ನಟ ದರ್ಶನ್ ತೂಗುದೀಪ್ ಇಲ್ಲದ ನೋವು, ಬೇಗ ರಿಲೀಸ್ಗೆ ಪ್ರಾರ್ಥಿಸಿ ಸಂಕ್ರಾಂತಿ ಆಚರಣೆ... Darshan Thoogudeepa
ಸ್ಯಾಂಡಲ್ವುಡ್ ಅಂದ್ರೆ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ನಟ ದರ್ಶನ್ ತೂಗುದೀಪ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅದರಲ್ಲೂ ದರ್ಶನ್ ತೂಗುದೀಪ್ ಅವರು ಪ್ರತಿವರ್ಷ ಭಾರಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದ ಹಬ್ಬ ಎಂದರೆ ಅದು ಸಂಕ್ರಾಂತಿ. ಆದರೆ ಇದೇ ಮೊದಲನೇ ಬಾರಿಗೆ ಅಭಿಮಾನಿಗಳ ಕನಸು ನುಚ್ಚು ನೂರಾಗಿ ಹೋಗಿದೆ, ತಮ್ಮ ನೆಚ್ಚಿನ ನಟ ಇಲ್ಲದೇ ಸಂಕ್ರಾಂತಿ ಹಬ್ಬ ಮಾಡಿದ್ದಾರೆ ಫ್ಯಾನ್ಸ್. ಹಾಗಾದರೆ, ನಟ ದರ್ಶನ್ ತೂಗುದೀಪ್ ಅವರ ತೋಟದ ಮನೆಯಲ್ಲಿ ಹೇಗೆ ನಡೆಯಿತು ವರ್ಷದ ಮೊದಲನೇ ಹಬ್ಬ ಸಂಕ್ರಾಂತಿ? ಬನ್ನಿ ತಿಳಿಯೋಣ.
ಕನ್ನಡ ಸಿನಿಮಾ ರಂಗದ ಬಿಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರು ಇಲ್ಲದೇ ಅಭಿಮಾನಿಗಳು ಇಂದು ಸಂಕ್ರಾಂತಿ ಆಚರಿಸಿದ್ದಾರೆ. ದರ್ಶನ್ ತೂಗುದೀಪ್ ಅವರ ಜೊತೆಗೆ ಪ್ರತಿವರ್ಷ ಸಂಭ್ರಮದಿಂದ ಕುಟುಂಬದವರು ಸಂಕ್ರಾಂತಿ ಆಚರಿಸಿ ಖುಷಿ ಖುಷಿಯಾಗಿ ಕಾಲ ಕಳೆಯುತ್ತಿದ್ದರು. ಕಳೆದ ಬಾರಿ ಕೂಡ ನಟ ದರ್ಶನ್ ತೂಗುದೀಪ್ ಅವರ ಜೊತೆಗೆ ಸಂಕ್ರಾಂತಿ ಆಚರಿಸಿದ್ದರು, ಆದರೆ ಇದೇ ಮೊದಲ ಬಾರಿ ಆ ಸಂಭ್ರಮ ಇಲ್ಲದೆ ಸಂಕ್ರಾಂತಿ ಹಬ್ಬ ನಡೆದಿದೆ. ಅದರಲ್ಲೂ ದರ್ಶನ್ ತೂಗುದೀಪ್ ಅವರ ತೋಟದ ಮನೆಯಲ್ಲಿ ನೀರವ ಮೌನದ ನಡುವೆಯೇ ಸಂಕ್ರಾಂತಿ ಆಚರಣೆ ನಡೆಸಲಾಗಿದೆ.

ಎತ್ತುಗಳ ಜೊತೆಗೆ ಮಿಂಚುತ್ತಿದ್ದ ನಟ
ನಟ ದರ್ಶನ್ ತೂಗುದೀಪ್ ಪ್ರತಿವರ್ಷ ಸಂಕ್ರಾಂತಿ ಹಬ್ಬ ಆಚರಿಸಿ, ಎತ್ತುಗಳ ಜೊತೆಗೆ ನಿಂತು ಫೋಟೋ ತೆಗೆಸಿಕೊಂಡು ಎಳ್ಳುಬೆಲ್ಲ ತಿನ್ನುತ್ತಿದ್ದರು. ಆದರೆ ಈ ವರ್ಷ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆ, ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ತೂಗುದೀಪ್ ಅವರು ಹಬ್ಬದ ಸಮಯ ಕಳೆಯುವಂತೆ ಆಗಿದೆ. ಹೀಗಿದ್ದರೂ ನಟ ದರ್ಶನ್ ತೂಗುದೀಪ್ ಇಲ್ಲದ ನೋವಿನ ನಡುವೆ ಬೇಗ ರಿಲೀಸ್ಗೆ ಪ್ರಾರ್ಥಿಸಿ ಅವರ ತೋಟದ ಮನೆಯಲ್ಲಿ ಸಂಕ್ರಾಂತಿ ಆಚರಣೆ ಮಾಡಲಾಯಿತು...
ದರ್ಶನ್ ಅವರು ಇಲ್ಲದೆ ಸಂಕ್ರಾಂತಿ ಆಚರಣೆ
ನಟ ದರ್ಶನ್ ತೂಗುದೀಪ್ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಅವರು ಫಾರ್ಮ್ ಹೌಸ್ನಲ್ಲಿ ಈ ಬಾರಿ ಸಂಕ್ರಾಂತಿ ಹಬ್ಬವನ್ನು ದರ್ಶನ್ ಅವರ ಅನುಪಸ್ಥಿತಿಯಲ್ಲಿ ಆಚರಣೆ ಮಾಡಿದ್ದಾರೆ. ನಟ ದರ್ಶನ್ ತೂಗುದೀಪ್ ಅವರ ಇಷ್ಟದ ಕುದುರೆ ಹಾಗೂ ಪ್ರಾಣಿಗಳ ಜೊತೆಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿ, ಸಂಕ್ರಾಂತಿ ಸಂಭ್ರಮದ ಫೋಟೋ ಹಾಗೂ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ನಟ ದರ್ಶನ್ ಅವರು ಆದಷ್ಟು ಬೇಗ ರಿಲೀಸ್ ಆಗಿ ಬರಲಿ ಎಂಬ ಪ್ರಾರ್ಥನೆ ಕೂಡ ಅಭಿಮಾನಿಗಳು ಹಾಗೂ ಅವರ ಕುಟುಂಬ ಸದಸ್ಯರಿಂದ ಮಾಡಲಾಗಿದೆ. ಈ ಮೂಲಕ, ನಟ ದರ್ಶನ್ ಅವರು ಇಲ್ಲದೆ ನೋವಿನಲ್ಲೇ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ ಅಪಾರ ಅಭಿಮಾನಿ ಬಳಗ.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications