Dhurandhar OTT: ಒಟಿಟಿಗೆ ಬರಲಿದೆ ಬಹು ನಿರೀಕ್ಷಿತ ಧುರಂಧರ್ ಸಿನಿಮಾ: ಯಾವಾಗ, ಎಲ್ಲಿ ಎನ್ನುವ ವಿವರ ಇಲ್ಲಿದೆ
Dhurandhar OTT: ಬಾಲಿವುಡ್ ಚಿತ್ರರಂಗದಲ್ಲಿ ಇತ್ತೀಚಿನ ವರ್ಷಗಳಲ್ಲೇ ಹೊಸ ದಾಖಲೆ ಬರೆದಿರುವ ಹಾಗೂ ಕೋವಿಡ್ ನಂತರ ಅತಿ ಹೆಚ್ಚು ಜನ ವೀಕ್ಷಿಸಿದ್ದಾರೆ ಎನ್ನುವ ಖ್ಯಾತಿ ಗಳಿಸಿರುವ ಧುರಂಧರ್ ಸಿನಿಮಾ ಒಟಿಟಿಗೆ ಬರುವುದಕ್ಕೆ ರೆಡಿಯಾಗಿದೆ. ಈ ಸಿನಿಮಾ ಚಿತ್ರಮಂದಿರಗಳಲ್ಲಿ ಅತ್ಯುತ್ತಮ ಗಳಿಕೆ ಕಂಡಿದೆ. ಜನವರಿ 30ರಂದು ಒಟಿಟಿಯಲ್ಲಿ ಬಿಡುಗಡೆಯಾಗುವುದಕ್ಕೆ ಎಲ್ಲಾ ಸಿದ್ಧತೆ ಪೂರ್ಣಗೊಂಡಿದೆ. ಮುಖ್ಯಭೂಮಿಕೆಯಲ್ಲಿ ರಣವೀರ್ ಸಿಂಗ್ ಅಭಿನಯಿಸಿದ್ದು, ಈ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಬಾಕ್ಸ್ ಆಫೀಸ್ನಲ್ಲಿ 1300 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಗಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.
ರಣವೀರ್ ಸಿಂಗ್ ನಟಿಸಿರುವ ಆದಿತ್ಯ ಧರ್ ಅವರ ಧುರಂಧರ್ ಸಿನಿಮಾ ಯಾವಾಗ ಒಟಿಟಿಗೆ ಬರಲಿದೆ ಎಂದು ಸಿನಿಮಾ ಪ್ರಿಯರು ಕಾತುರದಿಂದ ಕಾಯುತ್ತಿದ್ದರು. ಆಕ್ಷನ್ ಥ್ರಿಲ್ಲರ್ ಸಿನಿಮಾ ಆಗಿರುವ ಧುರಂಧರ್ ಜನವರಿ 30ರಂದು ನೆಟ್ಫ್ಲಿಕ್ಸ್ನಲ್ಲಿ ಡಿಜಿಟಲ್ ಪ್ರೀಮಿಯರ್ಗೆ ಸಿದ್ಧವಾಗಿದೆ. ಉತ್ತರ ಭಾರತ ಸೇರಿದಂತೆ ಸ್ಟ್ರೀಮಿಂಗ್ ಹಕ್ಕುಗಳಿಗಾಗಿ 130 ಕೋಟಿ ರೂಪಾಯಿ ಲಾಭದಾಯಕ ಒಪ್ಪಂದವನ್ನು ಇದು ಒಳಗೊಂಡಿದೆ.

ಈಚೆಗೆ ಬಿಡುಗಡೆಯಾದ ಈ ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆ ಮತ್ತು ಭರ್ಜರಿ ಯಶಸ್ಸು ಗಳಿಸಿದೆ. ಆದಿತ್ಯ ಧರ್ ನಿರ್ದೇಶನದ ಧುರಂಧರ್ ಸಿನಿಮಾವು ಥಿಯೇಟರ್ನಲ್ಲಿ ಬಿಡುಗಡೆಯಾದ ಒಂದು ತಿಂಗಳ ನಂತರವೂ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಲೇ ಇದೆ. ಪ್ರತಿ ವಾರವೂ ಹೊಸ ದಾಖಲೆ ಸೃಷ್ಟಿ ಮಾಡುತ್ತಿದೆ. ಈ ರೀತಿ ಇರುವಾಗಲೇ ಒಟಿಟಿಗೆ ಬರುವುದಕ್ಕೆ ಸಿದ್ಧವಾಗಿದೆ. ಧುರಂಧರ್ ಹೊಸದಾಗಿ ಬಿಡುಗಡೆಯಾದ ಚಿತ್ರಗಳಿಂದ ನಿರಂತರ ಸ್ಪರ್ಧೆಯ ನಡುವೆಯೂ ಉತ್ತಮ ಪ್ರದರ್ಶನ ಕಾಣುತ್ತಿದೆ.
ಇನ್ನು ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಂಪಾಲ್ ಹಾಗೂ ಆರ್ ಮಾಧವನ್ ಸೇರಿದಂತೆ ಪ್ರಮುಖ ನಟರು ಅಭಿನಯಿಸಿದ್ದಾರೆ. ಅಲ್ಲದೇ ಈ ಸಿನಿಮಾ ಇಲ್ಲಿಯವರೆಗೆ ವರ್ಷದ ಅತಿ ಹೆಚ್ಚು ಹಣ ಗಳಿಸಿದ ಹಿಂದಿ ಚಿತ್ರಗಳಲ್ಲಿ ಒಂದಾಗಿದೆ.
ಧುರಂಧರ್ ಸಿನಿಮಾ ಯಾವ ಒಟಿಟಿಗೆ ಬರಲಿದೆ ?
OTTplay ವರದಿಯ ಪ್ರಕಾರ, ಧುರಂಧರ್ ಶೀಘ್ರದಲ್ಲೇ ಆನ್ಲೈನ್ನಲ್ಲಿ ಪ್ರದರ್ಶನಗೊಳ್ಳಲಿದೆ. ರಣವೀರ್ ಸಿಂಗ್ ಮುಖ್ಯಭೂಮಿಕೆಯ ಥ್ರಿಲ್ಲರ್ ಚಿತ್ರವು ಜನವರಿ 30 ರಿಂದ ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್ ಆಗುವ ನಿರೀಕ್ಷೆಯಿದೆ. ಇದು ಪ್ರೇಕ್ಷಕರಿಗೆ ಮನೆಯಿಂದಲೇ ಬೇಹುಗಾರಿಕೆ ಆಧಾರಿತ ಸಿನಿಮಾ ನೋಡುವುದಕ್ಕೆ ಅತ್ಯುತ್ತಮ ಅವಕಾಶ ಎಂದೇ ಹೇಳಬಹುದಾಗಿದೆ.
ಒಟಿಟಿ ವಿಳಂಬಕ್ಕೆ ಕಾರಣವೇನು
ಇನ್ನು ಧುರಂಧರ್ ಸಿನಿಮಾ ಈಗಾಗಲೇ ಒಟಿಟಿಗೆ ಬಿಡುಗಡೆಯಾಗಬೇಕಾಗಿತ್ತು. ಆದರೆ, ಚಿತ್ರಮಂದಿರಗಳಲ್ಲಿ ಈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದ್ದ ಹಿನ್ನೆಲೆಯಲ್ಲಿ ಒಟಿಟಿಗೆ ಬರುವುದಕ್ಕೆ ವಿಳಂಬವಾಗಿದೆ ಎಂದು ಹೇಳಲಾಗಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನದಿಂದಾಗಿ ಗರಿಷ್ಠ ಮೊತ್ತದ ಆದಾಯವನ್ನು ಗಳಿಸುವ ಉದ್ದೇಶದಿಂದ ಸಿನಿಮಾದ ನಿರ್ಮಾಪಕರು ಉದ್ದೇಶಪೂರ್ವಕವಾಗಿ ಒಟಿಟಿ ಬಿಡುಗಡೆಯನ್ನು ವಿಳಂಬಗೊಳಿಸಿದ್ದಾರೆ ಎಂದು ವ್ಯಾಪಾರ ವಿಶ್ಲೇಷಕರು ಹೇಳಿದ್ದಾರೆ.
-
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಜೋಡಿಯಿಂದ ಕರ್ನಾಟಕ ಸೇರಿ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಅನ್ನದಾನ ಸೇವೆ -
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು -
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
ಕರ್ನಾಟಕದ 4 ರೈಲು ನಿಲ್ದಾಣ ಸೇರಿ 76 ಕಡೆ ಪ್ರಯಾಣಿಕರ ನಿಲುಗಡೆ ತಾಣ ನಿರ್ಮಾಣ, ಏನಿದರ ಪ್ರಯೋಜನ? -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ












Click it and Unblock the Notifications