12ನೇ ವಯಸ್ಸಿಗೆ ಮಗಳು ಆರಾಧ್ಯಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ರಾ ಐಶ್ವರ್ಯಾ ರೈ; ಏನಿದು ಆರೋಪ?
ಮುಂಬೈ, ಮಾರ್ಚ್ 06: ಇತ್ತೀಚೆಗೆ, ಗುಜರಾತ್ನ ಜಾಮ್ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಕಾರ್ಯಕ್ರಮವಿತ್ತು. ಇದರಲ್ಲಿ ದೇಶ - ವಿದೇಶಗಳ ಎಲ್ಲಾ ದೊಡ್ಡ ವ್ಯಕ್ತಿಗಳು, ಸೆಲಬ್ರಿಟಿಗಳು, ಗಣ್ಯರು ಭಾಗವಹಿಸಿದ್ದರು. ಈ ವೇಳೆ ಬಚ್ಚನ್ ಕುಟುಂಬ ಕೂಡ ಒಟ್ಟಿಗೆ ಕಾಣಿಸಿಕೊಂಡಿತ್ತು. ಆದರೆ, ಇದರಲ್ಲಿ ಎಲ್ಲರ ಗಮನ ಸೆಳೆದಿದ್ದು ಮಾತ್ರ ನಟಿ ಐಶ್ವರ್ಯಾ ರೈ ಅವರ ಮುದ್ದಿನ ಮಗಳು ಆರಾಧ್ಯ ಬಚ್ಚನ್.
ನಟಿ ಐಶ್ವರ್ಯಾ ರೈ ಕೈ ಹಿಡಿದುಕೊಂಡು ಕ್ಯಾಮೆರಾಗಳ ಮುಂದೆ ಬಂದ ಆರಾಧ್ಯ ಬಚ್ಚನ್ ಅವರ ಹೊಸ ಲುಕ್ ನೋಡಿ ಎಲ್ಲರು ಹುಬ್ಬುಹಾರಿಸಿದ್ದಾರೆ. ಇಡೀ ಕುಟುಂಬ ಬಹಳ ಸಮಯದ ನಂತರ ಅಂಬಾನಿ ಕುಟುಂಬದ ಸಮಾರಂಭದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದೆ. ತನ್ನ ಹೊಸ ಲುಕ್ನೊಂದಿಗೆ ಈವೆಂಟ್ಗೆ ಬಂದ ಆರಾಧ್ಯ ಮೇಲೆ ಎಲ್ಲರ ಕಣ್ಣುಗಳು ಇದ್ದವು.

ಈ ಹಿಂದೆ ಯಾವಾಗಲೂ ಒಂದೇ ರೀತಿಯ ಹೇರ್ ಸ್ಟೈಲ್ ನಲ್ಲಿ ಕಾಣುತ್ತಿದ್ದ ಆರಾಧ್ಯ ಮೊದಲ ಬಾರಿ ಬರೀ ಹೇರ್ ಸ್ಟೈಲ್ ಮಾತ್ರವಲ್ಲದೆ ಸಂಪೂರ್ಣ ಲುಕ್ ಬದಲಾಯಿಸಿಕೊಂಡಿದ್ದಾರೆ. ಇಷ್ಟು ದಿನ ಪುಟ್ಟ ಹುಡುಗಿಯಂತೆ ಕಾಣುತ್ತಿದ್ದ ಅವರು ಈಗ ಹೊಸ ರೀತಿಯಲ್ಲಿ ಕಾಣಿಸಿಕೊಂಡಿದ್ದು, ನೆಟ್ಟಿಗರು ಆಶ್ಚರ್ಯಕ್ಕೆ ಒಳಗಾಗಿದ್ದಾರೆ.
ಐಶ್ವರ್ಯಾ ರೈ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ರಾ ಪುಟ್ಟ ಮಗಳಿಗೆ?
ಆರಾಧ್ಯ ಬಚ್ಚನ್ ಅವರ ಹೊಸ ಲುಕ್ ನೋಡಿ ಎಲ್ಲರೂ ಅವರನ್ನು ಆಕೆಯ ತಾಯಿ, ಕರಾವಳಿ ಬೆಡಗಿ ಐಶ್ವರ್ಯಾ ರೈ ಜೊತೆ ಹೋಲಿಸತೊಡಗಿದರು. ಆಕೆಯ ಹೊಸ ಲುಕ್ಗೆ ಪ್ರಶಂಸೆ ಕೇಳಿ ಬರುತ್ತಿದ್ದ ಬೆನ್ನಲ್ಲೇ ಅನೇಕ ಮಂದಿ ಆರಾಧ್ಯ ಅವರನ್ನು ಪ್ಲಾಸ್ಟಿಕ್ ಸರ್ಜರಿ ಅಂಗಡಿ ಎಂದು ಕೆಲವರು ಕರೆದಿದ್ದಾರೆ.

ಆರಾಧ್ಯ ಬಚ್ಚನ್ ಮೂಗು ಮತ್ತು ತುಟಿಗೆ ಈಗಾಗಲೇ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದಾರೆ ಎನ್ನುತ್ತಾರೆ ನೆಟಿಜನ್ಗಳು. ಅಷ್ಟೇ ಅಲ್ಲ, ಆರಾಧ್ಯ ತನ್ನ ಮುಖದ ಮೇಲೆ ಸ್ಕಿನ್ ವೈಟ್ನಿಂಗ್ ಟ್ರೀಟ್ಮೆಂಟ್ ತೆಗೆದುಕೊಂಡಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದಾರೆ. ಈ ಮೊದಲು ಆರಾಧ್ಯ ಅವರ ಚರ್ಮದ ಬಣ್ಣ ತುಂಬಾ ಕಪ್ಪಾಗಿತ್ತು. ಅಷ್ಟೇ ಅಲ್ಲ, ಪ್ರತಿ ಬಾರಿಯೂ ಅದೇ ಹೇರ್ ಸ್ಟೈಲ್ ನಲ್ಲಿ ತನ್ನ ತಾಯಿಯೊಂದಿಗೆ ಕಾಣಿಸಿಕೊಂಡಿದ್ದರು ಎಂದಿದ್ದಾರೆ.
ಬಾಲಿವುಡ್ನ ಬಹುತೇಕ ಸಮಾರಂಭಗಳಲ್ಲಿ ಆರಾಧ್ಯ ಅದೇ ಲುಕ್ನಲ್ಲಿ ಕಾಣಿಸಿಕೊಂಡಿದ್ದರು. ಬದಲಾದ ಲುಕ್ನೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದು ಇದೇ ಮೊದಲು. ಅಂದಹಾಗೆ, ಆಕೆಗೆ ಪ್ಲಾಸ್ಟಿಕ್ ಸರ್ಜರಿ ಆಗಿದೆಯೇ ಅಥವಾ ಇಲ್ಲವೇ ಎಂದು ಸದ್ಯಕ್ಕೆ ಏನನ್ನೂ ಹೇಳಲಾಗುವುದಿಲ್ಲ.
ಮಾರ್ಚ್ 1 ರಿಂದ ಮಾರ್ಚ್ 3 ರವರೆಗೆ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಕಾರ್ಯಕ್ರಮವು ಗುಜರಾತ್ನ ಜಾಮ್ನಗರದಲ್ಲಿ ನಡೆದಿದೆ. ಕಾರ್ಯಕ್ರಮದಲ್ಲಿ ಅಮೀರ್ ಖಾನ್, ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಮೊದಲ ಬಾರಿಗೆ ವೇದಿಕೆಯಲ್ಲಿ ಒಟ್ಟಿಗೆ ನೃತ್ಯ ಮಾಡಿದ್ದಾರೆ. ಇದಲ್ಲದೇ ವಿಶ್ವವಿಖ್ಯಾತ ಪಾಪ್ ತಾರೆ ರಿಹಾನ್ನಾ ತಮ್ಮ ಪ್ರದರ್ಶನ ನೀಡಿದ್ದು, ಕೋಟ್ಯಾಂತರ ರೂಪಾಯಿ ಸಂಭಾವನೆ ಪಡೆದಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications