Darshan Thoogudeepa: ‘ಡೆವಿಲ್’ ಎಂಟ್ರಿ ಗ್ಯಾರಂಟಿ, ಶುರುವಾಗಲಿದೆ ಡಿ-ಬಾಸ್ ದರ್ಶನ್ ತೂಗುದೀಪ್ ಹೊಸ ಸಿನಿಮಾ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ನಿನ್ನೆ ಮತ್ತೊಮ್ಮೆ ದೀಪಾವಳಿ ಹಬ್ಬ ಮಾಡಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿದ್ದು, ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಯಾವುದೇ ರೀತಿಯ ಅಡೆತಡೆ ಇಲ್ಲ. ಹೀಗೆ ಅಭಿಮಾನಿಗಳ ಪಾಲಿನ ದಾಸ ದರ್ಶನ್ ಅವರಿಗೆ ಜಾಮೀನು ಸಿಗುತ್ತಿದ್ದಂತೆ, 'ಡೆವಿಲ್' ಸಿನಿಮಾ ಬಗ್ಗೆ ಚರ್ಚೆ ಶುರುವಾಗಿ 'ಡೆವಿಲ್' ಎಂಟ್ರಿ ಗ್ಯಾರಂಟಿ, ಶುರುವಾಗಲಿದೆ ಡಿ-ಬಾಸ್ ದರ್ಶನ್ ತೂಗುದೀಪ್ ಹೊಸ ಸಿನಿಮಾ....
14 ವರ್ಷ ವನವಾಸ ಅಲ್ಲ, 6 ತಿಂಗಳ ಒದ್ದಾಟ & ಜೈಲು ವಾಸದಿಂದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ಮುಕ್ತರಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೀಗೆ ಸಿಲುಕಿ ಡಿ-ಬಾಸ್ ದರ್ಶನ್ ತೂಗುದೀಪ್ ಮೊದಲಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆ ನಂತರ ಬಳ್ಳಾರಿ ಜೈಲಿಗೆ ಅವರನ್ನ ಶಿಫ್ಟ್ ಮಾಡಲಾಗಿತ್ತು. ಹೀಗಿದ್ದಾಗಲೇ ನಿನ್ನೆ ಅಂದ್ರೆ ಶುಭ ಶುಕ್ರವಾರ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿದ್ದು, 'ಡೆವಿಲ್' ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ....

ಡಿ-ಬಾಸ್ 'ಡೆವಿಲ್' ಸಿನಿಮಾ ಶೂಟಿಂಗ್....
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಜಾಮೀನು ಪಡೆದು ಹೊರಗೆ ಬರುತ್ತಿದ್ದಂತೆ ಇದೀಗ ಹೊಸ ಸಂಚಲನ ಸೃಷ್ಟಿ ಆಗಿದೆ. ಅದು ಏನಂದ್ರೆ, ಕೋಟಿ ಕೋಟಿ ಅಭಿಮಾನಿಗಳು ಉಸಿರು ಬಿಗಿ ಹಿಡಿದುಕೊಂಡು ಕಾಯುತ್ತಿದ್ದ 'ಡೆವಿಲ್' ಸಿನಿಮಾ ಶೂಟಿಂಗ್ ಮತ್ತೆ ಶುರುವಾಗುವ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ.
ಈ ಮೂಲಕ 'ಡೆವಿಲ್' ಸಿನಿಮಾ ಶೂಟಿಂಗ್ ಆದಷ್ಟು ಬೇಗನೇ ಮುಗಿದು, ಇನ್ನೇನು ಕೆಲವೇ ದಿನಗಳಲ್ಲಿ 'ಡೆವಿಲ್' ಸಿನಿಮಾ ತೆರೆಗೆ ಅಪ್ಪಳಿಸಲಿದೆ ಎಂಬ ನಿರೀಕ್ಷೆಗಳು ಕೂಡ ಈಗ ಮೂಡಿದೆ. ಹೀಗಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ? ಅಂತಾ ಅಭಿಮಾನಿಗಳು ಕಾಯುತ್ತಿದ್ದಾರೆ!
ಬೆಂಗಳೂರಿನಲ್ಲೇ 'ಡೆವಿಲ್' ಸಿನಿಮಾ ಶೂಟಿಂಗ್?
ಕರ್ನಾಟಕ ಹೈಕೋರ್ಟ್ ಇದೀಗ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ನೀಡುವ ವೇಳೆ ಹಲವು ಶರತ್ತು ಅಂದ್ರೆ ನಿಯಮಗಳನ್ನ ವಿಧಿಸಿದೆ. ಇದೀಗ, ಮಾನ್ಯ ಕರ್ನಾಟಕ ಹೈಕೋರ್ಟ್ ವಿಧಿಸಿರುವ ನಿಯಮಗಳ ಪ್ರಕಾರ ದರ್ಶನ್ ತೂಗುದೀಪ್ ಅವರು ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿ ಶೂಟಿಂಗ್ ಮಾಡಲು ಆಗೋದಿಲ್ಲ. ಹೀಗಾಗಿ ಮೈಸೂರಲ್ಲಿ ನಡೆಯುತ್ತಿದ್ದ 'ಡೆವಿಲ್' ಸಿನಿಮಾ ಶೂಟಿಂಗ್ ಕನ್ನಡಿಗರ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಆಗುತ್ತಾ? ಎಂಬ ಡೌಟ್ ಮೂಡಿದೆ.











Click it and Unblock the Notifications