Shivaraj Kumar: ಶಿವರಾಜ್ಕುಮಾರ್ಗೆ ಆಪರೇಷನ್; ಬೇಗ ಗುಣಮುಖರಾಗಿ ಎಂದ ಡಿಕೆ ಶಿವಕುಮಾರ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದಾರೆ. ಇಂದು ಅವರಿಗೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು ನಾಡಿನಾದ್ಯಂತ ಅಭಿಮಾನಿಗಳು ಅವರು ಬೇಗ ಗುಣಮುಖರಾಗಿ ಬರಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅನೇಕ ನಟ, ನಟಿಯರು, ರಾಜಕೀಯ ನಾಯಕರು ಕೂಡ ಶಿವರಾಜ್ಕುಮಾರ್ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಟ್ವೀಟ್ ಮಾಡುವ ಮೂಲಕ ಶಿವರಾಜ್ಕುಮಾರ್ ಗುಣಮುಖರಾಗಿ ಬರಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
ಅಮೆರಿಕಾದ ಫ್ಲೊರಿಡಾದಲ್ಲಿರುವ ಮಿಯಾಮಿ ಆಸ್ಪತ್ರೆಯಲ್ಲಿ ಶಿವರಾಜ್ಕುಮಾರ್ ಅವರಿಗೆ ಸರ್ಜರಿ ಮಾಡಲಾಗಿದೆ. ಡಾ. ಮುರುಗೇಶ್ ನೇತೃತ್ವದದಲ್ಲಿ ಶಸ್ತ್ರಚಿಕಿತ್ಸೆ ನಡೆದಿದ್ದು, ಶಿವಣ್ಣ ಅವರು ಇನ್ನಷ್ಟು ದಿನಗಳು ಆಸ್ಪತ್ರೆಯಲ್ಲಿ ಇರಲಿದ್ದಾರೆ. ಡಿಸೆಂಬರ್ 18ರಂದು ಅಮೆರಿಕಾಗೆ ತೆರಳಿದ್ದ ಶಿವರಾಜ್ಕುಮಾರ್ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇನ್ನೂ ಒಂದು ತಿಂಗಳು ಅಲ್ಲೇ ಇರಲಿದ್ದಾರೆ.

2025ರ ಜನವರಿ 25ರಂದು ಅಮೆರಿಕದಿಂದ ಹೊರಡಲಿದ್ದು ಮರುದಿನ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹಲವು ತಿಂಗಳಿನಿಂದ ಅವರಿಗೆ ಆರೋಗ್ಯ ಸಮಸ್ಯೆಯಾಗಿದ್ದು ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು. ಶಸ್ತ್ರಚಿಕಿತ್ಸೆ ಅಗತ್ಯವಿರುವ ಕಾರಣ ಅವರು ಯುಎಸ್ಗೆ ಹೋಗಿದ್ದಾರೆ.
ಡಿಕೆ ಶಿವಕುಮಾರ್ ಪ್ರಾರ್ಥನೆ
ಶಿವರಾಜ್ಕುಮಾರ್ ಅವರ ಆರೋಗ್ಯ ಸುಧಾರಿಸಲಿ ಎಂದು ಹಾರೈಸಿ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. "ನಮ್ಮ ನಿಮ್ಮೆಲ್ಲರ ನೆಚ್ಚಿನ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಅವರು ಶೀಘ್ರವೇ ಗುಣಮುಖರಾಗಲಿ ಎಂದು ಭಗವಂತನನ್ನು ಪ್ರಾರ್ಥಿಸುತ್ತೇನೆ. ನನ್ನ ನೆರೆಹೊರೆಯವರೇ ಆದ ಶಿವರಾಜ್ ಕುಮಾರ್ ಅವರು ಗಂಭೀರ ಕಾಯಿಲೆಗೆ ಒಳಗಾಗಿದ್ದಾರೆ ಎಂದು ತಿಳಿದಾಗ ದುಃಖವಾಯಿತು. ಆದರೆ, ಅವರ ಜೀವನೋತ್ಸಾಹ, ಎಲ್ಲವನ್ನೂ ಗೆಲ್ಲಬಲ್ಲೆ ಎನ್ನುವ ಧೈರ್ಯ ನಿಜಕ್ಕೂ ಎಲ್ಲರಿಗೂ ಸ್ಫೂರ್ತಿದಾಯಕ. ಭಗವಂತ ಅವರಿಗೆ ಇನ್ನಷ್ಟು ಚೈತನ್ಯ ನೀಡಿ ಕಾಪಾಡಲಿ." ಎಂದು ಶಿವರಾಜ್ಕುಮಾರ್ ಜೊತೆಗಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.
ರಾಜ್ಯಾದ್ಯಂತ ಪ್ರಾರ್ಥನೆ
ಶಿವರಾಜ್ಕುಮಾರ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು ಅವರು ಶೀಘ್ರದಲ್ಲೇ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸಿ ರಾಜ್ಯದ ಹಲವು ದೇವಸ್ಥಾನಗಳಲ್ಲಿ ಹೋಮ ಹವನ ಮಾಡಲಾಗಿದೆ. ಅಭಿಮಾನಿಗಳು ತಮ್ಮ ಇಷ್ಟದ ದೇವರಿಗೆ ಪೂಜೆ ಸಲ್ಲಿಸಿ ಶಿವಣ್ಣ ಬೇಗ ಹುಷಾರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
ಭೈರತಿ ರಣಗಲ್ ಒಟಿಟಿಗೆ
ಶಿವರಾಜ್ಕುಮಾರ್ ಅಭಿನಯದ ಭೈರತಿ ರಣಗಲ್ ಸಿನಿಮಾ ನವೆಂಬರ್ 25 ರಂದು ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಇನ್ನೂ ಚಿತ್ರಮಂದಿರಗಳಲ್ಲಿ ಯಶಸ್ವೀ ಪ್ರದರ್ಶನ ಕಾಣುತ್ತಿದ್ದು ಒಟಿಟಿಗೆ ಲಗ್ಗೆಯಿಡಲು ಸಜ್ಜಾಗಿದೆ. ಡಿಸೆಂಬರ್ 25ರಿಂದ ಅಮೇಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ.
-
‘ಲವ್ ಮಾಕ್ಟೇಲ್ 3’ ಕಥೆ ವಿವಾದ ಸುಖಾಂತ್ಯ: ಫಿಲ್ಮ್ ಚೇಂಬರ್ ಸಭೆಯಲ್ಲಿ ಡಾರ್ಲಿಂಗ್ ಕೃಷ್ಣ-ಗುರು ದೇಶಪಾಂಡೆ ಸಂಧಾನ ಯಶಸ್ವಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications