ಸೆಲೆಬ್ರಿಟಿಗಳೇ, ನಮ್ಮ ಧನ್ವೀರ್ ನಟನೆಯ "ಹಯಗ್ರೀವ" ಸಿನಿಮಾ ಗೆಲ್ಲಿಸಿ: ನಟ ದರ್ಶನ್ ಪೋಸ್ಟ್
ನಟ ದರ್ಶನ್ ತೂಗುದೀಪ ಅವರ ಆಪ್ತ ನಟ ಧನ್ವೀರ್ ಗೌಡ ಅಭಿನಯದ 'ಹಯಗ್ರೀವ' ಸಿನಿಮಾ ಇಂದು ತೆರೆಗೆ ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಸ್ತುತ ಜೈಲಿನಲ್ಲಿದ್ದರೂ, ಅವರ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಿಂದ ಧನ್ವೀರ್ ಅವರ ಸಿನಿಮಾಗೆ ಬೆಂಬಲ ಸೂಚಿಸಿರುವ ಪೋಸ್ಟ್ ಎಲ್ಲರ ಗಮನ ಸೆಳೆದಿದೆ. ನಟ ದರ್ಶನ್ ಅವರ ಪರಮ ಆಪ್ತರಾಗಿರುವ ಧನ್ವೀರ್ ಅವರಿಗೆ, ದರ್ಶನ್ ಅವರು ಪೋಸ್ಟ್ ಮೂಲಕ ಚಿತ್ರಕ್ಕೆ ಶುಭ ಹಾರೈಸಿ ಸರ್ಪ್ರೈಸ್ ನೀಡಿದ್ದಾರೆ.
ದರ್ಶನ್ ಅವರ ಎಕ್ಸ್ ಖಾತೆಯಲ್ಲಿ "ನಮ್ಮ ಧನ್ವೀರ್ ಅಭಿನಯದ ಹೊಸ ಸಿನಿಮಾ "ಹಯಗ್ರೀವ" ತೆರೆಗೆ ಬರ್ತಾ ಇದೆ. ಈ ಚಿತ್ರವು ಧನ್ವೀರ್ ಮತ್ತು ಸಂಪೂರ್ಣ ತಂಡದ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಕೊಡಲಿ. ಜನರ ಮನ ಗೆದ್ದುಕೊಂಡು ಸಿನಿಮಾ ಸೂಪರ್ ಹಿಟ್ ಆಗಲಿ ಎಂದು ಹೃದಯಪೂರ್ವಕವಾಗಿ ಆಶಿಸುತ್ತೀನಿ. ಎಲ್ಲ ಕನ್ನಡ ಸಿನಿ ಪ್ರಿಯರು ಮತ್ತು ನಮ್ಮ ಸೆಲೆಬ್ರಿಟಿಗಳು ನಿಮ್ಮ ಫ್ಯಾಮಿಲಿ, ಸ್ನೇಹಿತರೊಂದಿಗೆ ಒಟ್ಟಿಗೆ ಸಿನಿಮಾ ಹಾಲ್ಗೆ ಹೋಗಿ "ಹಯಗ್ರೀವ" ನೋಡಿರಿ. ಒಳ್ಳೇ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ, ಬೆಂಬಲ ಸದಾ ಇರಲಿ. ಜೈ ಕನ್ನಡ! ಜೈ ಕರ್ನಾಟಕ! ಎಂದು ಬರೆಯಲಾಗಿದೆ.

ಧನ್ವೀರ್-ದರ್ಶನ್ ಬಾಂಧವ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದಾಗಿನಿಂದ, ಧನ್ವೀರ್ ಪ್ರತಿ ಹಂತದಲ್ಲೂ ದರ್ಶನ್ ಪರವಾಗಿ ನಿಂತಿದ್ದಾರೆ. ದರ್ಶನ್ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತಿರುವ ಅವರು, "ದರ್ಶನ್ ಅಣ್ಣನನ್ನು ಕೊನೆಯುಸಿರಿರುವವರೆಗೂ ಬಿಟ್ಟುಕೊಡಲ್ಲ" ಎಂದು ಬಹಿರಂಗವಾಗಿ ಘೋಷಿಸಿದ್ದರು. ದರ್ಶನ್ ಮತ್ತು ಧನ್ವೀರ್ ನಡುವೆ ಕೇವಲ ಸಿನೆಮಾ ನಂಟಲ್ಲದೆ, ಅಣ್ಣ-ತಮ್ಮನಂತಹ ಬಾಂಧವ್ಯವಿದೆ. ಈ ಹಿಂದೆ ದರ್ಶನ್ ಅವರ ಯಾವುದೇ ಚಿತ್ರ ಬಿಡುಗಡೆಯಾದರೂ ಧನ್ವೀರ್ ಪರ ಪ್ರಚಾರ ಮಾಡುತ್ತಿದ್ದರು. ಈಗ ದರ್ಶನ್ ಜೈಲಿನಲ್ಲಿದ್ದರೂ, ಅವರ ತಂಡ ಮತ್ತು ಕುಟುಂಬ ಧನ್ವೀರ್ ಬೆನ್ನಿಗೆ ನಿಂತಿದೆ.
ನಮ್ಮ ಧನ್ವೀರ್ ಅಭಿನಯದ ಹೊಸ ಸಿನಿಮಾ “ಹಯಗ್ರೀವ” ನಾಳೆ ತೆರೆಗೆ ಬರ್ತಾ ಇದೆ
— Darshan Thoogudeepa (@dasadarshan) February 26, 2026
ಈ ಚಿತ್ರವು ಧನ್ವೀರ್ ಮತ್ತು ಸಂಪೂರ್ಣ ತಂಡದ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಕೊಡಲಿ,
ಜನರ ಮನ ಗೆದ್ದುಕೊಂಡು ಸಿನಿಮಾ ಸೂಪರ್ ಹಿಟ್ ಆಗಲಿ ಎಂದು ಹೃದಯಪೂರ್ವಕವಾಗಿ ಆಶಿಸುತ್ತೀನಿ.
ಎಲ್ಲಾ ಕನ್ನಡ ಸಿನಿ ಪ್ರಿಯರು ಮತ್ತು ನಮ್ಮ ಸೆಲೆಬ್ರಿಟಿಗಳು ನಿಮ್ಮ ಫ್ಯಾಮಿಲಿ,… pic.twitter.com/kfFZGbRUY7
ಧನ್ವೀರ್ ನಮ್ಮ ಕುಟುಂಬದಲ್ಲಿ ಒಬ್ಬರು
ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಹಯಗ್ರೀವ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಆಗಮಿಸಿದ್ದರು. ಡಿಬಾಸ್ ಸೆಲೆಬ್ರಿಟಿಗಳೆಲ್ಲರೂ ಈ ಸಿನಿಮಾ ಬೆಂಬಲಕ್ಕೆ ನಿಲ್ಲೋಣ ಎಂದು ಕರೆ ನೀಡಿದ್ದರು ವಿಜಯಲಕ್ಷ್ಮಿ. ಅಲ್ಲದೆ ಧನ್ವೀರ್ ಬಗ್ಗೆಯೂ ಒಳ್ಳೆಯ ಮಾತುಗಳನ್ನಾಡುತ್ತಾ, ಧನ್ವೀರ್ ನಮಗೆ ಹೊರಗಿನವರಲ್ಲ, ನಮ್ಮ ಕುಟುಂಬದಲ್ಲಿ ಒಬ್ಬರು ಎಂದಿದ್ದರು. ಈ ವಿಡಿಯೋಗಳು ವೈರಲ್ ಆಗಿತ್ತು.
ದರ್ಶನ್ ಜೈಲಿನಲ್ಲಿದ್ದರೂ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವುದು ಮತ್ತು ತನ್ನ ಆಪ್ತ ಗೆಳೆಯನ ಸಿನಿಮಾಗೆ ಬೆಂಬಲ ಸೂಚಿಸಿರುವುದು ಅಭಿಮಾನಿಗಳಲ್ಲಿ ಹೊಸ ಚೈತನ್ಯ ಮೂಡಿಸಿದೆ. ಒಂದು ವೇಳೆ ದರ್ಶನ್ ಹೊರಗಿದ್ದರೆ 'ಹಯಗ್ರೀವ' ಚಿತ್ರದ ಪ್ರಚಾರದ ಅಬ್ಬರವೇ ಬೇರೆ ಇರುತ್ತಿತ್ತು ಎಂದು ಚರ್ಚೆಗಳಾಗುತ್ತಿವೆ. ಧನ್ವೀರ್ ಅವರ ಸಿನಿಮಾ ಶ್ರಮಕ್ಕೆ ದರ್ಶನ್ ಅವರಿಂದ ಸಾಥ್ ಸಿಕ್ಕಂತಾಗಿದ್ದು, ಇದು ಗಲ್ಲಾಪೆಟ್ಟಿಗೆಯಲ್ಲಿ ಯಾವ ರೀತಿ ಮೋಡಿ ಮಾಡಲಿದೆ ಎಂಬುದು ಕುತೂಹಲ ಮೂಡಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications