ಕಾಟೇರ ನೋಡಿದ್ರಾ? ಅಭಿಮಾನಿ ಪ್ರಶ್ನೆಗೆ ಕಿಚ್ಚ ಸುದೀಪ್ ಕೊಟ್ಟ ಉತ್ತರವೇನು
ಮಂಗಳವಾರ ಬೆಳ್ಳಂಬೆಳಗ್ಗೆಯೇ ನಟ ಕಿಚ್ಚ ಸುದೀಪ್ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ. ಈ ಮೂಲಕ ಅಭಿಮಾನಿಗಳಲ್ಲಿ ಆಶ್ಚರ್ಯ ಮೂಡಿಸಿದರು. ಅಭಿಮಾನಿಗಳ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದರು. ತಮ್ಮ ಮುಂದಿನ ಚಿತ್ರದ ಬಗ್ಗೆ ಕೂಡ ಮಾತನಾಡಿದರು.
ಸಾವಿರಾರು ಅಭಿಮಾನಿಗಳು ಪ್ರಶ್ನೆಗಳನ್ನು ಕೇಳಿದರು. ಸಿಕ್ಕ ಸಮಯದಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದರು. ಅಭಿಮಾನಿಯೊಬ್ಬರು ದರ್ಶನ್ ಅಭಿನಯದ ಕಾಟೇರ ಸಿನಿಮಾ ಯಾವಾಗ ನೋಡ್ತೀರಾ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ್ದು, ಈಗಾಗಲೇ ನೋಡಿದ್ದೇನೆ ಎನ್ನುವಂತೆ ಉತ್ತರ ನೀಡಿದ್ದಾರೆ.

ಸುದೀಪ್ ಅವರಿಗೆ ಕಾಟೇರ ಸಿನಿಮಾ ನೋಡುವಂತೆ ಈ ಮೊದಲು ಚಿತ್ರತಂಡವೇ ಆಹ್ವಾನ ನೀಡಿತ್ತು. ಆದರೆ ಮ್ಯಾಕ್ಸ್ ಸಿನಿಮಾ ಶೂಟಿಂಗ್ನಲ್ಲಿ ನಿರತರಾಗಿದ್ದ ಕಾರಣ ಅವರು ಚಿತ್ರವನ್ನು ನೋಡುವ ಭರವಸೆ ನೀಡಿದ್ದರು. ಈಗ ಅಭಿಮಾನಿಗಳಿಗೆ ನಾನು ಸಿನಿಮಾ ನೋಡಿದ್ದೇನೆ ಎಂದಿದ್ದಾರೆ.
ಆರ್ ಸಿಬಿ ಕಪ್ ಗೆಲ್ಲುತ್ತಾ?
ಮತ್ತೊಬ್ಬ ಅಭಿಮಾನಿ ಈ ವರ್ಷವಾದರೂ ಆರ್ ಸಿಬಿ ಕಪ್ ಗೆಲ್ಲುತ್ತಾ ಎಂದು ಪ್ರಶ್ನೆ ಮಾಡಿದ್ದು, ಉತ್ತರ ನೀಡಿರುವ ಸುದೀಪ್ ನಾನು ಅದರ ಬಗ್ಗೆ ಯೋಚನೆ ಮಾಡುವುದನ್ನು ನಿಲ್ಲಿಸಿದ್ದೇನೆ ಅವರ ಆಟವನ್ನು ಎಂಜಾಯ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಒಂದು ಮಾತು ಹೇಳಿ ಎಂದು ಕೇಳಿರುವ ಪ್ರಶ್ನೆಗೆ 'ಸ್ಪೂರ್ತಿದಾಯಕ' ಎಂದು ಉತ್ತರ ನೀಡಿದ್ದಾರೆ. ಸಲ್ಮಾನ್ ಖಾನ್ರನ್ನು ನನ್ನ ಸಹೋದರ ಎಂದು ಕೂಡ ಹೇಳಿದ್ದಾರೆ.
ಮ್ಯಾಕ್ಸ್ ಸಿನಿಮಾ ಬಗ್ಗೆ ಹೇಳಿದ್ದೇನು?
ಸುದೀಪ್ ಅವರ ಮುಂದಿನ ಸಿನಿಮಾ ಮ್ಯಾಕ್ಸ್ ಬಗ್ಗೆ ಭಾರಿ ನಿರೀಕ್ಷೆ ಇದೆ. ಸಿನಿಮಾ ಯಾವಾಗ ರಿಲೀಸ್ ಎನ್ನುವ ಬಗ್ಗೆ ಮಾಹಿತಿ ಕೊಡಿ ಎಂದು ಅಭಿಮಾನಿಗಳು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಶೀಘ್ರದಲ್ಲೇ ಮಾಹಿತಿ ತಿಳಿಸುವುದಾಗಿ ಹೇಳಿದರು. ಅತಿ ಶೀಘ್ರದಲ್ಲೇ ಚಿತ್ರದ ಸೆಟ್ನಿಂದ ಒಂದು ಸ್ಟಿಲ್ ಬಿಡುಗಡೆ ಮಾಡುವಂತೆ ಕೂಡ ಕೇಳಿದ್ದಾರೆ.
ಬಿಲ್ಲ ರಂಗ ಭಾಷ ಬಗ್ಗೆ ಹೇಳಿದ್ದೇನು?
ಸುದೀಪ್ ಬಿಲ್ಲ ರಂಗ ಭಾಷ ಎನ್ನುವ ಸಿನಿಮಾನದಲ್ಲಿ ನಟಿಸುವುದಾಗಿ ಘೋಷಣೆ ಮಾಡಿ ಹಲವು ವರ್ಷಗಳೇ ಕಳೆದಿದ್ದರು ಸಿನಿಮಾ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಕೂಡ ಪ್ರತಿಕ್ರಿಯೆ ನೀಡಿದ ಸುದೀಪ್ 2024ರಲ್ಲೇ ಈ ಸಿನಿಮಾ ಬಗ್ಗೆ ಮಾಹಿತಿ ನೀಡುವುದಾಗಿ ಭರವಸೆ ನೀಡಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications