ಡಿಬಾಸ್ ಅಭಿಮಾನಿಗಳಿಗೆ "ಡೆವಿಲ್" ಟೀಂನಿಂದ ಹೊರಬಿತ್ತು ಭರ್ಜರಿ ಗುಡ್ನ್ಯೂಸ್
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan Thoogudeepa) ಅವರ ಅಭಿಮಾನಿಗಳು "ಡೆವಿಲ್" ಸಿನಿಮಾಗಾಗಿ ತುದಿಗಾಗಲಲ್ಲಿ ನಿಂತಿದ್ದಾರೆ. ಇದೀಗ ಚಿತ್ರತಂಡವು ಡಿಬಾಸ್ ಅಭಿಮಾನಿಗಳಿಗಾಗಿ ಬಿಗ್ ಅಪ್ಡೇಟ್ ಹಾಗೂ ಸಿಹಿಸುದ್ದಿ ನೀಡಿದೆ. ಡೆವಿಲ್ ಸಿನಿಮಾದ ಅಪ್ಡೇಟ್ ಕೊಡಿ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಡಿಮ್ಯಾಂಡ್ ಮಾಡುತ್ತಿದ್ದರು. ಇದೀಗ ಕೊನೆಗೂ ಅಭಿಮಾನಿಗಳ ಆಸೆ ಈಡೇರಿಸಲು ಡೆವಿಲ್ ಚಿತ್ರತಂಡ ಮುಂದಾಗಿದೆ. ದಿ ಡೆವಿಲ್ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ದಿನಾಂಕ ಕೂಡ ಘೋಷಿಸಿದೆ. ಅದ್ಧೂರಿ ಕಾರ್ಯಕ್ರಮದಲ್ಲಿ ಮೋಷನ್ ಪೋಸ್ಟರ್ ರಿಲೀಸ್ ಆಗುವುದಾಗಿ ಹೇಳಿದೆ.
ದರ್ಶನ್ ಅಭಿನಯದ ಮುಂಬರುವ ಕನ್ನಡ ಆಕ್ಷನ್ ಸಿನಿಮಾ 'ಡೆವಿಲ್' ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಇತ್ತೀಚೆಗಷ್ಟೇ ರಾಜಸ್ಥಾನ, ಬೆಂಗಳೂರು ಹಾಗೂ ವಿದೇಶದಲ್ಲೂ ಶೂಟಿಂಗ್ ನಡೆಸಲಾಗಿತ್ತು. ದರ್ಶನ್ ಅವರು ಭರ್ಜರಿ ಬ್ಯುಸಿ ಶೆಡ್ಯೂಲ್ ಹಾಗೂ ತೀವ್ರ ಪ್ರಚಾರ ಇದಕ್ಕೆ ಮತ್ತಷ್ಟು ಚಾಲನೆ ನೀಡಲಿದೆ. ಚಿತ್ರದಲ್ಲಿ ದರ್ಶನ್ ಅವರು "ಕನ್ವರಲಾಲ್" ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದ ಪೋಸ್ಟರ್ ಕೂಡ ರಿಲೀಸ್ ಮಾಡಿತ್ತು.

ಇನ್ನು ಕೆಲವು ಆಕ್ಷನ್ ದೃಶ್ಯಗಳು ಮತ್ತು ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಈ ಹಾಡನ್ನು ವಿದೇಶದಲ್ಲಿ ಚಿತ್ರೀಕರಣ ಮಾಡುವ ಉದ್ದೇಶದಲ್ಲಿದ್ದಾರೆ. ಈ ಸಂಬಂಧ ದರ್ಶನ್ ದೂರ ಪ್ರಯಾಣಕ್ಕೆ ಹೈಕೋರ್ಟ್ ಅನುಮತಿ ಪಡೆದಿದ್ದಾರೆ. ಬೆಂಗಳೂರು, ಮೈಸೂರು, ಹೈದರಾಬಾದ್, ರಾಜಸ್ಥಾನ ಮುಂತಾದ ವಿವಿಧ ಸ್ಥಳಗಳಲ್ಲಿ ಶೂಟಿಂಗ್ ನಡೆಸಲಾಗಿದೆ. ಚಿತ್ರದ ಅಂತಿಮ ಹಂತದ ಚಿತ್ರೀಕರಣ ಜೊತೆಗೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೂಡ ಆರಂಭವಾಗಿವೆ. ಶೀಘ್ರದಲ್ಲೇ ಸಿನಿಮಾದ ಬಿಡುಗಡೆ ಹಂತಕ್ಕೆ ಬರಲಿದೆ ಎಂಬ ಸುಳಿವು ನೀಡಿದೆ.
ದರ್ಶನ್ ನಟನೆಯ 'ಡೆವಿಲ್' ಸಿನಿಮಾದ ಚಿತ್ರೀಕರಣ ದರ್ಶನ್ ಅವರು ಜೈಲು ಸೇರಿದ್ದು, ಆರೋಗ್ಯ ವಿಚಾರಗಳ ಕಾರಣದಿಂದ ಅರ್ಧಕ್ಕೆ ನಿಂತು ಹೋಗಿತ್ತು. ದರ್ಶನ್ ಜಾಮೀನು ಮೇಲೆ ಬಿಡುಗಡೆಯಾದ ಬಳಿಕ ಚಿತ್ರದ ಚಿತ್ರೀಕರಣ ಮತ್ತೆ ಶುರುವಾಗಿತ್ತು. ಹಾಗಾಗಿ ಶೂಟಿಂಗ್ ವೇಗವಾಗಿ ಸಾಗಿ ಅಂತಿಮ ಹಂತ ತಲುಪಿದೆ.
ಅತ್ತಿಬೆಲೆಯಲ್ಲಿ ಮೋಷನ್ ಪೋಸ್ಟರ್ ರಿಲೀಸ್
ಈ ಬಗ್ಗೆ ಶ್ರೀ ಜೈಮಾತಾ ಕಂಬೈನ್ಸ್ ಮಾಹಿತಿ ಹಂಚಿಕೊಂಡಿದೆ. ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ನಮ್ಮ 'ದಿ ಡೆವಿಲ್' ಚಿತ್ರದ ಮೋಷನ್ ಪೋಸ್ಟರ್ ಇದೇ ಜುಲೈ 19 ಶನಿವಾರದಂದು ಸಂಜೆ 8 ಗಂಟೆಗೆ ನಮ್ಮ ಸೋಷಿಯಲ್ ಮೀಡಿಯಾ ಪೇಜ್ ಹಾಗೂ ಅತ್ತಿಬೆಲೆಯಲ್ಲಿ ನಮ್ಮ ನಲ್ಮೆಯ ಸೆಲೆಬ್ರಿಟಿಸ್ಗಳ ಸಮ್ಮುಖದಲ್ಲೂ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹ ಸದಾ ಹೀಗೆ ಇರಲಿ ಎಂದು ಸಿಹಿಸುದ್ದಿ ನೀಡಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications