Darshan Thoogudeepa: ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪ್ರತಿ ತಿಂಗಳು ನೀಡಲು ದರ್ಶನ್ ತೂಗುದೀಪ್...

ದರ್ಶನ್ ತೂಗುದೀಪ್ ಕಲಿಯುಗದ ಕರ್ಣ, ದರ್ಶನ್ ತೂಗುದೀಪ್ ಮಾಡಿರುವ ಸಹಾಯವನ್ನ ಕೋಟಿ ಕೋಟಿ ರೂಪಾಯಿಗಳಲ್ಲಿ ಲೆಕ್ಕ ಹಾಕಲು ಆಗಲ್ಲ ಎಂಬುದು ದರ್ಶನ್ ತೂಗುದೀಪರ ಅಭಿಮಾನಿಗಳ ಮಾತು. ಅದರಲ್ಲೂ ದರ್ಶನ್ ತೂಗುದೀಪ್ ತಮ್ಮ ಮನೆಯ ಎದುರು ಬಂದು ಸಹಾಯ ಕೇಳುತ್ತಿದ್ದ ಯಾರನ್ನೂ ಬರಿಗೈನಲ್ಲಿ ಕಳುಹಿಸಿಲ್ಲ ಎಂಬುದಾಗಿ ಫ್ಯಾನ್ಸ್ ಹೇಳ್ತಾರೆ. ಹೀಗಿದ್ದಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರಂತೆ, ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪ್ರತಿ ತಿಂಗಳು ನೀಡಲು ದರ್ಶನ್ ತೂಗುದೀಪ್...

ಅದರಲ್ಲೂ ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ತೂಗುದೀಪ್ ಅವರದ್ದು ಯಾವುದೇ ಪಾತ್ರ ಇಲ್ಲ, ಆದರೂ ದರ್ಶನ್ ಅವರನ್ನು ಈ ಕೊಲೆ ಕೇಸ್‌ನಲ್ಲಿ ಬೇಕು ಅಂತಾ ಸಿಲುಕಿಸಲಾಗಿದೆ ಎಂಬ ಆರೋಪ ಇದೆ. ಇಂತಹ ಸಮಯ ಎದುರಾಗಿರುವಾಗ, ದರ್ಶನ್ ತೂಗುದೀಪ್ ಒಂದು ಮಹತ್ವದ ತೀರ್ಮಾನ ಮಾಡಿದ್ದಾರಂತೆ. ಅದು ಏನಂದ್ರೆ, ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪ್ರತಿ ತಿಂಗಳು ನೀಡಲು ದರ್ಶನ್ ತೂಗುದೀಪ್...

Darshan Thoogudeepa May Give Money To Renukaswamy Family For This Reason

ದರ್ಶನ್ ತೂಗುದೀಪ್ ಅವರು ತಮ್ಮ ಜೀವನದಲ್ಲಿ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದು, ನೂರಾರು ಮಕ್ಕಳ ಸ್ಕೂಲ್ ಫೀಸ್ ಕಟ್ಟಿದ್ದಾರೆ. ಹಾಗೇ ಸಾವಿರಾರು ಜನರ ಆಸ್ಪತ್ರೆಗೆ ಕೋಟಿ, ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂದು ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಹೀಗಿದ್ದಾಗಲೇ, ದರ್ಶನ್ ತೂಗುದೀಪ್ ಅವರನ್ನ ಬಳ್ಳಾರಿ ಜೈಲಿನಿಂದ ರಿಲೀಸ್ ಮಾಡಿಸಿಕೊಂಡು ಬರಲೇ ಬೇಕು & ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಸಂಪೂರ್ಣವಾಗಿ ದರ್ಶನ್ ತೂಗುದೀಪ್ ಹೊರಗೆ ಬರಬೇಕು ಎಂಬುದು ಅವರ ಅಭಿಮಾನಿಗಳ ಆಸೆ.

10 ಲಕ್ಷ ರೂಪಾಯಿ ಪ್ರತಿ ತಿಂಗಳು....

ಇದನ್ನು ಅರ್ಥ ಮಾಡಿಕೊಂಡಿರುವ ದರ್ಶನ್ ತೂಗುದೀಪ್ ಕುಟುಂಬಸ್ಥರು, ಇದೀಗ ದಿಢೀರ್ ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪ್ರತಿ ತಿಂಗಳು ನೀಡಲು ಒಪ್ಪಿಗೆಯನ್ನೂ ನೀಡಿದ್ದಾರಂತೆ. ಈ ಬಗ್ಗೆ ಬಳ್ಳಾರಿ ಜೈಲಿಗೆ ಹೊದಾಗ ದರ್ಶನ್ ತೂಗುದೀಪ್ ತಮ್ಮ ಕುಟುಂಬ ಸದಸ್ಯರ ಜೊತೆಗೆ ಮಾತನಾಡಿದ್ದು, ಇನ್ನೇನು ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿನಿಂದ ಹೊರಗೆ ಬಂದ ತಕ್ಷಣ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದಾಗ ನಟ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಹಣ ಪ್ರತಿ ತಿಂಗಳು ನೀಡುವ ಮಾತು ಕೊಡುತ್ತಾರೆ ಅಂತಾ ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಹೇಳ್ತಿದ್ದಾರೆ. ಆದ್ರೆ ಈ ಬಗ್ಗೆ ಈವರೆಗೂ ನಟ ದರ್ಶನ್ ತೂಗುದೀಪ್ ಅವರ ಕುಟುಂಬ ಸ್ಪಷ್ಟನೆ ನೀಡಿಲ್ಲ ಅಥವಾ ಅಧಿಕೃತ ಹೇಳಿಕೆಯ ಕೊಟ್ಟಿಲ್ಲ.

ದರ್ಶನ್ ತೂಗುದೀಪ್ ಮಂಗಳವಾರ ರಿಲೀಸ್?

ಅಂದಹಾಗೆ ಒಂದು ಕಡೆ ರೇಣುಕಾಸ್ವಾಮಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪ್ರತಿ ತಿಂಗಳು ನೀಡುವ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ಹೊರಗೆ ಬರುವ ಬಗ್ಗೆ ಕೂಡ ಚರ್ಚೆ ಜೋರಾಗಿದೆ. ಅದರಲ್ಲೂ ಮಂಗಳವಾರವೇ ದರ್ಶನ್ ತೂಗುದೀಪ್ ಅವರು ಜೈಲಿನಿಂದ ರಿಲೀಸ್ ಆಗಿ ಹೊರಗೆ ಬರಲಿದ್ದಾರೆ ಅಂತಿದ್ದಾರೆ ಅವರ ಅಭಿಮಾನಿಗಳು.

ರೇಣುಕಾಸ್ವಾಮಿ ದೆವ್ವ ಕಾರಣ ದರ್ಶನ್...

ಭಾರತದ ಮೂಲೆ ಮೂಲೆಯಲ್ಲಿ ಕೂಡ ದರ್ಶನ್ ಅವರ ಸಿನಿಮಾಗಳನ್ನ ನೋಡುತ್ತಾರೆ ಅಭಿಮಾನಿಗಳು. ಹೀಗಿದ್ದಾಗಲೇ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲು ಸೇರಿರುವ ದರ್ಶನ್ ತೂಗುದೀಪ್ ಅವರು ಬಾತ್‌ರೂಂನಲ್ಲಿ ಜಾರಿ ಬಿದ್ದು, ತಲೆಗೆ ಗಂಭೀರ ಗಾಯವಾಗಿದೆ ಎಂಬ ಸುದ್ದಿ ಹಬ್ಬಿದೆ. ಹೀಗೆ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನ ಬಾತ್‌ರೂಂನಲ್ಲಿ ಜಾರಿ ಬಿದ್ದು, ತಲೆಗೆ ಗಂಭೀರವಾದ ಏಟು ಬೀಳಲು ರೇಣುಕಾಸ್ವಾಮಿ ದೆವ್ವ ಕಾರಣ ಎಂಬ ಆರೋಪವನ್ನ ಕೆಲವರು ಈಗ ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ರೀತಿ ಸುದ್ದಿ ಹಬ್ಬಿದೆ.

ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ್ ಅವರು ಬಾತ್‌ರೂಂನಲ್ಲಿ ಜಾರಿ ಬಿದ್ದು, ತಲೆಗೆ ಗಂಭೀರ ಗಾಯವಾಗಿದೆ ಎಂಬ ಸುದ್ದಿ ಹಬ್ಬಿದೆ ನಿಜ. ಆದರೆ ಈವರೆಗೂ ದರ್ಶನ್ ತೂಗುದೀಪ್ ಅವರು ಬಾತ್‌ರೂಂನಲ್ಲಿ ಜಾರಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡ ಬಗ್ಗೆ ಬಳ್ಳಾರಿ ಜೈಲಿನಿಂದ ಅಧಿಕೃತವಾಗಿ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ಅಭಿಮಾನಿಗಳಿಗೆ ಕೂಡ ಹೊರಗೆ ಆತಂಕ ಶುರುವಾಗಿದೆ. ಅದರಲ್ಲೂ ಈ ಪರಿಸ್ಥಿತಿಯಲ್ಲಿ ರೇಣುಕಾಸ್ವಾಮಿ ದೆವ್ವದ ಬಗ್ಗೆ ಭಯ ಕೂಡ ಹೆಚ್ಚಾಗಿದೆ. ಆದರೆ ದರ್ಶನ್ ತೂಗುದೀಪ್ ಅವರ ಕೆಲವು ಅಭಿಮಾನಿಗಳು, ರೇಣುಕಾಸ್ವಾಮಿ ದೆವ್ವದ ಕಥೆಯೇ ಸುಳ್ಳು ಅಂತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+