Dwarakish: ದ್ವಾರಕೀಶ್ ನಿರ್ಮಾಪಕರಾಗಿ ಮಾಡಿದ ಹಿಟ್ ಸಿನಿಮಾಗಳಿವು
Dwarakish: ನಿರ್ಮಾಪಕನಾಗಿ, ನಿರ್ದೇಶಕನಾಗಿ, ಹಾಸ್ಯ ನಟ ಹಾಗೂ ಪೋಷಕ ಪಾತ್ರದಲ್ಲಿ ಮಿಂಚಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದ ಹಿರಿಯ ನಟ ದ್ವಾರಕೀಶ್ (81) ಅವರು ಇಂದು ಹೃದಯಾಘಾತದಿಂದ (ಏಪ್ರಿಲ್ 16) ನಿಧನರಾಗಿದ್ದಾರೆ. ಹಾಗಾದರೆ ನಿರ್ಮಾಪಕರಾಗಿ ಇವರು ಮಾಡಿದ ಹಿಟ್ ಸಿನಿಮಾಗಳು ಯಾವುವು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಗಸ್ಟ್ 19, 1942ರಂದು ಜನಸಿದ್ದ ದ್ವಾರಕೀಶ್ ಅವರು, 1963ರಲ್ಲಿ ಕನ್ನಡ ಚಿತ್ರಗಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇನ್ನು ದ್ವಾರಕೀಶ್ ಬ್ಯಾನರ್ ಅಡಿಯಲ್ಲಿ 40ಕ್ಕೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ಇವರದ್ದಾಗಿದೆ. ಈ ಪೈಕಿ ಹಿಟ್ ಸಿನಿಮಾಗಳು ಯಾವುವು ಎಂದು ಇಲ್ಲಿ ಗಮನಿಸಿ.

ದ್ವಾರಕೀಶ್ ನಿರ್ಮಾಣದ ಹಿಟ್ ಸಿನಿಮಾಗಳಿವು
* ಮಮತೆಯ ಬಂಧನ
* ಮೇಯರ್ ಮುತ್ತಣ್ಣ
* ಕುಳ್ಳ ಏಜೆಂಟ್ 000
* ಭಾಗ್ಯವಂತರು
* ಸಿಂಗಾಪುರ್ನಲ್ಲಿ ರಾಜಾಕುಳ್ಳ
* ಪ್ರೀತಿ ಮಾಡು ತಮಾಷೆ ನೋಡು
* ಗುರು ಶಿಷ್ಯರು
* ಪೆದ್ದ ಗೆದ್ದ
* ನ್ಯಾಯ ಎಲ್ಲಿದೆ
* ಪ್ರಚಂಡ ಕುಳ್ಳ
* ನೀ ಬರೆದ ಕಾದಂಬರಿ
* ನೀ ತಂದ ಕಾಣಿಕೆ
* ಡ್ಯಾನ್ಸ್ ರಾಜಾ ಡ್ಯಾನ್ಸ್
* ರಾಯರು ಬಂದರು ಮಾವನ ಮನೆಗೆ
* ಆಪ್ತಮಿತ್ರ
* ವಿಷ್ಣುವರ್ಧನ
* ಆಟಗಾರ
* ಚೌಕ
* ಅಮ್ಮ ಐ ಲವ್ ಯು
ಇನ್ನು ಅಡ್ಡ ವಾರಿಸು ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದದ್ದು, ಈ ಸಿನಿಮಾವನ್ನು ದ್ವಾರಕೀಶ್ ನಿರ್ಮಾಣ ಮಾಡಿದ್ದರು. 1983ರಲ್ಲಿ ಈ ಚಿತ್ರ ತೆರೆ ಕಂಡಿತ್ತು. ನಂತರ ನೀ ಬರೆದ ಕಾದಂಬರಿ, ಗುಂಗುವಾ ಸೇರಿದಂತೆ ಹಲವು ಚಿತ್ರಗಳಲ್ಲಿಇಬ್ಬರೂ ಕೆಲಸ ಮಾಡಿದ್ದಾರೆ.
ಇನ್ನು ಬಗ್ಗೆ ಟ್ವೀಟ್ ಮೂಲಕ ನಟ ರಜನಿಕಾಂತ್ ಪ್ರತಿಕ್ರಿಯಿಸಿ, ಈ ಸ್ನೇಹಕ್ಕೆ ಕುರುಹು ಎನ್ನುವಂತೆ ತಮ್ಮಿಬ್ಬರ ಸ್ನೇಹವನ್ನು ರಜನಿಕಾಂತ್ ನೆನಪಿಸಿಕೊಂಡಿದ್ದಾರೆ. "ನನ್ನ ಬಹುಕಾಲದ ಆತ್ಮೀಯ ಗೆಳೆಯ ದ್ವಾರಕೀಶ್ ಅವರ ನಿಧನ ನನಗೆ ಅತೀ ನೋವನ್ನು ತಂದಿದೆ. ಹಾಸ್ಯ ನಟನಾಗಿ ವೃತ್ತಿ ಜೀವನ ಆರಂಭಿಸಿ, ಆನಂತರ ದೊಡ್ಡ ನಿರ್ಮಾಪಕರು ಹಾಗೂ ನಿರ್ದೇಶಕರಾಗಿ ಬೆಳೆದರು. ಅಲ್ಲದೆ ಬೆಳೆಸಿದರು. ಅವರ ಅಗಲಿಕೆ ನೋವು ತಂದಿದೆ," ಎಂದು ಬರೆದುಕೊಂಡಿದ್ದಾರೆ.
ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ಹಿರಿಯ ನಿರ್ದೇಶಕ ಭಾರ್ಗವ್ ಕೂಡ ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ಅವರ ಸಂಬಂಧಿಯೂ ಆಗಿರುವ ಭಾರ್ಗವ್, "ನಾನು ಮತ್ತು ದ್ವಾರಕೀಶ್ ಬಾಲ್ಯದ ಸ್ನೇಹಿತರು. ಶಾಲೇ-ಕಾಲೇಜು ಶಿಕ್ಷಣ ಒಟ್ಟಿಗೆ ಕಲಿತಿದ್ದೇವೆ. ಕಾಲೇಜು ದಿನಗಳಿಂದಲೇ ದ್ವಾರಕೀಶ್ಗೆ ನಟನೆಯಲ್ಲಿ ಆಸಕ್ತಿ ಇತ್ತು. ಅವರ ಅಣ್ಣ ಮೈಸೂರಲ್ಲಿ ಅಂಗಡಿ ಹಾಕಿ ಕೊಟ್ಟಿದ್ದರು. ಆದರೆ ಅವರು ಅಂಗಡಿ ಬಿಟ್ಟು ಬೆಂಗಳೂರಿಗೆ ನಟ ಆಗುವುದಕ್ಕೆ ಬಂದರು. ಚಿತ್ರರಂಗದಲ್ಲಿ 50ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ನನಗೆ ಅವರು ಅನ್ನದಾತ, ಅವರಿಂದಲೇ ನಾನು ಚಿತ್ರರಂಗಕ್ಕೆ ಬಂದೆ. ದ್ವಾರಕೀಶ್ ನನ್ ಗುರು ಅನ್ನದಾತ," ಎಂದು ಹೇಳುವ ಮೂಲಕ ಭಾವುಕರಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications