ಮತ್ತೆ ಜೈಲು ಕೈದಿ ಬಟ್ಟೆ ಧರಿಸಿದ ನಟ ದರ್ಶನ್, ಕಾರಣವೇನು?
ನಟ ದರ್ಶನ್ ತೂಗುದೀಪ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬೆಂಗಳೂರು ಹಾಗೂ ಬಳ್ಳಾರಿ ಜೈಲುಗಳಲ್ಲಿ ತಿಂಗಳುಗಳನ್ನೇ ಕಳೆದರು. ಕಳೆದ ವರ್ಷ ಇದೇ ಸಮಯದಲ್ಲಿ ದರ್ಶನ್ ಅವರು ಜೈಲು ಸೇರಿದ್ದರು. ಕೆಲ ತಿಂಗಳ ಹಿಂದಷ್ಟೇ ಅವರಿಗೆ ಜಾಮೀನು ಸಿಕ್ಕಿದ್ದರಿಂದ ಜೈಲಿನಿಂದ ಹೊರಬಂದು ಸುಧಾರಿಸಿಕೊಂಡಿದ್ದರು. ಇದೀಗ ಮತ್ತೆ ಅವರು ಜೈಲು ಕೈದಿ ಬಟ್ಟೆಯಲ್ಲಿ ಪ್ರತ್ಯಕ್ಷವಾಗಿದ್ದು, ಎಲ್ಲರೂ ಶಾಕ್ಗೆ ಒಳಗಾಗಿದ್ದಾರೆ. ಕೊಲೆ ಕೇಸ್ ವಿಚಾರಣೆ ಇನ್ನೂ ನಡೆಯುತ್ತಿರುವಾಗಲೇ ದಿಢೀರನೆ ಕೈದಿ ಬಟ್ಟೆಯಲ್ಲಿ ದರ್ಶನ್ ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.
ಸಾಮಾನ್ಯವಾಗಿ ಜೈಲಿನಲ್ಲಿರುವ ಕೈದಿಗಳಿಗೆ ಮಾತ್ರವೇ ಈ ವಿಶೇಷ ವಸ್ತ್ರ ನೀಡಲಾಗುತ್ತದೆ. ದರ್ಶನ್ ಅವರು ಇನ್ನೂ ಕೊಲೆ ಕೇಸ್ನ ಆರೋಪಿಯಾಗಿದ್ದಾರೆ. ಈಗ ದಿಢೀರನೆ ಕೈದಿ ವಸ್ತ್ರ ಧರಿಸಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ದರ್ಶನ್ ಮತ್ತೆ ಜೈಲಿಗೆ ಹೋದ್ರಾ ಎಂದು ಹಲವರು ಗಾಬರಿಯಾಗಿದ್ದಾರೆ. ಆದರೆ ದರ್ಶನ್ ಅವರು ಕೈದಿ ವಸ್ತ್ರದಲ್ಲಿ ಕಾಣಿಸಿಕೊಳ್ಳಲು ಕಾರಣ ಇಲ್ಲಿದೆ ನೋಡಿ..

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ವಿಚಾರಣಾಧೀನ ಕೈದಿ ಆಗಿದ್ದರಿಂದ ಅವರು ಜೈಲಿನ ಸಮವಸ್ತ್ರವನ್ನು ಹಾಕಿರಲಿಲ್ಲ. ಆದರೆ ಈಗ ದಿಢೀರನೆ ಜೈಲಿನ ವಸ್ತ್ರದಲ್ಲಿ ದರ್ಶನ್ ಅವರನ್ನು ಕಂಡು ಅಭಿಮಾನಿಗಳು ಕಂಗಾಲಾಗಿದ್ದಾರೆ. ಆದರೆ ಅಸಲಿ ವಿಚಾರವೆಂದರೆ ಸಿನಿಮಾದ ಪಾತ್ರಕ್ಕಾಗಿ ದರ್ಶನ್ ಜೈಲಿನ ಡ್ರೆಸ್ನಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದರ್ಶನ್ ನಟನೆಯ ಡೆವಿಲ್ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಇದರ ಪಾತ್ರಕ್ಕಾಗಿ ಈ ಗೆಟಪ್ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ದರ್ಶನ್ ಅವರ ಪೋಸ್ಟರ್ವೊಂದು ರಿಲೀಸ್ ಆಗಿತ್ತು. ಅದರಲ್ಲಿ ಅಂಬರೀಷ್ ಅವರ ಹಿಟ್ ಪಾತ್ರ ಕನ್ವರ್ಲಾಲ್ನಂತೆ ದರ್ಶನ್ ಕಾಣಿಸಿಕೊಂಡಿದ್ದರು. ಡೆವಿಲ್ ಸಿನಿಮಾದಲ್ಲಿ ದರ್ಶನ್ ಅವರು ಕೈದಿ ಪಾತ್ರಕ್ಕೂ ಬಣ್ಣ ಹಚ್ಚಿದ್ದಾರೆ ಎನ್ನಲಾಗಿದೆ. ಇದರ ಚಿತ್ರೀಕರಣದ ವೇಳೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಅದೇ ಫೋಟೋ ಈಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಗೊಂದಲಗಳಿಗೆ ತೆರೆ ಬಿದ್ದಿದೆ.
ದರ್ಶನ್ ಅವರು ಈ ಹಿಂದೆಯೂ ಹಲವು ಸಿನಿಮಾಗಳಲ್ಲಿ ಕೈದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನವಗ್ರಹ, ಕಾಟೇರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಈಗಾಗಲೇ ಕೈದಿ ಗೆಟಪ್ನಲ್ಲಿ ನಟಿಸಿದ್ದ ಅವರು ಡೆವಿಲ್ ಸಿನಿಮಾದಲ್ಲಿ ವಿಭಿನ್ನ ಕೈದಿ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಥೇಟ್ ಅಂಬರೀಷ್ ಅವರ ಅಂತ ಸಿನಿಮಾದ ಕನ್ವರ್ಲಾಲ್ ಪಾತ್ರವನ್ನೇ ಈ ಸಿನಿಮಾದಲ್ಲೂ ಮುಂದುವರಿಸಲಾಗಿದೆ ಎಂದು ಇತ್ತೀಚೆಗೆ ಚಿತ್ರತಂಡ ಸುಳಿವು ನೀಡಿತ್ತು.
ಈಗ ವೈರಲ್ ಆಗಿರುವ ಫೋಟೋದಲ್ಲಿ ಜೈಲು ವಸ್ತ್ರದ ಮೇಲೆ ಯಾವುದೇ ಕೈದಿ ನಂಬರ್ ಕೂಡ ಇಲ್ಲ. ಕಾಟೇರ ಬಳಿಕ ಡೆವಿಲ್ ಸಿನಿಮಾ ತೆರೆ ಕಾಣಬೇಕಿತ್ತು. ಆದರೆ ಕೊಲೆ ಕೇಸ್ನಲ್ಲಿ ದರ್ಶನ್ ಜೈಲು ಸೇರಿದ್ದರಿಂದ ಶೂಟಿಂಗ್ ಕೂಡ ಅರ್ಧಕ್ಕೆ ನಿಂತಿತ್ತು. ಈಗ ಶೂಟಿಂಗ್ ಭರದಿಂದ ಸಾಗಿದ್ದು, ವರ್ಷಗಳ ಬಳಿಕ ಡೆವಿಲ್ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾತರದಿಂದ ಕಾದಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications