ಪತಿಯ ಧುರಂಧರ್-2 ಸಿನಿಮಾ ಪ್ರದರ್ಶನಕ್ಕೆ ಗೈರು, ಪೋಸ್ಟ್ ಕೂಡ ಹಂಚಿಕೊಳ್ಳದ ದೀಪಿಕಾ ಪಡುಕೋಣೆ: ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಪತಿ ರಣವೀರ್ ಸಿಂಗ್ ಅಭಿನಯದ 'ಧುರಂಧರ್ 2: ದಿ ರಿವೇಂಜ್' (Dhurandhar 2: The Revenge) ಚಿತ್ರದ ವಿಶೇಷ ಪ್ರದರ್ಶನಕ್ಕೆ ಗೈರು ಹಾಜರಾಗಿರುವುದು ಮತ್ತು ಚಿತ್ರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಪೋಸ್ಟ್ ಹಂಚಿಕೊಳ್ಳದಿರುವುದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಂಟರ್ನೆಟ್ನಲ್ಲಿ ಹಲವರು ಪ್ರಶ್ನೆಗಳ ಸುರಿಮಳೆ ಹರಿಸಿದ್ದಾರೆ. ಪತಿಯ ಸಿನಿಮಾ ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸುತ್ತಿದ್ದರೂ ದೀಪಿಕಾ ಅವರ ಮೌನ ಅಚ್ಚರಿ ಮೂಡಿಸಿದೆ.
ಧುರಂಧರ್-2 ಚಿತ್ರದ ವಿಶೇಷ ಪ್ರದರ್ಶನಕ್ಕೆ ದೀಪಿಕಾ ಹಾಜರಾಗಲಿಲ್ಲ. ಆದರೆ ಅದಾದ ನಂತರದ ದಿನವೇ ಅವರು ಮುಂಬೈನಲ್ಲಿ ತಮ್ಮ ಅತ್ತೆ-ಮಾವನವರೊಂದಿಗೆ ಒಂದು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಿ ಕಾಣಿಸಿಕೊಂಡಿದ್ದರು. ಇದರಿಂದ ಸಾಮಾಜಿಕ ಜಾಲತಾಣ ಬಳಕೆದಾರರು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಪತಿಯ ಚಿತ್ರದ ಸ್ಕ್ರೀನಿಂಗ್ಗೆ ಹೋಗಲಿಲ್ಲ, ಆದರೆ ಕಾರ್ಯಕ್ರಮಕ್ಕೆ ಏಕೆ ಹೋದರು? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಪತಿಯ ಸಿನಿಮಾಗಿಂತ ಸಂಗೀತ ಕಚೇರಿ ಮುಖ್ಯವಾಯಿತೇ?
ವಿಶೇಷ ಪ್ರದರ್ಶನದಲ್ಲಿ ದೀಪಿಕಾ ಕಾಣಿಸಿಕೊಂಡಿರಲಿಲ್ಲ. ಆದರೆ ಅದರ ಮರುದಿನವೇ ಮುಂಬೈನಲ್ಲಿ ನಡೆದ ಸಿತಾರ್ ವಾದಕ ರಿಷಬ್ ಶರ್ಮಾ ಅವರ 'ಸಿತಾರ್ ಫಾರ್ ಮೆಂಟಲ್ ಹೆಲ್ತ್' ಸಂಗೀತ ಕಚೇರಿಯಲ್ಲಿ ಅವರು ಭಾಗವಹಿಸಿದ್ದರು. ತಮ್ಮ ಅತ್ತೆ (ಅಂಜು ಭವನಾನಿ) ಮತ್ತು ನಾದಿನಿ (ರಿತಿಕಾ ಭವನಾನಿ) ಅವರೊಂದಿಗೆ ದೀಪಿಕಾ ಅಲ್ಲಿ ಕಾಣಿಸಿಕೊಂಡಿರುವುದು, "ಪತಿಯ ಸಿನಿಮಾಗಿಂತ ಸಂಗೀತ ಕಚೇರಿ ಮುಖ್ಯವಾಯಿತೇ?" ಎಂಬ ಪ್ರಶ್ನೆಯನ್ನು ನೆಟ್ಟಿಗರು ಕೇಳುವಂತೆ ಮಾಡಿದೆ.
2025ರ ಡಿಸೆಂಬರ್ನಲ್ಲಿ 'ಧುರಂಧರ್' ಮೊದಲ ಭಾಗ ಬಿಡುಗಡೆಯಾದಾಗ ದೀಪಿಕಾ ಪಡುಕೋಣೆ ಚಿತ್ರದ ಬಗ್ಗೆ ಮತ್ತು ರಣವೀರ್ ಅಭಿನಯದ ಬಗ್ಗೆ ಸಾಕಷ್ಟು ಪೋಸ್ಟ್ಗಳನ್ನು ಹಾಕಿದ್ದರು. ಆದರೆ, ಈ ಬಾರಿ ಅವರು ಮೌನಕ್ಕೆ ಶರಣಾಗಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. "ಗಾಜಾ ಅಥವಾ ಜೆಎನ್ಯು ವಿಚಾರಗಳ ಬಗ್ಗೆ ಸುದೀರ್ಘ ಪೋಸ್ಟ್ ಬರೆಯುವ ದೀಪಿಕಾ, ಪತಿಯ ಯಶಸ್ಸಿನ ಬಗ್ಗೆ ಒಂದು ಸ್ಟೋರಿ ಹಾಕಲು ಯಾಕೆ ಸಾಧ್ಯವಿಲ್ಲ?" ಎಂದು ಹಲವರು ಟೀಕಿಸಿದ್ದಾರೆ.
ದೀಪಿಕಾ ಮತ್ತು ರಣವೀರ್ ನಡುವೆ ಎಲ್ಲವೂ ಸರಿಯಿಲ್ಲವೇ?
ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವದಂತಿ ಹರಿದಾಡುತ್ತಿವೆ. ಈ ಚಿತ್ರದ ನಿರ್ದೇಶಕ ಆದಿತ್ಯ ಧರ್ ಅವರು ಈ ಹಿಂದೆ ದೀಪಿಕಾ ಅವರ 'ಶಿಫ್ಟ್ ಅವಧಿ' ಬೇಡಿಕೆಯ ಬಗ್ಗೆ ನೀಡಿದ್ದ ಹೇಳಿಕೆಯಿಂದ ದೀಪಿಕಾ ಅಸಮಾಧಾನಗೊಂಡಿದ್ದಾರೆ ಎಂಬ ಚರ್ಚೆಯೂ ನಡೆಯುತ್ತಿದೆ. ಮತ್ತೊಂದೆಡೆ ದೀಪಿಕಾ ಮತ್ತು ರಣವೀರ್ ನಡುವೆ ಎಲ್ಲವೂ ಸರಿಯಿಲ್ಲವೇ? ಎಂಬ ಅನುಮಾನವನ್ನೂ ಕೆಲವರು ವ್ಯಕ್ತಪಡಿಸುತ್ತಿದ್ದಾರೆ.
ದೀಪಿಕಾ ಪಡುಕೋಣೆ ಈವರೆಗೆ ಈ ಯಾವುದೇ ಚರ್ಚೆಗಳಿಗೆ ಪ್ರತಿಕ್ರಿಯಿಸಿಲ್ಲ. ಅವರು ತಮ್ಮ ಅತ್ತೆ ಮತ್ತು ನಾದಿನಿಯ ಜೊತೆ ಸಂಗೀತ ಕಚೇರಿಯಲ್ಲಿ ಭಾಗವಹಿಸಿರುವುದು ಅವರು ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂಬುದನ್ನು ತೋರಿಸುತ್ತದೆ. ಬಹುಶಃ ತಮ್ಮ ಮುಂದಿನ ಚಿತ್ರಗಳ ಕೆಲಸದಲ್ಲಿ ಅಥವಾ ವೈಯಕ್ತಿಕ ಕಾರಣಗಳಿಂದಾಗಿ ಅವರು ಸಿನಿಮಾದ ಪ್ರಚಾರದಿಂದ ದೂರ ಉಳಿದಿರಬಹುದು ಎನ್ನಲಾಗುತ್ತಿದೆ. 'ಧುರಂಧರ್ 2' ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದ್ದರೂ, ದೀಪಿಕಾ ಅವರ ಈ ನಿಗೂಢ ಮೌನ ಮಾತ್ರ ಬಾಲಿವುಡ್ ಅಂಗಳದಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications