Darshan Arrest: 13 ವರ್ಷಗಳ ಬಳಿಕ ಎರಡನೇ ಬಾರಿ ಪರಪ್ಪನ ಅಗ್ರಹಾರಕ್ಕೆ ದರ್ಶನ್; ಮುಂದೇನು?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬರೋಬ್ಬರಿ 12 ದಿನ ಪೊಲೀಸರ ವಶದಲ್ಲಿದ್ದ ನಟ ದರ್ಶನ್ ಈಗ ಜೈಲುಪಾಲಾಗಿದ್ದಾರೆ. ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದರಿಂದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು, ಆರೋಪಿಗಳಾದ ದರ್ಶನ್, ಧನರಾಜ್, ವಿನಯ್, ಪ್ರದೋಶ್ರನ್ನು ಕೋರ್ಟ್ನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಸರ್ಕಾರದ ಪರ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರೆ, ದರ್ಶನ್ ಪರ ವಕೀಲ ಪ್ರವೀಣ್ ತಿಮ್ಮಯ್ಯ ವಾದ ಮಂಡಿಸಿದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶರು, ನಾಲ್ವರು ಆರೋಪಿಗಳು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅದೇಶ ನೀಡಿದರು. ಪೊಲೀಸರು ಈಗಾಗಲೇ 12 ದಿನ ದರ್ಶನ್ರನ್ನು ತೀವ್ರ ವಿಚಾರಣೆ ಮಾಡಿದ್ದು ಎಲ್ಲಾ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗಿದೆ.
ಎರಡನೇ ಬಾರಿ ಪರಪ್ಪನ ಅಗ್ರಹಾರಕ್ಕೆ
ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಏನೂ ಹೊಸದಲ್ಲಿ 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಅವರು 28 ದಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ವಿಜಯಲಕ್ಷ್ಮಿ ರಾಜಿಗೆ ಒಪ್ಪಿಕೊಂಡಿದ್ದ ಕಾರಣ ಅವರು 28 ದಿನದ ಬಳಿಕ ಜೈಲಿನಿಂದ ಹೊರಬಂದಿದ್ದರು.
ಈಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಾಗಿದ್ದು, ಮತ್ತೊಮ್ಮೆ ಪರಪ್ಪನ ಅಗ್ರಹಾರಕ್ಕೆ ಸೇರುತ್ತಿದ್ದಾರೆ. ಈ ಬಾರಿ ಅವರು ಸುಲಭವಾಗಿ ಜೈಲಿನಿಂದ ಹೊರಬರುವುದು ಅಸಾಧ್ಯ ಎಂದು ಕಾನೂನು ತಜ್ಞರು ಹೇಳಿದ್ದಾರೆ.
ಹೇಗಿರುತ್ತೆ ಮುಂದಿನ ವಿಚಾರಣೆ
ದರ್ಶನ್ರನ್ನು ಪೊಲೀಸರು ವಿಚಾರಣೆ ಮಾಡಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗ ಪೊಲೀಸರು ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಬೇಕಿದ್ದು, ಅದಕ್ಕೆ 90 ದಿನಗಳ ಕಾಲ ಸಮಯಾವಕಾಶ ಇರಲಿದೆ. ಚಾರ್ಜ್ ಶೀಟ್ ಸಲ್ಲಿಕೆಯಾಗುವವರೆಗೂ ದರ್ಶನ್ ಮತ್ತು ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಚಾರ್ಜ್ ಶೀಟ್ ಪ್ರಕಾರ ಪೊಲೀಸರು ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಸಾಕ್ಷಿಗಳನ್ನು ಪೊಲೀಸರು ನ್ಯಾಯಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಕೊಲೆ ಪ್ರಕರಣ ಆಗಿರುವ ಕಾರಣ ಸುದೀರ್ಘ ವಿಚಾರಣೆ ನಡೆಯಲಿದ್ದು, ನ್ಯಾಯಾಧೀಶರು ತಮ್ಮ ಸಾಕ್ಷಿ ಆಧಾರಗಳನ್ನು ಪರಿಶೀಲನೆ ಮಾಡಿ ಶಿಕ್ಷೆಯನ್ನು ಪ್ರಕಟಿಸಲಿದ್ದಾರೆ.
ಕೊಲೆ ಪ್ರಕರಣಗಳಲ್ಲಿ ಕನಿಷ್ಠ 7 ವರ್ಷ ಶಿಕ್ಷೆಯಾಗಲಿದ್ದು, ಇನ್ನೂ ಕೆಲವು ಬಾರಿ ಜೀವಾವಧಿ ಶಿಕ್ಷೆ ವಿಧಿಸುವ ಅವಕಾಶ ಕೂಡ ಇದೆ. ವಿಶೇಷ ಪ್ರಕರಣಗಳಲ್ಲಿ ಆರೋಪಿಗಳಿಗೆ ಮರಣ ದಂಡನೆ ವಿಧಿಸಲು ಕೂಡ ಕಾನೂನಿನಲ್ಲಿ ಅವಕಾಶ ಇದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications