Darshan Sudeep: ಒಂದೇ ಸ್ಥಳದಲ್ಲಿ ದರ್ಶನ್ ಸುದೀಪ್ ಶೂಟಿಂಗ್
ಸ್ಯಾಂಡಲ್ವುಡ್ ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ಸಿನಿಮಾ ಅಪ್ಡೇಟ್ ಅಂದರೆ ಸಾಕು ಜನ ಸಿಕ್ಕಾಪಟ್ಟೆ ಆಸಕ್ತಿ ವಹಿಸುತ್ತಾರೆ. ಇದೀಗ ಇವರಿಬ್ಬರ ಸಿನಿಮಾ ಅಪ್ಡೇಟ್ ನೋಡುವುದಾದರೆ ಸುದೀಪ್ ಅವರ ಬಿಲ್ಲ ರಂಗ ಬಾಷಾ ಹಾಗೂ ದರ್ಶನ್ ಅವರ ಡೆವಿಲ್ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಈ ಎರಡೂ ಸಿನಿಮಾ ಶೂಟಿಂಗ್ ಅನ್ನು ಒಂದೇ ಸ್ಥಳದಲ್ಲಿ ಮಾಡಲಾಗುತ್ತಿದೆ. ಹೀಗಾಗಿ ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಾಗಿದೆ.
ಬೆಂಗಳೂರು ಕಂಠೀರವ ಸ್ಟುಡಿಯೋದಲ್ಲಿ ಈಗಾಗಲೇ ಬಿಲ್ಲ ರಂಗ ಬಾಷಾ ಸಿನಿಮಾ ಶೂಟಿಂಗ್ಗಾಗಿ ಬೃಹತ್ ಆಕಾರದ ಸೆಟ್ ಹಾಕಲಾಗಿದೆ. ಅದೇ ರೀತಿ ಪ್ರಕಾಶ್ ನೀಲ್ ಅವರು ನಿರ್ದೇಶನದ ಡೆವಿಲ್ ಸಿನಿಮಾ ಶೂಟಿಂಗ್ ಸೆಟ್ ಕೂಡ ಅದರ ಪಕ್ಕದಲ್ಲಿ ಹಾಕಿದ್ದಾರೆ. ಹೀಗಾಗಿ ಒಂದೇ ಜಾಗದಲ್ಲಿ ಬಿಆರ್ಬಿ ಹಾಗೂ ಡೆವಿಲ್ ಸಿನಿಮಾ ಶೂಟಿಂಗ್ ನಡೆಯುತ್ತಿವೆ.

ಬಿಲ್ಲ ರಂಗ ಬಾಷಾ ಸುದೀಪ್ ಅವರ ಸಿನಿ ಜರ್ನಿಯಲ್ಲಿ ಬಿಗೆಸ್ಟ್ ಸಿನಿಮಾ ಆಗಿದೆ. ಇದರಲ್ಲಿ ಸುದೀಪ್ ಅವರು ಮೂರು ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ ಬಿಆರ್ಬಿ ಶೂಟಿಂಗ್ ಕೂಡ ಹೈ ಸೆಕ್ಯೂರ್ ಆಗಿ ನಡೆಯುತ್ತಿದೆ. ಈ ಬಗ್ಗೆ ಈಗಾಗಲೇ ಸಾಕಷ್ಟು ಸುದ್ದಿಗಳು ಆಗಿವೆ.
ಮತ್ತೊಂದು ಕಡೆ ದರ್ಶನ್ ಅವರ ಡೆವಿಲ್ ಸಿನಿಮಾ ರಾಜಕೀಯ ಆಧಾರಿತ ಸಿನಿಮಾ ಆಗಿದೆ. ಡೆವಿಲ್ ಸಿನಿಮಾದಲ್ಲಿ ದರ್ಶನ್ ರಾಜ್ಯದ ಸಿಎಂ ಆಗಿ ನಟಿಸುತ್ತಿದ್ದಾರೆ. ಈ ಸಿನಿಮಾ ದರ್ಶನ್ ಅವರ ಸ್ಪೆಷಿಯಲ್ ಸಿನಿಮಾ ಆಗುವುದರಲ್ಲಿ ಅನುಮಾನವೇ ಇಲ್ಲ.
ಅಲ್ಲದೆ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ ಆಗಿ ಸಾಕಷ್ಟು ಕಷ್ಟಪಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರಿಗೆ ಬೆನ್ನು ನೋವು ಕಾಲು ನೋವು ಇದ್ದರೂ ಕೂಡ ಶೂಟಿಂಗ್ನಲ್ಲಿ ನಿರಂತರವಾಗಿ ಭಾಗವಹಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಕಾನೂನು ಸಮರ ಎದುರಿಸುತ್ತಿದ್ದು ಕೋರ್ಟ್ ಕಚೇರಿ ಅಲೆದಾಡುತ್ತಿರುವುದು ಇದ್ದೇ ಇದೆ. ಇದೆಲ್ಲಾದರ ನಡುವೆ ದರ್ಶನ್ ಸಿನಿಮಾ ಶೂಟಿಂಗ್ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಸಿನಿಮಾ ಅದ್ಭುತವಾಗಿ ಮೂಡಿಬರಲಿದೆ ಎನ್ನುವ ನಿರೀಕ್ಷೆ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಒಟ್ಟಿನಲ್ಲಿ ಬಿಆರ್ಬಿ ಹಾಗೂ ಡೆವಿಲ್ ಸ್ಯಾಂಡಲ್ವುಡ್ನ ಮೋಸ್ಟ್ ಎಕ್ಸಪೆಕ್ಟೆಡ್ ಸಿನಿಮಾಗಳು ಆಗಿವೆ. ಕನ್ನಡ ಚಿತ್ರರಂಗದಲ್ಲಿ ಯಾರೂ ಕೂಡ ಶಾಶ್ವತ ಅಲ್ಲ. ಇದಷ್ಟು ದಿನ ಅಭಿಮಾನಿಗಳನ್ನು ರಂಜಿಸುತ್ತಾ ಹೆಚ್ಚು ಸಿನಿಮಾಗಳನ್ನು ಮಾಡಿ ಅನ್ನೋದು ನಮ್ಮ ಆಶಯ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications