ನಟ ದರ್ಶನ್ ತೂಗುದೀಪ್ ಇಲ್ಲದ ನೋವು, ಬೇಗ ರಿಲೀಸ್ಗೆ ಪ್ರಾರ್ಥಿಸಿ ಸಂಕ್ರಾಂತಿ ಆಚರಣೆ... Darshan Thoogudeepa
ಸ್ಯಾಂಡಲ್ವುಡ್ ಅಂದ್ರೆ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ನಟ ದರ್ಶನ್ ತೂಗುದೀಪ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅದರಲ್ಲೂ ದರ್ಶನ್ ತೂಗುದೀಪ್ ಅವರು ಪ್ರತಿವರ್ಷ ಭಾರಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದ ಹಬ್ಬ ಎಂದರೆ ಅದು ಸಂಕ್ರಾಂತಿ. ಆದರೆ ಇದೇ ಮೊದಲನೇ ಬಾರಿಗೆ ಅಭಿಮಾನಿಗಳ ಕನಸು ನುಚ್ಚು ನೂರಾಗಿ ಹೋಗಿದೆ, ತಮ್ಮ ನೆಚ್ಚಿನ ನಟ ಇಲ್ಲದೇ ಸಂಕ್ರಾಂತಿ ಹಬ್ಬ ಮಾಡಿದ್ದಾರೆ ಫ್ಯಾನ್ಸ್. ಹಾಗಾದರೆ, ನಟ ದರ್ಶನ್ ತೂಗುದೀಪ್ ಅವರ ತೋಟದ ಮನೆಯಲ್ಲಿ ಹೇಗೆ ನಡೆಯಿತು ವರ್ಷದ ಮೊದಲನೇ ಹಬ್ಬ ಸಂಕ್ರಾಂತಿ? ಬನ್ನಿ ತಿಳಿಯೋಣ.
ಕನ್ನಡ ಸಿನಿಮಾ ರಂಗದ ಬಿಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರು ಇಲ್ಲದೇ ಅಭಿಮಾನಿಗಳು ಇಂದು ಸಂಕ್ರಾಂತಿ ಆಚರಿಸಿದ್ದಾರೆ. ದರ್ಶನ್ ತೂಗುದೀಪ್ ಅವರ ಜೊತೆಗೆ ಪ್ರತಿವರ್ಷ ಸಂಭ್ರಮದಿಂದ ಕುಟುಂಬದವರು ಸಂಕ್ರಾಂತಿ ಆಚರಿಸಿ ಖುಷಿ ಖುಷಿಯಾಗಿ ಕಾಲ ಕಳೆಯುತ್ತಿದ್ದರು. ಕಳೆದ ಬಾರಿ ಕೂಡ ನಟ ದರ್ಶನ್ ತೂಗುದೀಪ್ ಅವರ ಜೊತೆಗೆ ಸಂಕ್ರಾಂತಿ ಆಚರಿಸಿದ್ದರು, ಆದರೆ ಇದೇ ಮೊದಲ ಬಾರಿ ಆ ಸಂಭ್ರಮ ಇಲ್ಲದೆ ಸಂಕ್ರಾಂತಿ ಹಬ್ಬ ನಡೆದಿದೆ. ಅದರಲ್ಲೂ ದರ್ಶನ್ ತೂಗುದೀಪ್ ಅವರ ತೋಟದ ಮನೆಯಲ್ಲಿ ನೀರವ ಮೌನದ ನಡುವೆಯೇ ಸಂಕ್ರಾಂತಿ ಆಚರಣೆ ನಡೆಸಲಾಗಿದೆ.

ಎತ್ತುಗಳ ಜೊತೆಗೆ ಮಿಂಚುತ್ತಿದ್ದ ನಟ
ನಟ ದರ್ಶನ್ ತೂಗುದೀಪ್ ಪ್ರತಿವರ್ಷ ಸಂಕ್ರಾಂತಿ ಹಬ್ಬ ಆಚರಿಸಿ, ಎತ್ತುಗಳ ಜೊತೆಗೆ ನಿಂತು ಫೋಟೋ ತೆಗೆಸಿಕೊಂಡು ಎಳ್ಳುಬೆಲ್ಲ ತಿನ್ನುತ್ತಿದ್ದರು. ಆದರೆ ಈ ವರ್ಷ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆ, ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ತೂಗುದೀಪ್ ಅವರು ಹಬ್ಬದ ಸಮಯ ಕಳೆಯುವಂತೆ ಆಗಿದೆ. ಹೀಗಿದ್ದರೂ ನಟ ದರ್ಶನ್ ತೂಗುದೀಪ್ ಇಲ್ಲದ ನೋವಿನ ನಡುವೆ ಬೇಗ ರಿಲೀಸ್ಗೆ ಪ್ರಾರ್ಥಿಸಿ ಅವರ ತೋಟದ ಮನೆಯಲ್ಲಿ ಸಂಕ್ರಾಂತಿ ಆಚರಣೆ ಮಾಡಲಾಯಿತು...
ದರ್ಶನ್ ಅವರು ಇಲ್ಲದೆ ಸಂಕ್ರಾಂತಿ ಆಚರಣೆ
ನಟ ದರ್ಶನ್ ತೂಗುದೀಪ್ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಅವರು ಫಾರ್ಮ್ ಹೌಸ್ನಲ್ಲಿ ಈ ಬಾರಿ ಸಂಕ್ರಾಂತಿ ಹಬ್ಬವನ್ನು ದರ್ಶನ್ ಅವರ ಅನುಪಸ್ಥಿತಿಯಲ್ಲಿ ಆಚರಣೆ ಮಾಡಿದ್ದಾರೆ. ನಟ ದರ್ಶನ್ ತೂಗುದೀಪ್ ಅವರ ಇಷ್ಟದ ಕುದುರೆ ಹಾಗೂ ಪ್ರಾಣಿಗಳ ಜೊತೆಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿ, ಸಂಕ್ರಾಂತಿ ಸಂಭ್ರಮದ ಫೋಟೋ ಹಾಗೂ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ನಟ ದರ್ಶನ್ ಅವರು ಆದಷ್ಟು ಬೇಗ ರಿಲೀಸ್ ಆಗಿ ಬರಲಿ ಎಂಬ ಪ್ರಾರ್ಥನೆ ಕೂಡ ಅಭಿಮಾನಿಗಳು ಹಾಗೂ ಅವರ ಕುಟುಂಬ ಸದಸ್ಯರಿಂದ ಮಾಡಲಾಗಿದೆ. ಈ ಮೂಲಕ, ನಟ ದರ್ಶನ್ ಅವರು ಇಲ್ಲದೆ ನೋವಿನಲ್ಲೇ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ ಅಪಾರ ಅಭಿಮಾನಿ ಬಳಗ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications