Darshan Thoogudeepa: ರೇಣುಕಾಸ್ವಾಮಿ ಮಗನ ಹೆಸರಲ್ಲಿ 100 ಕೋಟಿ ರೂಪಾಯಿ....

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಪ್ಪು ಇಲ್ಲವೇ ಇಲ್ಲ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಪ್ಪು ಇಲ್ಲದೇ ಇದ್ದರೂ ಅವರ ಶತ್ರುಗಳು ಹೀಗೆ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿ ಜೈಲಿಗೆ ಕಳುಹಿಸಿದ್ದರು, ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಸ್ಥಿತಿ ಹೀಗಿದ್ದಾಗ ಮತ್ತೊಂದು ಕಡೆ ಕೊಲೆ ಆಗಿರುವ ರೇಣುಕಾಸ್ವಾಮಿ ಕುಟುಂಬದವರು ಹಿಡಿಶಾಪ ಹಾಕುತ್ತಿದ್ದಾರೆ. ಹೀಗಿದ್ದಾಗ ದಿಢೀರ್, 'ರೇಣುಕಾಸ್ವಾಮಿ ಮಗನ ಹೆಸರಲ್ಲಿ 100 ಕೋಟಿ ರೂಪಾಯಿ....'

ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ 25 ವರ್ಷಗಳಿಂದ ಕಷ್ಟಪಟ್ಟು ತಮ್ಮದೇ ಕೋಟೆ ಕಟ್ಟಿಕೊಂಡಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬೆನ್ನ ಹಿಂದೆ ಕೋಟಿ ಕೋಟಿ ಅಭಿಮಾನಿಗಳು ನಿಂತಿದ್ದಾರೆ. ಹೀಗೆ ಕನ್ನಡ ಸಿನಿಮಾ ಇಂಡಸ್ಟ್ರಿಯ ದೊಡ್ಡ ದೊಡ್ಡ ಸ್ಟಾರ್ ಹೀರೋಯಿನ್ & ಸ್ಟಾರ್ ಹೀರೋಗಳು ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಅನ್ನೋದನ್ನ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಹೀಗೆ ಇದ್ದಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪೊಲೀಸರು ಡಿ-ಬಾಸ್ ಅವರನ್ನ...

Darshan Thoogudeepa Fans Are Saying This About Renukaswamy Son Future

ರೇಣುಕಾಸ್ವಾಮಿ ಮಗನ ಹೆಸರಲ್ಲಿ 100 ಕೋಟಿ...

ಕನ್ನಡ ಸಿನಿಮಾ ಇಂಡಸ್ಟ್ರಿ ಜಾಗತಿಕವಾಗಿ ಸದ್ದು ಮಾಡಲು ಹಲವು ಹೀರೋಗಳ ಶ್ರಮವೂ ಇದ್ದು, ಈ ಪೈಕಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಶ್ರಮ ಜಾಸ್ತಿ ಅಂತಾ ಹೇಳುತ್ತಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಹೀಗಿದ್ದಾಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್ ಆಗಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲು ಸೇರಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಲವಿಲ ಒದ್ದಾಡಿದ್ದರು. ಮತ್ತೊಂದು ಕಡೆ ಈ ಕೊಲೆಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಪ್ಪೇ ಇಲ್ಲ ಅಂತಿದ್ದಾರೆ ಅವರ ಅಭಿಮಾನಿಗಳು...

150 ರೂಪಾಯಿ ಕೊಟ್ಟರೆ ಕೋಟಿ ಕೋಟಿ!

ಪರಿಸ್ಥಿತಿ ಹೀಗಿದ್ದಾಗಲೇ ಕನ್ನಡ ಸಿನಿಮಾ ಅಭಿಮಾನಿ ಒಬ್ಬರು ಒಂದು ಸಲಹೆ ನೀಡಿದ್ದಾರೆ. ಇದೀಗ ರೇಣುಕಾಸ್ವಾಮಿ ಮಗ ಸೇರಿದಂತೆ ಅವರ ಕುಟುಂಬಕ್ಕೆ ಸಹಾಯ ಆಗುವಂತೆ, ಇದೇ ಸಮಯಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಒಂದಾಗಿ ಹಣ ಸಹಾಯ ಮಾಡಬೇಕು ಎಂಬ ಆಗ್ರಹ ಮಾಡಿದ್ದಾರೆ ಕನ್ನಡ ಸಿನಿಮಾ ಅಭಿಮಾನಿ ಒಬ್ಬರು.

ಅಂದಹಾಗೆ 150 ರೂಪಾಯಿ ಕೊಟ್ಟು ಸಿನಿಮಾ ನೋಡುವ ರೀತಿಯೇ ಪ್ರತಿಯೊಬ್ಬ ಅಭಿಮಾನಿ ಕೂಡ ಆ 150 ರೂಪಾಯಿ ಹಣವನ್ನ ರೇಣುಕಾಸ್ವಾಮಿ ಕುಟುಂಬಕ್ಕೆ ದಾನವಾಗಿ ನೀಡಬೇಕು. ಇದೇ ಹಣವನ್ನು ಅವರು ಯಾವುದಕ್ಕಾದರೂ ಬಳಸಿಕೊಳ್ಳಲು ಸಾಧ್ಯವಾಗುತ್ತದೆ ಎಂದಿದ್ದಾರೆ ಈ ಅಭಿಮಾನಿ. ಹೀಗೆ ಅಭಿಮಾನಿ ನೀಡಿರುವ ಹೇಳಿಕೆಯ ವಿಡಿಯೋ ಫುಲ್ ವೈರಲ್ ಆಗುತ್ತಿದೆ.

ರೇಣುಕಾಸ್ವಾಮಿ ಮಗನ ಭವಿಷ್ಯ ರೂಪಿಸಲು....

ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ದೊಡ್ಡ ಮನಸ್ಸು ಮಾಡುತ್ತಾ, ರೇಣುಕಾಸ್ವಾಮಿ ಕುಟುಂಬದ ಬ್ಯಾಂಕ್ ಖಾತೆಗೆ 150 ರೂಪಾಯಿ ಹಣ ಹಾಕುತ್ತಾ ಹೋದರೆ ಅದು 100 ಕೋಟಿ ರೂಪಾಯಿಗೂ ಹೆಚ್ಚು ಹಣವಾಗಲಿದೆ. ಮುಂದೆ ರೇಣುಕಾಸ್ವಾಮಿ ಮಗನ ಹೆಸರಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಕೂಡಿಸಿ ಇಡಬಹುದು.

ಮುಂದೆ ಇದೇ 100 ಕೋಟಿ ರೂಪಾಯಿಗೂ ಹೆಚ್ಚು ಹಣ ರೇಣುಕಾಸ್ವಾಮಿ ಮಗನ ಭವಿಷ್ಯ ರೂಪಿಸಲು ಕೂಡ ಸಹಾಯಕ್ಕೆ ಬರಲಿದೆ ಅಂತಾ ಸಲಹೆಯನ್ನು ನೀಡುತ್ತಿದ್ದಾರೆ ಸೋಷಿಯಲ್ ಮೀಡಿಯಾ ಬಳಕೆದಾರರು. ಈ ರೀತಿ ಪೋಸ್ಟ್ & ಕಮೆಂಟ್‌ಗಳು ಫುಲ್ ವೈರಲ್ ಆಗುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ಕೂಡ ಶುರುವಾಗಿದೆ. ಅಲ್ಲದೆ ಅಪ್ಪನನ್ನು ಕಳೆದುಕೊಂಡಿರುವ ರೇಣುಕಾಸ್ವಾಮಿ ಮಗನ ಭವಿಷ್ಯ ಏನು? ಅಂತಾನೂ ಜನರು ಇದೀಗ ಪ್ರಶ್ನೆ ಕೇಳುತ್ತಿದ್ದಾರೆ.

ದರ್ಶನ್ ತೂಗುದೀಪ್ ಅವರ ಬೇಲ್ ಕ್ಯಾನ್ಸಲ್?

ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಜೋರಾಗಿದ್ದು, ಬಳ್ಳಾರಿ ಜೈಲಿನಿಂದ ಹೊರ ಬಂದು ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಬೆನ್ನು ಮೂಳೆಯಲ್ಲಿ ಸಮಸ್ಯೆ ಇರುವ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಬೆಂಗಳೂರಿನ ಬಹುದೊಡ್ಡ ಖಾಸಗಿ ಆಸ್ಪತ್ರೆಯಲ್ಲಿ ಐಷಾರಾಮಿ ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ಸಮಯದಲ್ಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಹೊಸ ಟೆನ್ಷನ್ ಶುರುವಾಗಿದ್ದು, ದರ್ಶನ್ ತೂಗುದೀಪ್ ಜಾಮೀನು ಅಂದ್ರೆ ಬೇಲ್ ಕ್ಯಾನ್ಸಲ್ ಆಗುತ್ತಾ? ಎಂಬ ಪ್ರಶ್ನೆ ಮೂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+