‘ಕರ್ನಾಟಕ ಪೊಲೀಸರು 7 ಜನ್ಮದಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ...’ Darshan Thoogudeepa
ಕರ್ನಾಟಕ ಪೊಲೀಸರು ಮತ್ತು ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ನಡುವೆ ಪದೇ ಪದೇ ಜಗಳ ಆಗುತ್ತಲೇ ಇದೆ ಅನ್ನೋ ಆರೋಪ ಇದೆ. ಅದರಲ್ಲೂ ಕರ್ನಾಟಕ ಪೊಲೀಸರು ನನಗೆ ಭಾರಿ ತೊಂದರೆ ಕೊಡುತ್ತಿದ್ದಾರೆ ಅಂತಾನೇ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಕಣ್ಣೀರು ಹಾಕಿ ಗಳಗಳ ಅಳುತ್ತಾ ನೋವು ತೋಡಿಕೊಂಡಿದ್ದರು. ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಡಿ-ಬಾಸ್ ಕಣ್ಣೀರು ಹಾಕಿದ್ದು ನೋಡಿ ನೊಂದುಕೊಂಡಿದ್ದಾರೆ. ಹೀಗಿದ್ದಾಗಲೇ 'ಕರ್ನಾಟಕ ಪೊಲೀಸರು 7 ಜನ್ಮದಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ...'
ಡಿ-ಬಾಸ್ ಅಂತಾ ದರ್ಶನ್ ಅವರನ್ನ ಅಭಿಮಾನಿಗಳು ಕರೆಯುತ್ತಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬೆನ್ನಿಗೆ ಕೋಟಿ ಕೋಟಿ ಅಭಿಮಾನಿಗಳು ನಿಂತಿದ್ದೀವಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಏನು ಆಗಲ್ಲ ಅಂತಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಹೇಳುತ್ತಿದ್ದಾರೆ...

ಜೈಲಿಗೆ ಹೋಗಿ ಬಂದರೂ ಕಿರಿಕ್?
ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ತಪ್ಪು ಮಾಡದೇ ಇದ್ದರೂ, ಜೈಲಿಗೆ ಕಳುಹಿಸಿದ್ದಾರೆ ಎನ್ನುವ ಆರೋಪ ಕೂಡ ಮಾಡುತ್ತಿದ್ದರು ಅಭಿಮಾನಿಗಳು.ಇಂತಹ ಸಮಯದಲ್ಲೇ 'ಕರ್ನಾಟಕ ಪೊಲೀಸರು 7 ಜನ್ಮದಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಏನೂ ಮಾಡಲು ಆಗಲ್ಲ' ಅಂತಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ & ಕಮೆಂಟ್ ಹಾಕುತ್ತಿದ್ದಾರೆ. ಮತ್ತೊಂದು ಕಡೆ ಈಗಾಗಲೇ ಹಲವು ಅಭಿಮಾನಿಗಳು ಅರೆಸ್ಟ್ ಆಗಿ ಜೈಲಿಗೆ ಹೋಗಿ ಬಂದರೂ ಈ ರೀತಿಯ ವರ್ತನೆ ಕಡಿಮೆ ಆಗ್ತಿಲ್ಲ ಎಂಬ ಬಗ್ಗೆ ಕೂಡ ಚರ್ಚೆ ಜೋರಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಯುದ್ಧ ಜೋರು!
ಅಂದಹಾಗೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು ಎಂಬ ಆರೋಪವನ್ನು ಮಾಡಲಾಗಿತ್ತು. ಹೀಗೆ ರೇಣುಕಾಸ್ವಾಮಿ ಬೆಂಗಳೂರಿಗೆ ಬಂದ ನಂತರ, ಪಟ್ಟಣಗೆರೆಯ ಶೆಡ್ ಒಳಗೆ ಭಾರಿ ಹಿಂಸೆ ಮಾಡಿ ಹತ್ಯೆ ಮಾಡಿದ್ದ ಆರೋಪ ಮಾಡಲಾಗಿತ್ತು.
ಈ ವಿಚಾರ ಕೆಲವು ದಿನಗಳ ನಂತರ ಹೊರ ಜಗತ್ತಿಗೆ ಗೊತ್ತಾಗಿ ಪೊಲೀಸರು 17 ಆರೋಪಿಗಳನ್ನ ಅರೆಸ್ಟ್ ಮಾಡಿದ್ದರು. ಹೀಗೆ ಹಲವು ವಿಚಾರಣೆ ಬಳಿಕ ಅಂತಿಮವಾಗಿ ನಟ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿ ರೇಣುಕಾಸ್ವಾಮಿ ಕೊಲೆ ಕೇಸ್ 17 ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಇದೀಗ ಆರೋಪಿಗಳಿಗೆ ದೊಡ್ಡ ಆಘಾತವೇ ಎದುರಾಗಿದೆ, ನಟ ದರ್ಶನ್ ಅವರು ಮತ್ತೆ ಜೈಲು ಸೇರಿದ್ದಾರೆ. ಇಂತಹ ಸಮಯದಲ್ಲೇ ಸೋಷಿಯಲ್ ಮೀಡಿಯಾ ಯುದ್ಧ ಕೂಡ ಜೋರಾಗಿದೆ.












Click it and Unblock the Notifications