Darshan: ಆರೋಪಗಳನ್ನು ಒಪ್ಪಿಕೊಂಡ್ರಾ ನಟ ದರ್ಶನ್? ಕೋರ್ಟ್ನಲ್ಲಿ ಇಂದು ಏನೆಲ್ಲ ಆಯ್ತು?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಗಳ ಮೇಲೆ ಇರುವ ದೋಷಾರೋಪವನ್ನು ನ್ಯಾಯಾಲಯ ಪ್ರಕಟಿಸಿದೆ. ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ನಲ್ಲಿ ನ್ಯಾಯಾಧೀಶರು ಆರೋಪಿಗಳ ಮುಂದೆ ಇದನ್ನು ಓದಿ ಹೇಳಿದ್ದಾರೆ. ಒಂದು ವೇಳೆ ಆರೋಪಿಗಳು ಅದನ್ನು ಒಪ್ಪಿಕೊಂಡರೆ ಶಿಕ್ಷೆ ಆಗಲಿದೆ. ಕೇಸ್ನ ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದ್ದು, ದರ್ಶನ್, ಪವಿತ್ರಾ ಗೌಡ ಹಾಗೂ ಎಲ್ಲ ಆರೋಪಿಗಳು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಹೀಗಾಗಿ ನವೆಂಬರ್ 10ಕ್ಕೆ ವಿಚಾರಣೆಗೆ ಮತ್ತೆ ದಿನಾಂಕ ನಿಗದಿ ಮಾಡಿದೆ.
ಇಂದು ಕೋರ್ಟ್ ದರ್ಶನ್ ಹಾಗೂ ಪವಿತ್ರಾಗೌಡ ಅವರನ್ನು ಬಿಗಿ ಭದ್ರತೆಯಲ್ಲಿ ಕರೆತರಲಾಯಿತು. ಈ ವೇಳೆ ಕೋರ್ಟ್ ಬಳಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ದರ್ಶನ್ ಅವರನ್ನು ನೋಡಿ ಜನ ಕಿರುಚಾಡಿದರು. ಬಳಿಕ ಕೋರ್ಟ್ ವಿಚಾರಣೆ ಆರಂಭಿಸಿತು. ಒಬ್ಬೊಬ್ಬರಾಗಿ ಕರೆದು ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರತಿ ಆರೋಪಿ ಮೇಲೆ ಹೊರಿಸಿರುವ ದೋಷಾರೋಪಗಳನ್ನು ಓದಿ ಹೇಳಲಾಯಿತು. ಒಂದು ವೇಳೆ ಆರೋಪಿಗಳು ಇದಕ್ಕೆ ಒಪ್ಪಿದ್ದರೆ ಶಿಕ್ಷೆ ಪ್ರಕಟ ಆಗುತ್ತಿತ್ತು. ಆದರೆ ಎಲ್ಲರೂ ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಳ್ಳಲಿಲ್ಲ. ಹೀಗಾಗಿ ಸಾಕ್ಷ್ಯಗಳ ವಿಚಾರಣೆಗೆ ಮತ್ತೆ ದಿನಾಂಕ ನಿಗದಿಯಾಯಿತು.

ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳ ವಿರುದ್ಧ ಕೊಲೆ, ಅಪಹರಣ ಸೇರಿದಂತೆ ಹಲವು ಆರೋಪಗಳನ್ನು ಹೊರಿಸಲಾಗಿದೆ. ಆದರೆ ಎಲ್ಲಾ 17 ಆರೋಪಿಗಳು ಕೂಡ ತಮ್ಮ ಮೇಲಿನ ಆರೋಪಗಳನ್ನು ಒಪ್ಪಲಿಲ್ಲ. ಹೀಗಾಗಿ ಕೋರ್ಟ್ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ. ಬಳಿಕ ಆರೋಪಿಗಳನ್ನು ಅಲ್ಲಿಂದ ಜೈಲಿಗೆ ಮತ್ತೆ ಶಿಫ್ಟ್ ಮಾಡಲಾಯಿತು.
ಕೋರ್ಟ್ನಲ್ಲಿ ದರ್ಶನ್-ಪವಿತ್ರಾ ನಡುವೆ ಮಾತು
ಜಾಮೀನು ರದ್ದಾದ ಕಾರಣ ನಟ ದರ್ಶನ್, ಪವಿತ್ರಾ ಗೌಡ ಹಾಗು ಉಳಿದ ಆರೋಪಿಗಳು ಮತ್ತೆ ಜೈಲು ಸೇರಿದ್ದರು. ಇದಾದ ನಂತರ ಇಬ್ಬರೂ ಮುಖಾಮುಖಿ ಆಗಿರಲಿಲ್ಲ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಕೋರ್ಟ್ಗೆ ಪೊಲೀಸರು ಕರೆ ತರುವಾಗ ದರ್ಶನ್ ಹಾಗೂ ಪವಿತ್ರಾ ಅವರನ್ನ ಬೇರೆ ಬೇರೆ ವಾಹನಗಳಲ್ಲಿ ಕರೆತಂದರು. ನ್ಯಾಯಾಧೀಶರು ಎಲ್ಲ ಆರೋಪಿಗಳು ಬಂದು ಸಾಲಾಗಿ ನಿಲ್ಲುವಂತೆ ಸೂಚಿಸಿದಾಗ ದರ್ಶನ್ ಹಾಗೂ ಪವಿತ್ರಾ ಅವರ ನಡುವೆ ಮಾತುಕತೆ ನಡೆಯಿತು ಎಂದು ತಿಳಿದುಬಂದಿದೆ. ಬಳಿಕ ಕೋರ್ಟ್ನಿಂದ ಹೊರಬಂದಾಗ ದರ್ಶನ್, ಪವಿತ್ರಗೌಡ ಅವರನ್ನು ನೋಡಲು ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಈ ವೇಳೆ ನೂಕುನುಗ್ಗಲು ಕೂಡ ಆಯಿತು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications