Darshan Thoogudeepa: ನಟ ದರ್ಶನ್ ಪೊಲೀಸರ ಕೈಗೆ ತಗ್ಲಾಕೊಂಡಿದ್ದೇಗೆ ಗೊತ್ತಾ.?-ಇಲ್ಲಿದೆ ಮಾಹಿತಿ
Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ & ಗ್ಯಾಂಗ್ ಜೈಲು ಸೇರಿದ್ದು, ಈಗಾಗಲೇ ಇವರ ವಿರುದ್ಧ ಪೊಲೀಸರು ಕೋರ್ಟ್ಗೆ ಚಾರ್ಜ್ ಶೀಟ್ ಕೂಡ ಸಲ್ಲಿಸಿದ್ದಾರೆ. ಅಲ್ಲದೆ, ಈ ಗ್ಯಾಂಗ್ನ ಮಾಡಿದ ಗನಾಂಧಾರಿ ಕೆಲಸಗಳು ಒಂದೊಂದೇ ಹೊರಬರುತ್ತಿದ್ದು, ಇದೀಗ ದರ್ಶನ್ ತಗ್ಲಾಕೊಳ್ಳಲು ಪ್ರಮುಖ ಕಾರಣಕರ್ತ ಯಾರು ಎನ್ನುವ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಕಾರಣಕ್ಕೆ ದರ್ಶನ್ & ಗ್ಯಾಂಗ್ ಬೆಂಗಳೂರಿನ ಪಟ್ಟಣಗೆರೆ ಶೆಡ್ಗೆ ರೇಣುಕಾಸ್ವಾಮಿಯನ್ನು ಕರೆಸಿಕೊಂಡು ಭೀಕರವಾಹಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಅಲ್ಲದೆ, ಈ ಗ್ಯಾಂಗ್ ಭಯಾನಕ ಕೃತ್ಯಗಳು ಬಗೆದಷ್ಟು ಬಯಾಲಗುತ್ತಲೇ ಇವೆ.

ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ ನಟ ದರ್ಶನ್ ಮನೆ ಸೇರಿಕೊಂಡ ಬಳಿಕ ಎ14 ಆರೋಪಿ ಪ್ರದೋಷ್ ಬಾಸ್ ನಾನು ಎಲ್ಲಾ ನೋಡಿಕೊಳ್ಳುತ್ತೇನೆ. ನೀವು ಆರಾಮಾಗಿರಿ, ತಲೆ ಕೆಡಿಸಿಕೊಳ್ಳಬೇಡಿ ಎಂದು ಧೈರ್ಯ ತುಂಬಿದ್ದನಂತೆ. ಬಳಿಕ ಪ್ರದೋಷ್ ಬನಶಂಕರಿ ತಲುಪುತ್ತಿದ್ದಂತೆ ಎ3 ಆರೋಪಿ ಆಗಿರುವ ಪವನ್ ರೇಣುಕಾಸ್ವಾಮಿ ಮೃತಪಟ್ಟಿರುದಾಗಿ ತಿಳಿಸಿದ್ದಾನಂತೆ.
ನಟ ದರ್ಶನ್ಗೂ ಈ ವಿಚಾರ ಗೊತ್ತಾಗುತ್ತಿದ್ದಂತೆ ಪ್ರದೋಷ್ನನ್ನು ಮನೆಗೆ ಕರೆಸಿದ್ದು, ಈ ವೇಳೆ ಎಷ್ಟೇ ಹಣ ಖರ್ಚಾದರೂ ಪರ್ವಾಗಿಲ್ಲ ನನ್ನ ಹಾಗೂ ಪವಿತ್ರಾ ಗೌಡ ಹೆಸರು ಹೊರಬರದಂತೆ ನೋಡಿಕೊಳ್ಳಬೇಕು ಎಂದು ಪ್ರದೋಷ್ಗೆ ತಾಕೀತು ಮಾಡಿದ್ದಂತೆ ದರ್ಶನ್. ಇನ್ನು ಇದಕ್ಕೆ ಒಪ್ಪಿಕೊಂಡು ವಿನಯ್ & ಪ್ರದೋಷ್ ಲಕ್ಷ ಲಕ್ಷ ಹಣವನ್ನು ದರ್ಶನ್ ಮನೆಯಿಂದಲೇ ತೆಗೆದುಕೊಂಡು ಹೋಗಿದ್ದು, ಇವರಿಬ್ಬರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎನ್ನುವ ಸ್ಫೋಟಕ ಮಾಹಿತಿ ಲಭ್ಯವಾಗಿದೆ.
ಬಳಿಕ ಪ್ರದೋಷ್ ನಮ್ಮ ಹುಡುಗರೇ ಇದ್ದಾರೆ. ಶವವನ್ನು ಎಸೆದು ಅವರನ್ನೇ ಪೊಲೀಸರಿಗೆ ಸೆರೆಂಡರ್ ಆಗುವಂತೆ ಹೇಳಿದ್ದಂತೆ. ಪೊಲೀಸರು ಸುಮ್ನೆ ಇರ್ತಾರ ಅವರಾಗಿಯೇ ಬಂದು ಬಂದು ಶರಣಾದ ಮೇಲೆ ಎಲ್ಲಾರನ್ನೂ ವಿಚಾರಣೆ ನಡೆಸಿದ್ದು, ಈ ವೇಳೆ ಒಬ್ಬೊಬ್ಬರು ಒಂದೊಂದು ಉತ್ತರ ನೀಡಿದ್ದಾರೆ. ಆಗ ಪೊಲೀಸರಿಗೆ ಅನುಮಾನ ಬಂದು ಇದು ವಿಚಾರಣೆತನ್ನು ಮತ್ತಷ್ಟು ಚುರುಕುಗೊಳಿಸಿ ಶರಣಾದ ಆರೋಪಿಗಳಿಂದಲೇ ಸತ್ಯವನ್ನು ಕಕ್ಕಿಸಿದ್ದಾರೆ.
ಒಟ್ಟಿನಲ್ಲಿ ಪ್ರದೋಷ್ ಕೊಟ್ಟ ಈ ಐಡಿಯಾದಿಂದ ನಟ ದರ್ಶನ್ ಕೊನೆಗೂ ಪೊಲೀಸರ ಕೈಗೆ ಸಿಕ್ಕಿದ್ದು, ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಇನ್ನು ಇತ್ತೀಚೆಗಷ್ಟೇ ಜೈಲಿನಲ್ಲೇ ರಾಜಾತಿಥ್ಯ ಹಿನ್ನೆಲೆ ನಟ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶೀಫ್ಟ್ ಮಾಡಲಾಗಿದೆ. ಹಾಗಾದರೆ ಇನ್ನೆಷ್ಟು ಅಸಲಿ ಸತ್ಯಗಳು ಹೊರಬೀಳಲಿವೆಯೋ ಎಂದು ಕಾದುನೋಡಬೇಕಿದೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications