ಐತಿಹಾಸಿಕ ಸಿನಿಮಾ ಮಾಡಲು ಸಜ್ಜಾದ ಧನಂಜಯ; ಕೆಂಪೇಗೌಡರ ಪಾತ್ರ ಮಾಡ್ತಾರಾ 'ನಟ ರಾಕ್ಷಸ'?
ಕೋಟಿ ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ನಟ ಧನಂಜಯ ಹೊಸ ಸಿನಿಮಾ ಘೋಷಿಸಲು ಸಜ್ಜಾಗಿದ್ದಾರೆ. ಐತಿಹಾಸಿಕ ಪಾತ್ರದಲ್ಲಿ ತೆರೆ ಮೇಲೆ ಬರುವ ಮುನ್ಸೂಚನೆ ಕೊಟ್ಟಿರುವ ಅವರು, ಜೂನ್ 21 (ಶುಕ್ರವಾರ) ಹೊಸ ಸಿನಿಮಾದ ಮೊದಲ ಲುಕ್ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡಿರುವ ಅವರು, "ಇತಿಹಾಸದಲ್ಲಿ ಹೊಸ ಅಧ್ಯಾಯ ತೆರೆದುಕೊಳ್ಳಲು ಸಿದ್ಧವಾಗುತ್ತಿದೆ. ಮಹಾಕಾವ್ಯದ ಮೇರುಕೃತಿಯನ್ನು ನೋಡಲು ಸಜ್ಜಾಗಿ" ಎನ್ನುವ ಶೀರ್ಷಿಕೆಯೊಂದಿಗೆ ಮುಂದಿನ ಚಿತ್ರದ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ನಾಡಪ್ರಭು ಕೆಂಪೇಗೌಡರ ಕಾಲದ ನಾಣ್ಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ನಾಣ್ಯದ ಮೇಲೆ 'ಬೆಂಗಳೂರಿನ ನಾಡಪ್ರಭು' ಮತ್ತು 'ಜಯ ಜಯ ಕಾಲಭೈರವ' ಎನ್ನುವ ಬರಹಗಳನ್ನು ನೋಡಬಹುದು.
ಈಗಾಗಲೇ ಅಲ್ಲಮ ಎನ್ನುವ ಐತಿಹಾಸಿಕ ಸಿನಿಮಾದಲ್ಲಿ ವಚನಕಾರ ಅಲ್ಲಮ ಪ್ರಭು ಪಾತ್ರದಲ್ಲಿ ಕಾಣಿಸಿಕೊಂಡು ಸೈ ಎನಿಸಿಕೊಂಡಿದ್ದಾರೆ. ಯಾವುದೇ ಪಾತ್ರದಲ್ಲೂ ನಟಿಸುವ ಸಹಜ ಅಭಿನಯ ಧನಂಜಯ ಅವರಿಗೆ ಇದ್ದು, ಕೆಂಪೇಗೌಡರ ಸಿನಿಮಾ ಬಗ್ಗೆ ಸಿನಿಪ್ರೇಮಿಗಳ ಕುತೂಹಲ ಹೆಚ್ಚಾಗಿದೆ.
ಕೆಂಪೇಗೌಡ ಸಿನಿಮಾ ವಿವಾದ
ಕೆಂಪೇಗೌಡ ಸಿನಿಮಾ ಮಾಡಲು ಕನ್ನಡ ಚಿತ್ರರಂಗದ ಅನೇಕರ ಕನಸಾಗಿದ್ದರೂ, ಇದುವರೆಗೂ ನನಸಾಗಿಲ್ಲ. ದಿನೇಶ್ ಬಾಬು ನಿರ್ದೇಶನದಲ್ಲಿ 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಹೆಸರಿನ ಸಿನಿಮಾ ಈಗಾಗಲೇ ಸೆಟ್ಟೇರಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ವಿವಾದ ಉಂಟಾಗಿತ್ತು. ಕಿರಣ್ ತೋಟಂಬೈಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ ಅರಸರ ಇತಿಹಾಸವನ್ನು ಜಗತ್ತಿಗೆ ತಿಳಿಸುತ್ತಿರುವ ಧರ್ಮೇಂದ್ರ ಕುಮಾರ್ ಅರೇನಹಳ್ಳಿ ಈ ಸಿನಿಮಾಗೆ ಕತೆ ಬರೆದಿದ್ದಾರೆ.
'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರಕ್ಕೆ ಖ್ಯಾತ ನಿರ್ದೇಶ ಟಿ.ಎಸ್. ನಾಗಾಭರಣ ಮತ್ತು ನಿರ್ಮಾಪಕ ಡಾ ಎಂ ಎನ್ ಶಿವರುದ್ರಪ್ಪ ಕೋರ್ಟ್ ಮೆಟ್ಟಿಲೇರಿದ್ದರು. 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಲನಚಿತ್ರ ಕುರಿತ ನಿರ್ಮಾಣ, ನಿರ್ದೇಶನ, ಜಾಹೀರಾತು, ವಿತರಣೆ ಮಾಡದಂತೆ ಕೋರಿದ್ದರು. ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿತ್ತು.
ಟಿಎಸ್ ನಾಗಾಭರಣ 'ಕಲ್ಲರಳಿ ಹೂವಾಗಿ'ಯಂತಹ ಐತಿಹಾಸಿಕ ಸಿನಿಮಾ ಮಾಡಿ ಗೆದ್ದವರು, ಧನಂಜಯ ಸಿನಿಮಾಗೆ ಅವರೇ ನಿರ್ದೇಶನ ಮಾಡುತ್ತಾರಾ? ಅಥವಾ ಬೇರೆ ತಂಡದ ಜೊತೆ ಧನಂಜಯ ಸಿನಿಮಾ ಮಾಡಲಿದ್ದಾರಾ ಎನ್ನುವ ಕುತೂಹಲಕ್ಕೆ ನಾಳೆ ತೆರೆ ಬೀಳಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications