ಅವರ ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಸ್ನೇಹಿತರು ನಿರ್ಧರಿಸಿದ್ದಾರೆ. ಇಂತಹ ಘಳಿಗೆಯಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಆಪ್ತರು ಹಾಗೂ ಹಿತೈಷಿಗಳು 'ದರ್ಶನ್ ಬೆಳ್ಳಿ ಪರ್ವ' ಎಂಬ ಅರ್ಥಪೂರ್ಣ ಕಾರ್ಯಕ್ರಮವನ್ನು ಹಳೇ ಮೈಸೂರು ಭಾಗದಲ್ಲಿ ಏರ್ಪಡಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶ್ರೀಗಳ ಸಾನಿಧ್ಯೆ
ಅದ್ಧೂರಿಯಾಗಿ ನಡೆಯುವ ಈ ಸಮಾರಂಭಕ್ಕೆ ಲಕ್ಷಾಂತರ ಸೆಲೆಬ್ರೆಟಿಗಳು ಆಗಮಿಸಲಿದ್ದಾರೆ. ಶ್ರೀ ಆದಿಚುಂಚನಗಿರಿ ಸ್ವಾಮೀಜಿ, ಶ್ರೀ ಸುತ್ತೂರು ಶ್ರೀಗಳು, ಬೀಬಿಮಠದ ಸ್ವಾಮೀಜಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಾಜಕಾರಣಿಗಳ ಪೈಕಿ ಕಲಾವಿದೆ ಮತ್ತು ಸಂಸದೆ ಸುಮಲತಾ ಅಂಬರೀಶ್ ಉಪಸ್ಥಿತಿ ಇರಲಿದೆ.
ಬೆಳ್ಳಿ ಪರ್ವದಲ್ಲಿ ಸಾಮಾಜಿಕ ಕಾರ್ಯಕ್ರಮ
ಶ್ರೀರಂಗ ಪಟ್ಟಣದಲ್ಲಿ ಶನಿವಾರ ಸಂಜೆ ದರ್ಶನ್ ಬೆಳ್ಳಿ ಪರ್ವ ನಡೆಯಲಿದೆ. ಇದು ಮಾತ್ರವಲ್ಲದೇ ಹಲವು ಸಾಮಾಜಿಕ ಕಾರ್ಯಕ್ರಮಗಳು ಇದೇ ವೇಳೆ ನಡೆಯಲಿವೆ ಎಂದು ದರ್ಶನ್ ಆಪ್ತರು ಮಾಹಿತಿ ನೀಡಿದ್ದಾರೆ. ಅಭಿಮಾನಿಗಳು ಸೇರಿದಂತೆ ಅತಿಥಿಗಳು ಆಗಮಿಸಲಿದ್ದಾರೆ.
ಮುನ್ನಾ ದಿನವೇ ಡಿಬಾಸ್ ಬರ್ತಡೇ
ದರ್ಶನ್ ಬೆಳ್ಳಿ ಪರ್ವ ಆಯೋಜನೆಗೊಂಡಿರುವುದು ಫೆಬ್ರವರಿ 17ರಂದು ನಡೆಯಲಿದೆ. ಇದಕ್ಕು ಮುನ್ನಾ ದಿನವೇ ಅಂದರೆ ಫೆಬ್ರವರಿ 16ರಂದು ನಟ ದರ್ಶನ್ ಅವರ ಹುಟ್ಟು ಹಬ್ಬ ವಿದೆ. ಈ ಭಾರಿ ಡಿಬಾಸ್ ಅಭಿಮಾನಿಗಳಿಗೂ ಈ ಬರ್ತ್ಡೆ ಮರುದಿನವೇ ನಡೆಯಲಿರುವ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಟೇರಾ ಸಕ್ಸಸ್ ಸಂಭ್ರಮಿಸಲಿದ್ದಾರೆ.
ಕಾರ್ಯಕ್ರಮದ ಅತಿಥಿಗಳ ಪಟ್ಟಿ
ಇನ್ನು ಚಿತ್ರರಂಗದಲ್ಲಿ ದರ್ಶನ್ ಜತೆ ಸದಾ ಗುರುತಿಸಿಕೊಳ್ಳುವ ಅವರ ಸ್ನೇಹಿತರ, ಆಪ್ತರು ಆಗಿರುವ ನಟರಾದ ಧನಂಜಯ್, ಸತೀಶ್ ನೀನಾಸಂ, ವಿನೋದ್ ಪ್ರಭಾಕರ್, ಅಭಿಷೇಕ್ ಅಂಬರೀಶ್, ಶಿವರಾಜ್ ಕೆ.ಆರ್.ಪೇಟೆ ಸೇರಿದಂತೆ ಅನೇಕ ನಟ ನಟಿಯರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಕೆಲವು ನಟಿ ಮಣಿಯರು ಸಹ ವೇದಿಕೆ ಮೇಲೆ ದರ್ಶನ್ ಸಿನಿಮಾಗಳ ಹಾಡುಗಳಿಗೆ ಮನಮೋಹಕವಾಗಿ ಹೆಜ್ಜೆ ಹಾಕಲಿದ್ದಾರೆ.
ಕಾಟೇರ ಸಿನಿಮಾ ಸಕ್ಸಸ್ ಬೆನ್ನಲ್ಲೆ ನಟ ದರ್ಶನ್ ಅವರಿಗಾಗಿ ಬೆಳ್ಳಿ ಪರ್ವ ನಡೆಯುತ್ತಿದೆ. ಇದೆಲ್ಲವು ಡಿ ಬಾಸ್ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ...
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications