Actress Ramya: ನವೆಂಬರ್ನಲ್ಲಿ ನಟಿ ರಮ್ಯಾ ಮದುವೆ? ಹುಡುಗ ಯಾರು?
ಬೆಂಗಳೂರು, ಸೆಪ್ಟೆಂಬರ್ 08: ಸ್ಯಾಂಡಲ್ವುಡ್ ಮೋಹಕ ತಾರೆಗೆ ರಮ್ಯಾಗೆ ಕೊನೆಗೂ ಕಂಕಣ ಭಾಗ್ಯ ಕೂಡಿ ಬಂದಿದೆಯಂತೆ. ನಟಿ ರಮ್ಯಾ ಅವರು ಇದೇ ನವೆಂಬರ್ ತಿಂಗಳಲ್ಲಿ ಹಸೆಮಣೆ ಏರುವ ಸಿದ್ಧತೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರ ಮದುವೆ ಕುರಿತು ಸಾಕಷ್ಟು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ರಮ್ಯಾ ಅವರ ಅಭಿಮಾನಿಗಳು ಸಾಕಷ್ಟು ಭಾರೀ ರಮ್ಯಾ ಅವರ ಬಳಿ ಮದುವೆ ಯಾವಾಗ ಎನ್ನುವ ಪ್ರಶ್ನೆಯನ್ನ ಮುಂದಿಟ್ಟಿದ್ದು, ಕೊನೆಗೂ ನಟಿ ರಮ್ಯಾ ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಲಿದ್ದಾರೆ ಎನ್ನಲಾಗಿದೆ. ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರ ಬಗ್ಗೆ ನ್ಯೂಸ್ ಫಸ್ಟ್ ಗೆ ಮಾಹಿತಿ ಲಭ್ಯವಾಗಿದೆ.

ಸ್ಯಾಂಡಲ್ವುಡ್ ಮೋಹಕ ತಾರೆ ಅವರು ಇಷ್ಟರಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ನಡೆಯಲಿದೆ ಎನ್ನಲಾಗಿದ್ದು, ನವೆಂಬರ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ನಟಿ ರಮ್ಯಾ ಅವರು ಉದ್ಯಮಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ. ಆ ಉದ್ಯಮಿ ಯಾರು ಅನ್ನೋ ಗುಟ್ಟನ್ನು ಇನ್ನೂ ಬಿಟ್ಟು ಕೊಟ್ಟಿಲ್ಲ.ಆದರೆ, ಸದ್ಯದ ಮಾಹಿತಿ ಪ್ರಕಾರ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ರಮ್ಯಾ ವಿವಾಹ ಆಗಲಿದ್ದಾರೆ ಎನ್ನಲಾಗಿದೆ.
ರಮ್ಯಾ ಅವರು ಕೇವಲ ಸಿನಿಮಾ ರಂಗದಲ್ಲಿ ಅಷ್ಟೇ ಅಲ್ಲ ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. 2013ರಲ್ಲಿ ರಮ್ಯಾ ಮಂಡ್ಯದಲ್ಲಿ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಘಟಕದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧೆ ನಡೆಸಿದ್ದು, ಸಿದ್ದರಾಮಯ್ಯ ಅವರ ಪರವಾಗಿ ನಟಿ ರಮ್ಯ ಅಬ್ಬರದ ಪ್ರಚಾರವನ್ನ ನಡೆಸಿದ್ದರು.
ಇನ್ನೂ ಯಾವುದೇ ಚುನಾವಣೆಗಳಾದರೂ ನಟಿ ರಮ್ಯಾ ಅವರು ಸ್ಪರ್ಧೆಗೆ ಕೈ ನಾಯಕರು ಒತ್ತಡವನ್ನ ಹಾಕಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ನಟಿ ರಮ್ಯ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಇದೀಗ , ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ನಡೆಯಲಿದ್ದು, ಕೈ ಅಭ್ಯರ್ಥಿಯಾಗಿ ನಟಿ ರಮ್ಯಾ ಸರ್ಧೆ ನಡೆಸುತ್ತಾರೆ ಎಂಬ ಮಾತು ಕೇಳಿ ಬಂದಿದೆ. ಆದರೆ, ಇದುವರೆಗೂ ಈ ಬಗ್ಗೆ ಕಾಂಗ್ರೆಸ್ ನಿಂದ ಯಾವುದೇ ಸ್ಪಷ್ಟನೆ ಇಲ್ಲ.
ಇನ್ನೂ ಮಾಜಿ ಸಂಸದೆ ಹಾಗೂ ಸ್ಯಾಂಡಲ್ವುಡ್ ಮೋಹಕ ತಾರೆ ಅಂತ ಫೇಮಸ್ ಆಗಿರೋ ರಮ್ಯಾ ಅವರ ಮತ್ತೊಂದು ಹೆಸರು ದಿವ್ಯಾ ಸ್ಪಂದನಾ. ರಮ್ಯಾ ಅವರಿಗೆ ಇಂಟರ್ನೆಟ್ನಲ್ಲಿರುವ ಮಾಹಿತಿ ಪ್ರಕಾರ ಈಗ 41 ವರ್ಷ ವಯಸ್ಸು. ಪುನೀತ್ ರಾಜ್ಕುಮಾರ್ ಅಭಿನಯದ ಅಭಿ ಚಿತ್ರದ ಮೂಲಕ 2003ರಲ್ಲಿ ರಮ್ಯಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಸುಮಾರು 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ರಮ್ಯಾ ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲೂ ಮಿಂಚಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications