'ಅದ್ಯಾವ ಗುಳ್ಳೆ ನರಿ ಕಣ್ಣು ಬಿತ್ತೋ?' ಕರ್ನಾಟಕ ಕಾಪಾಡು ಅಂತಾ ವಿದೇಶದಲ್ಲಿ ಡಾ.ಬ್ರೋ ಪ್ರಾರ್ಥನೆ
ನಮಸ್ಕಾರ ದೇವ್ರು ಎನ್ನುತ್ತಲೇ ನಮ್ಮ ಕಣ್ಣೆದುರಿಗೆ ಬರುವ ಡಾ.ಬ್ರೋ ಅಥವಾ ಗಗನ್ ಹತ್ತು ಹಲವು ದೇಶಗಳನ್ನು ಸುತ್ತಿ ಅವುಗಳನ್ನು ಕರ್ನಾಟಕದವರಿಗೆ ನಮ್ಮ ಭಾಷೆ ಕನ್ನಡದಲ್ಲೇ ಪರಿಚಯಿಸಿದವರು. ಕನ್ನಡಿಗರ ಮನೆ ಮಾತಾಗಿರುವ ಡಾ.ಬ್ರೋ ಜಗತ್ತಿನ ಅತ್ಯಂತ ದೊಡ್ಡ ದೇಶ ಯೂರೋಪ್ಗೆ ಭೇಟಿ ನೀಡಿದ್ದಾರೆ.
ಯೂರೋಪ್ ದೇಶದ ಪ್ರಸಿದ್ಧ ಸ್ಥಳಗಳ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಡಾ.ಬ್ರೋ, ಅಲ್ಲಿನ ಪುರಾತನ ಚರ್ಚ್ಗೆ ಭೇಟಿ ನೀಡಿದ್ದು, ಪೂಜೆ ಸಲ್ಲಿಸುವ ವೇಳೆ ಕರ್ನಾಟಕದ ಬಗ್ಗೆ ವಿಶೇಷ ಪ್ರಾರ್ಥನೆ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಡಾ.ಬ್ರೋ ತಮ್ಮದೇ ಯೂಟ್ಯೂಬ್ ಚಾನೆಲ್ನಲ್ಲಿ ಹಂಚಿಕೊಂಡಿರುವ ಯೂರೋಪ್ ದೇಶದ ವಿಡಿಯೋದಲ್ಲಿ 'ಹಾಲೆಲೂಯಾ.. ತಂದೆ ನಮ್ಮ ಕರ್ನಾಟಕದ ಮೇಲೆ ಅದ್ಯಾವ ಗುಳ್ಳೆ ನರಿ ಕಣ್ಣು ಬಿತ್ತು ಏನೋ? ಏನೇನು ಆಗಬಾರದೋ ಅದೆಲ್ಲಾ ಆಗುತ್ತಿದೆ ಈ ನಡುವೆ. ಕಾಪಾಡು ತಂದೆ' ಎಂದು ದೇವರಿಗೆ ಕ್ಯಾಂಡಲ್ ಹಚ್ಚಿದ್ದಾರೆ. ಅಲ್ಲದೇ ಅಲ್ಲಿನ ದೇವರುಗಳ ವಿಡಿಯೋವನ್ನು ಸಂಪೂರ್ಣವಾಗಿ ಡಾ.ಬ್ರೋ ತೋರಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಕರ್ನಾಟಕದ ಒಳಿತಿಗೆ ಪ್ರಾರ್ಥಿಸಿರುವ ಕನ್ನಡದ ಕುವರನಿಗೆ ನೋಡುಗರು ಜೈ ಎಂದಿದ್ದಾರೆ.
ಕರ್ನಾಟಕದಲ್ಲಿ ಇತ್ತೀಚಿಗೆ ನಡೆದ ಅಹಿತಕರ ಘಟನೆಗಳು ಏನೇನು..?
* ಕರ್ನಾಕದಲ್ಲಿ ಈ ಬಾರಿಯ ಬೇಸಿಗೆಯಲ್ಲಿ ಭಾರೀ ಬರಗಾಲ ತಲೆದೂರಿತ್ತು. ರಾಜ್ಯದ ಬಹುತೇಕ ಭಾಗದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ನಡೆದಿತ್ತು.
* ಕರ್ನಾಟಕದ ವಿವಿಧೆಡೆ ಅಗ್ನಿ ಅವಘಡ ಅದರಲ್ಲೂ ಪಟಾಕಿ ದುರಂತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನ ಕಾರ್ಮಿಕರ ಸಾವು.
* ಬೇಸಿಗೆಯ ಬಿಸಿಲು ತಾಳದೇ ಜನರ ಒದ್ದಾಟ.
* ಹುಬ್ಬಳ್ಳಿ ಅಂಜಲಿ ಹಾಗೂ ನೇಹಾ ಹಿರೇಮಠ ಎನ್ನುವ ವಿದ್ಯಾರ್ಥಿಗಳ ಕೊಲೆ.
* ಬೆಳಗಾವಿಯಲ್ಲಿ ಜೈನ ಮುನಿಯ ಭರ್ಬರ ಹತ್ಯೆ.
* ರಾಜ್ಯದಲ್ಲಿ ಕೊಲೆಗಳು ಸೇರಿದಂತೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ.

ಕರ್ನಾಟಕದಲ್ಲಿ ರಾಜಕೀಯ ಹಾಗೂ ಸಿನಿಮಾಟ ಸೆಲೆಬ್ರೆಟಿಗಳ ಬಂಧನ
* ಲೈಂಗಿಕ ದೌರ್ಜನ್ಯ ಆರೋಪದಡಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಸದ್ಯ ಜೈಲು ಪಾಲಾಗಿದ್ದಾರೆ. ಕರ್ನಾಟಕದಲ್ಲಿ ಇದೊಂದು ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ಎಂದು ಪರಿಗಣಿಸಲಾಗಿದ್ದು, ಲೋಕಸಭಾ ಚುನಾವಣೆ ಬಳಿಕ ವಿದೇಶ ಸೇರಿದ್ದ ಪ್ರಜ್ವಲ್ ರೇವಣ್ಣರನ್ನ ಕಾದು ಬಂಧಿಸಲಾಗಿತ್ತು. ಸದ್ಯ ಎಸ್ಐಟಿ ತಂಡ ಈ ಪ್ರಕರಣದ ತನಿಖೆ ನಡೆಸುತ್ತಿದೆ.
* ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಸದ್ಯ ಜಾಮೀನಿನ ಮೇರೆಗೆ ಬಿಡುಗಡೆಗೊಳಿಸಲಾಗಿದೆ.
* ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪರನ್ನ ಬಂಧಿಸಲಾಗಿದೆ. ಅಲ್ಲದೇ ದರ್ಶನ್ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಈ ಪ್ರಕರಣದಲ್ಲಿ ಹತ್ತಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಪ್ರಕರಣದ ತನಿಖೆ ಜೋರಾಗಿಯೇ ನಡೆಯುತ್ತಿದ್ದು, ನಟ ದರ್ಶನ್ ಪರಪ್ಪನ ಅಗ್ರಹಾರದ ಜೈಲು ಪಾಲಾಗಿದ್ದಾರೆ.
* ಇನ್ನು ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತ್ಯತೀತ ಜನತಾದಳ (ಜೆಡಿಎಸ್) ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣರನ್ನು ಬಂಧಿಸಲಾಗಿದ್ದು, ತನಿಖೆ ಮುಂದಿನ ಭಾಗವಾಗಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications