ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ಕೇಸ್: ಜೈಲಾಧಿಕಾರಿಗಳ ವಿಚಾರಣೆಗೆ ಅನುಮತಿ- ದಾಸನಿಗೆ ಮತ್ತೊಂದು ಸಂಕಷ್ಟ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುವಾಸ ಅನುಭವಿಸುವ ಸಮಯದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ ಜೈಲಾಧಿಕಾರಿಗಳ ವಿಚಾರಣೆಗೆ ಪರ್ಮಿಟ್ ಸಿಕ್ಕಿದೆ. ಹೀಗಾಗಿ ದಾಸನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಪ್ರಸ್ತುತ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಕೇಸ್ಗಳು ದಾಖಲಾಗಿದ್ದವು. ಆರು ತಿಂಗಳ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಾಧಿಕಾರಿಗಳ ವಿಚಾರಣೆಗೆ ಅನುಮತಿ ಸಿಕ್ಕಿದೆ.

ಆರು ತಿಂಗಳ ಬಳಿಕ ಪ್ರಾಸಿಕ್ಯೂಷನ್ಗೆ ಗೃಹ ಇಲಾಖೆ ಅನುಮತಿ ನೀಡಿದೆ. ಹೀಗಾಗಿ ಕಳೆದೊಂದು ವಾರದಿಂದ ಜೈಲು ಸಿಬ್ಬಂದಿಯ ವಿಚಾರಣೆ ಮಾಡಲಾಗುತ್ತಿದ್ದು ಪಿಸಿ ಆಕ್ಟ್ ಅಡಿಯಲ್ಲಿ ತನಿಖೆ ಮಾಡಿ ಜೈಲು ಸಿಬ್ಬಂದಿ ಹೇಳಿಕೆ ದಾಖಲು ಮಾಡಲಾಗುತ್ತಿದೆ.
ರಾಜಾತಿಥ್ಯ: ಮೂರು ಕೇಸ್ ದಾಖಲು
ಹೌದು ದರ್ಶನ್ಗೆ ರಾಜಾತಿಥ್ಯ ನೀಡಿದ ಸಂಬಂಧ ಮೂರು ಕೇಸ್ಗಳು ದಾಖಲಾಗಿದ್ದವು. ಮೊದಲನೆಯದ್ದು ದರ್ಶನ್ ಕೈಗೆ ಸಿಗರೇಟ್ ಬಂದಿದ್ದು ಹೇಗೆ? ಎರಡನೇ ಪ್ರಕರಣದಲ್ಲಿ ಜೈಲಿನಲ್ಲಿ ಮೊಬೈಲ್ ಬಳಕೆ, ಯಾರ ಕೈವಾಡ? ಅಧಿಕಾರಿಗಳ ಪಾತ್ರ ಕಳ್ಳಾಟದ ಬಗ್ಗೆ ಮೂರನೇಯ ಪ್ರಕರಣ ದಾಖಲಿಸಲಾಗಿತ್ತು.
ಇದೀಗ ಈ ಮೂರು ಪ್ರಕರಣಗಳನ್ನು ಪಿಸಿ ಆಕ್ಟ್ ಅಡಿಯಲ್ಲಿ ತನಿಖೆ ಮಾಡಲಾಗುತ್ತಿದೆ. ಮೂರು ಪ್ರಕರಣದಲ್ಲಿ ಅಧಿಕಾರಿಗಳ ಕೈವಾಡದ ಬಗ್ಗೆ ಸಾಕ್ಷಿಗಳು ಲಭ್ಯವಾಗಿವೆ. ಹೀಗಾಗಿ ದರ್ಶನ್ಗೆ ಮತ್ತೊಂದು ಸಂಕಷ್ಟ ಶುರುವಾಗಿದೆ.

ವಿಲ್ಸನ್ ಗಾರ್ಡನ್ ನಾಗಾ ಚೇರ್ ಮೇಲೆ ಕುಳಿತು ಕೈಯಲ್ಲಿ ಸಿಗರೇಟ್ ಅನ್ನು ಹಿಡಿದು ಕಾಫಿ ಕುಡಿಯುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದೆ. ಈ ಪ್ರಕರಣದಲ್ಲಿ ಜೈಲು ಅಧಿಕಾರಿಗಳು ಸೇರಿದಂತೆ ಯಾರು ಸಿಗರೇಟ್ ನೀಡಿದ್ದರು ಅವರ ವಿರುದ್ಧ ಕೇಸ್ ದಾಖಲಾಗಿತ್ತು.
ಮೂರು ಜನ ಪೊಲೀಸ್ ತಂಡ ಈ ಪ್ರಕರಣವನ್ನು ತನಿಖೆ ಮಾಡಿ ರಿಪೋರ್ಟ್ ಅನ್ನು ಸಲ್ಲಿಸಿತ್ತು. ಆದರೆ ಜೈಲು ಸಿಬ್ಬಂದಿ ವಿಚಾರಣೆಗೆ ಪೊಲೀಸರಿಗೆ ಅನುಮತಿ ಇಲ್ಲದ ಕಾರಣಕ್ಕೆ ಗೃಹ ಇಲಾಖೆಗೆ ಪೊಲೀಸರು ಅನುಮತಿ ಕೋರಿದ್ದರು. ಇದಕ್ಕೆ ಅನುಮತಿ ಮೇರೆಗೆ ಕಳೆದ ಒಂದು ವಾರದಿಂದ ಸಿಬ್ಬಂದಿಗಳ ತನಿಖೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.
ರೌಡಿ ಶೀಟರ್ ನಾಗ ಹಾಗೂ ಇನ್ನಿತರ ಖೈದಿಗಳನ್ನೂ ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಜೈಲಿನಲ್ಲಿ ದರ್ಶನ್ ಅವರಿಗೆ ಯಾವ ರೀತಿಯಾಗಿ ಸೌಲಭ್ಯಗಳು ಸಿಗುತ್ತಿದ್ದವು ಅನ್ನೋದರ ಬಗ್ಗೆ ಈಗ ತನಿಖೆ ನಡೆಯುತ್ತಿವೆ. ಈ ಘಟನೆಯ ಬಳಿಕ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಇದರಿಂದ ಯಾರಿಗೆಲ್ಲಾ ಸಂಕಷ್ಟ ಎದುರಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications