ದರ್ಶನ್ ವಿರುದ್ಧ ರೊಚ್ಚಿಗೆದ್ದ ಉತ್ತರ ಕರ್ನಾಟಕ ಮಂದಿ?
ದರ್ಶನ್ ವಿರುದ್ಧ ಕೇಳಿಬಂದ ಭೀಕರ ಕೊಲೆ ಆರೋಪ ಈಗ ದಿನಕ್ಕೆ ಒಂದೊಂದು ತಿರುವು ಪಡೆದು ಸಂಚಲನ ಸೃಷ್ಟಿಸಿದೆ. ಅದರಲ್ಲೂ ಇದೀಗ ಕೊಲೆ ಆರೋಪ ಕೇಳಿಬಂದಿರುವ ದರ್ಶನ್ ಜೈಲಿನಲ್ಲಿ ರಾತ್ರಿ ಕಳೆದಿದ್ದು, ಹೀಗಿದ್ದಾಗ ಪ್ರಕರಣದಲ್ಲಿ ಕೊಲೆ ಆಗಿರುವ ರೇಣುಕಾಸ್ವಾಮಿ ಉತ್ತರ ಕರ್ನಾಟಕದ ನಂಟು ಹೊಂದಿದ್ದಾರೆ. ಇದು ಉತ್ತರ ಕರ್ನಾಟಕದ ಜನರನ್ನ ರೊಚ್ಚಿಗೇಳುವಂತೆ ಮಾಡಿದೆ. ಈ ಬಗ್ಗೆ ದರ್ಶನ್ ವಿರುದ್ಧ ಅಸಮಾಧಾನ ಕೂಡ ಉತ್ತರ ಕರ್ನಾಟಕದಲ್ಲಿ ಭುಗಿಲೆದ್ದಿದೆ ಎಂಬ ಗಂಭೀರ ಆರೋಪ ಈಗ ಕೇಳಿಬಂದಿದೆ.
ದರ್ಶನ್ ಮತ್ತು ಗ್ಯಾಂಗ್ ಸೇರಿ ಒಬ್ಬ ಯುವಕನ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಸಂಚಲನ ಸೃಷ್ಟಿ ಮಾಡಿದೆ. ಅದ್ರಲ್ಲೂ ನಟ ದರ್ಶನ್ ಕಾರಣಕ್ಕೆ ಈ ಕೊಲೆ ನಡೆದಿದೆ, ದರ್ಶನ್ ತಮ್ಮ ಗೆಳತಿ ಪವಿತ್ರಾ ಗೌಡ ವಿಚಾರಕ್ಕೆ ಬಂದ ರೇಣುಕಾಸ್ವಾಮಿ ಹತ್ಯೆ ಮಾಡಿಸಿದ್ದಾರೆ ಎಂಬ ಆರೋಪ ಇದು. ಹೀಗಿದ್ದಾಗಲೇ ಮತ್ತೊಂದು ಬೆಂಕಿ ಹೊತ್ತಿಕೊಂಡಿದೆ, ಅದು ಏನೆಂದರೆ ರೇಣುಕಾಸ್ವಾಮಿ ಹತ್ಯೆಗೆ ಉತ್ತರ ಕರ್ನಾಟಕದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಯಾಕಂದ್ರೆ ಮೃತ ರೇಣುಕಾಸ್ವಾಮಿ ಉತ್ತರ ಕರ್ನಾಟಕ ಮೂಲದ ವ್ಯಕ್ತಿ ಎಂಬ ಕಾರಣಕ್ಕೆ ಈ ರೀತಿ ಕೆಟ್ಟದಾಗಿ ನಡೆಸಿಕೊಂಡು, ವಿಕೃತವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಅದೇ ಬೆಂಗಳೂರು ಅಥವಾ ಸುತ್ತಮುತ್ತಲ ಪ್ರದೇಶದ ವ್ಯಕ್ತಿ ಆಗಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಆಗ ಭಯ ಇರುತ್ತಿತ್ತು, ಆದರೆ ಉತ್ತರ ಕರ್ನಾಟಕದ ಮೂಲದ ರೇಣುಕಾಸ್ವಾಮಿ ಅವರನ್ನ ವಿಕೃತವಾಗಿ ಹಿಂಸೆ ನೀಡಿ ಈ ರೀತಿ ಕೊಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡುತ್ತಿದ್ದಾರೆ ದರ್ಶನ್ ವಿರೋಧಿಗಳು.
ಕೊಲೆ ಪ್ರಕರಣದಲ್ಲಿ ದರ್ಶನ್ ಆರೋಪಿ!
ನಟ ದರ್ಶನ್ ವಿರುದ್ಧ ಇದೀಗ ಕೇಳಿಬಂದಿರುವುದು ಕೊಲೆ ಆರೋಪ ಆಗಿದೆ. ಈ ಕಾರಣಕ್ಕೆ ದರ್ಶನ್ ಸುಲಭವಾಗಿ ಜಾಮೀನು ಪಡೆಯುವುದು ಅಸಾಧ್ಯ. ಮತ್ತೊಂದ್ಕಡೆ ಈಗ ಜಾಮೀನಿಗೆ ಪ್ರಯತ್ನ ಶುರು ಮಾಡಿದರೂ ಮುಂದಿನ 3 ತಿಂಗಳ ಕಾಲ ಜಾಮೀನು ಸಿಗುವುದೇ ಅನುಮಾನ ಅಂತಿದ್ದಾರೆ ಕಾನೂನು ತಜ್ಞರು. ಹೀಗಾಗಿ ದೊಡ್ಡ ಸಂಚಲನ ಸೃಷ್ಟಿ ಆಗಿದೆ. ಮತ್ತೊಂದು ಕಡೆ, ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುವುದು ಕೂಡ ಬಹುತೇಕ ಪಕ್ಕಾ ಅಂತಿದ್ದಾರೆ ಅವರ ವಿರೋಧಿಗಳು ಈ ನಡುವೆ ಮೃತ ರೇಣುಕಾಸ್ವಾಮಿ ಅವರ ಅಪ್ಪ & ಅಮ್ಮ, ಪತ್ನಿ ಚಿಂತೆಯಲ್ಲಿ ಮುಳುಗಿದ್ದಾರೆ. ಹಾಗೇ ರೇಣುಕಾಸ್ವಾಮಿ ಅವರ ಪತ್ನಿ ಈಗ ಗರ್ಭಿಣಿ ಆಗಿದ್ದಾರೆ.
ಆಂಧ್ರ ಅಲ್ಲ ಗುರೂ ಇದು ಕರ್ನಾಟಕ!
ಹೌದು ಇದೀಗ ದರ್ಶನ್ ವಿರುದ್ಧ ಕೇಳಿಬಂದಿರುವ ವಿಕೃತ ಕೊಲೆ ಆರೋಪ ಕನ್ನಡ ನಾಡಿನಲ್ಲಿ ಜನರನ್ನ ರೊಚ್ಚಿಗೆಬ್ಬಿಸಿದೆ. ಅದರಲ್ಲೂ ರೇಣುಕಾಸ್ವಾಮಿಗೆ ವಿಪರೀತ ಟಾರ್ಚರ್ ಕೊಟ್ಟು ಹೀಗೆ ಕೊಲೆ ಮಾಡಲಾಗಿದೆ ಎಂಬ ಆರೋಪ ದರ್ಶನ್ & ಗ್ಯಾಂಗ್ ಅಂದ್ರೆ ಡಿ-ಗ್ಯಾಂಗ್ ಹಣೆಗೆ ಸುತ್ತಿದೆ. ದರ್ಶನ್ ಘಟನೆ ಕನ್ನಡ ನಾಡಿನಲ್ಲಿ ಕೊತ ಕೊತ ಕುದಿಯುವಂತೆ ಮಾಡಿದ್ದೂ ಅಲ್ಲದೆ ಆಕ್ರೋಶ ಮೂಡುವಂತೆ ಮಾಡಿದೆ.
ದರ್ಶನ್ಗೆ ಇದೀಗ ಕನ್ನಡ ಸಿನಿಮಾ ಅಭಿಮಾನಿಗಳು, 'ಆಂಧ್ರ ಅಲ್ಲ ಗುರೂ ಇದು ಕರ್ನಾಟಕ' ಅಂತಿದ್ದಾರೆ. ಈ ರೀತಿ ಆಂಧ್ರ ಪ್ರದೇಶ ಅಥವಾ ತೆಲಂಗಾಣ ರಾಜ್ಯದಲ್ಲಿ ನಡೆಯಬಹುದೋ ಏನೋ ಆದರೆ ಕರ್ನಾಟಕದ ನೆಲದಲ್ಲಿ ಇಂತಹ ಕೃತ್ಯಗಳು ನಡೆಯಲ್ಲ. ಉತ್ತರ ಪ್ರದೇಶ, ಬಿಹಾರ ರೀತಿ ನಮ್ಮ ರಾಜ್ಯ ಅಲ್ಲ ಅಂತ ಈಗ ಸೋಷಿಯಲ್ ಮೀಡಿಯಾದಲ್ಲಿ ಮಾತನಾಡುತ್ತಿದ್ದಾರೆ ಕನ್ನಡಿಗರು.
ದರ್ಶನ್ & ಗ್ಯಾಂಗ್ಗೆ ಅನ್ನ-ಸಾರು!
ಪ್ರತಿದಿನ ಎಣ್ಣೆ ಹೊಡೆದು, ಸಖತ್ ಎಂಜಾಯ್ ಮಾಡುತ್ತಾ ಮಾಂಸ ತಿನ್ನುತ್ತಿದ್ದ ನಟ ದರ್ಶನ್ & ಗ್ಯಾಂಗ್ ಈಗ ಅನ್ನ ಸಾರು ತಿಂದು ಮಲಗುವ ಪರಿಸ್ಥಿತಿ ಬಂದಿದೆ. ಪೊಲೀಸರು ಆರೋಪಿಗಳ ತಂಡಕ್ಕೆ ಅನ್ನ ಸಾರು ನೀಡಿ, ಚಾಪೆ ಕೊಟ್ಟು ಮಲಗಿಸಿದ್ದಾರೆ. ಈ ಮೂಲಕ ಕೊಲೆ ಆರೋಪದ ಹಿನ್ನೆಲೆ ಕಂಬಿ ಹಿಂದೆ ಬಿದ್ದಿರುವ, ಸೋ ಕಾಲ್ಡ್ ಡಿ-ಬಾಸ್ ಇದೀಗ ಹಿಂಸೆ ಅನುಭವಿಸುತ್ತಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ದರ್ಶನ್ ಅವರ ಬೆನ್ನುಹತ್ತುವ ಅಪಾಯ ಕಾಡುತ್ತಿದ್ದು, ಏನಾಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ಮತ್ತೊಂದು ಕಡೆ ತೂಗುದೀಪ ದರ್ಶನ್ ಅವರ ಅಭಿಮಾನಿಗಳು ಸೈಲೆಂಟ್ ಆಗುತ್ತಿದ್ದಾರೆ.
ಪತ್ರಕರ್ತರ ತೀವ್ರ ಆಕ್ರೋಶ!
ಪೊಲೀಸ್ ಅಧಿಕಾರಿಗಳ ವರ್ತನೆಯಿಂದ ಮಾಧ್ಯಮ ಸಿಬ್ಬಂದಿ ಆಕ್ರೋಗೊಂಡಿದ್ದಾರೆ ಎಂಬ ಆರೋಪಗಳ ಬೆನ್ನಲ್ಲೇ, ದರ್ಶನ್ ಅಭಿಮಾನಿ ಮಾಧ್ಯಮಗಳ ಎದುರಿಗೆ ಬಂದು ಮಾಧ್ಯಮಗಳ ಕುರಿತು ತುಂಬ ಕೀಳಾಗಿ ಮಾತನಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ವೇಳೆ ಅಲ್ಲಿದ್ದ ಮಾಧ್ಯಮ ಸಿಬ್ಬಂದಿ ದಿಢೀರ್ ರೊಚ್ಚಿಗೆದ್ದಿದ್ದು ಆತನ ಮುಖಚರಿ ಸೆರೆಹಿಡಿಯಲು ಹೋಗಿದ್ದಾರೆ. ಈ ವೇಳೆ ಹೆದರಿದ ದರ್ಶನ್ ಅಭಿಮಾನಿ, ಆ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಇಷ್ಟಾದರೂ ಮಾಧ್ಯಮಗಳ ಸಿಬ್ಬಂದಿ ಆತನ ಹಿಂದೆ ಓಡಿದ್ದಾರೆ. ಆಗ ತಕ್ಷಣ ಪೊಲೀಸರು ಆತನನ್ನ ಪೊಲೀಸ್ ಠಾಣೆ ಒಳಗೆ ಕರೆದುಕೊಂಡು ಹೋಗಿದ್ದಾರೆ. ಹಾಗೇ ಆತನಿಗೆ ಅವರದ್ದೇ ಭಾಷೆಯಲ್ಲಿ ಬುದ್ಧಿ ಹೇಳಿ, ರುಚಿ ತೋರಿಸಿದ್ದಾರೆ ಎನ್ನಲಾಗಿದೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.












Click it and Unblock the Notifications