350 ದಿನಗಳ ನಂತರ ಪ್ರಜ್ವಲ್ ರೇವಣ್ಣ ಇರುವ ಜೈಲಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಶಿಫ್ಟ್... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಭರ್ಜರಿ ಸ್ಟಾರ್ ಆಗಿ ಮೆರೆದಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇದೀಗ ಟೈಮೇ ಸರಿ ಇಲ್ಲ ಅಂತಾ ಅಭಿಮಾನಿಗಳು ಎದೆ ಎದೆ ಬಡಿದುಕೊಂಡು ಅಳುತ್ತಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ತಮ್ಮ ಬಹುಕಾಲದ ಆಪ್ತ ಗೆಳತಿ ಪವಿತ್ರಾ ಗೌಡ ಜೊತೆಗೆ ಮತ್ತೊಮ್ಮೆ ಸೆಂಟ್ರಲ್ ಜೈಲಿಗೆ ಹೋಗಿದ್ದಾರೆ. ಮಾನ್ಯ ಸುಪ್ರೀಂಕೋರ್ಟ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡಿದ ನಂತರ ಸಂಚಲನ ಸೃಷ್ಟಿ ಆಗಿಬಿಟ್ಟಿದೆ. ಹೀಗಿದ್ದಾಗಲೇ, 350 ದಿನಗಳ ನಂತರ ಪ್ರಜ್ವಲ್ ರೇವಣ್ಣ ಇರುವ ಜೈಲಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಶಿಫ್ಟ್...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮುಂದಿನ ಸಿನಿಮಾಗಳಿಗೆ ಅಂತಾನೇ ಕೋಟಿ ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಇದೀಗ ಓಡಾಡುತ್ತಿದೆ. ಅದರಲ್ಲೂ ಮುಂದಿನ ಕೆಲವು ಸಿನಿಮಾಗೆ ಅಂತಾನೇ ಸುಮಾರು 200 ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಕೂಡ ಇದೀಗ ಒಡಾಡುತ್ತಿದೆ. ಆದರೆ ಹೀಗೆ 200 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಇಲ್ಲದೇ ಇದ್ದರೂ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ಮಾತ್ರ ನಡೆಯುತ್ತಲೇ ಇದೆ. ಒಟ್ನಲ್ಲಿ ಇದೆಲ್ಲಾ ಏನೇ ಇರಲಿ, ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕಂಟಕ ಮುಕ್ತರಾಗಿ ಶೀಘ್ರದಲ್ಲೇ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬರಲಿ ಅಂತಾ ಹರಕೆ ಹೊತ್ತು ಬೇಡಿಕೊಳ್ಳುತ್ತಿದ್ದಾರೆ ಕೋಟಿ ಕೋಟಿ ಅಭಿಮಾನಿಗಳು...













Click it and Unblock the Notifications