Dwarakish: ಕರುನಾಡ ಕುಳ್ಳ ದ್ವಾರಕೀಶ್ ಅವರ ಪ್ರಸಿದ್ಧ ಸಿನಿಮಾಗಳು
ಬೆಂಗಳೂರು, ಏಪ್ರಿಲ್. 16: ಕರುನಾಡಿನ ರಾಜಕುಳ್ಳ ಎಂದು ಖ್ಯಾತರಾಗಿದ್ದ ಹಿರಿಯ ನಟ ದ್ವಾರಕೀಶ್ ತಮ್ಮ 81ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಅಪಾರ ಅಭಿಮಾನಿಗಳು ಮತ್ತು ಸಿನಿಪ್ರಿಯರನ್ನು ಅಗಲಿದ್ದಾರೆ. ನಟರಾಗಿ, ನಿರ್ಮಾಪಕ ಮತ್ತು ನಿರ್ದೇಶಕರಾಗಿ ಕನ್ನಡ ಕಾಲಾಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದರು.
ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಇವರು ವರನಟ ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್ ಸೇರಿ ಮೇರುನಟಟೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ನಾಯಕ ನಟನಾಗಿ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವುದರ ಜೊತೆ ಜೊತೆಗೆ ಹಿರಿಯ ನಟರೊಂದಿಗೆ ಪೋಷಕ ಪಾತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ದಿವಂಗತ ನಟ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಸಕತ್ ಫೇಮಸ್ ಆಗಿತ್ತು.

19 ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದ ರಾಜ ಕುಳ್ಳ
ನಟ ದ್ವಾರಕೀಶ್ ಒಬ್ಬ ನಿರ್ಮಾಪಕ ಮಾತ್ರವಲ್ಲದೆ ಉತ್ತಮ ನಿರ್ದೇಶಕ ಕೂಡ ಹೌದು. ಕನ್ನಡ ಸಿನಿಮಾರಂಗಕ್ಕೆ ಹಲವು ಹಿಟ್ ಸಿನಿಮಾಗಳನ್ನು ನೀಡಿದ ಖ್ಯಾತಿ ದ್ವಾರಕೀಶ್ಗೆ ಇದೆ. ನಿರ್ಮಾಪಕರಾಗಿ ಕನ್ನಡ ಸಿನಿರಂಗಕ್ಕೆ ಕಾಲಿಟ್ಟರೂ ಕೂಡ ನಟ, ನಿರ್ದೇಶಕರಾಗಿ ಹೆಸರು ಮಾಡಿದವರು. ಬರೋಬ್ಬರಿ 19 ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.
ನೀ ಬಾರೆದ ಕಾದಂಬರಿ, ನೀ ತಂದ ಕಾಣಿಕೆ, ನಾನ್ ಆದಿಮೈ ಇಲ್ಲೈ, ಆಫ್ರಿಕಾದಲ್ಲಿ ಶೀಲ, ಡ್ಯಾನ್ಸ್ ರಾಜ ಡ್ಯಾನ್ಸ್, ಜೈ ಕರ್ನಾಟಕ, ಕೃಷ್ಣ ನೀ ಕುಣಿದಾಗ, ಶೃತಿ, ಗೌರಿ ಕಲ್ಯಾಣ, ಹೊಸ ಕಳ್ಳ ಹಳೇ ಕುಳ್ಳ, ರಾಯರು ಬಂದರು ಮಾವನ ಮನೆಗೆ, ರಸಿಕ, ಕಿಲಾಡಿಗಳು, ಹೃದಯಾ ಕಳ್ಳರು, ಕಿಡ್ನಾಪ್, ಗಿಡ್ಡು ದಾದಾ, ಕಲ್ಲಾರು, ಶೃತಿ ಹಾಕಿದ ಹೆಜ್ಜೆ, ಮಜ್ನು ಈ ಸಿನಿಮಾಗಳಿಗೆ ದ್ವಾರಕೀಶ್ ಆಕ್ಷನ್ ಕಟ್ ಹೇಳಿದ್ದಾರೆ.

ನಿರ್ಮಾಪಕನಾಗಿ ನಟ ದ್ವಾರಕೀಶ್
ದ್ವಾರಕೀಶ್ ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ನಿರ್ಮಾಪಕರಾಗಿ. ಮಮತೆಯ ಬಂಧನ ಸಿನಿಮಾ ಜಂಟಿ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಕಾಲಿಟ್ಟ ಅವರು, 1969 ರಲ್ಲಿ ಡಾ.ರಾಜ್ ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಸಿನಿಮಾದಿಂದ ಸ್ವತಂತ್ರ ನಿರ್ಮಾಪಕರಾದರು. ಸಣ್ಣ ಬಜೆಟ್ ಚಿತ್ರಗಳಿಂದ ಹಿಡಿದು 1969 ರಿಂದ 2019ರ ವರೆಗೂ ಸುಮಾರು ಐವತ್ತು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ.
ಮೇಯರ್ ಮುತ್ತಣ್ಣನ ನಂತರ, ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಎರಡು ದಶಕಗಳ ಕಾಲ ಒಂದರ ಹಿಂದೆ ಒಂದರಂತೆ ಬಾಕ್ಸ್ ಆಫೀಸ್ ಯಶಸ್ಸನ್ನು ನೀಡಿದರು. ನಿರ್ಮಾಪಕರಾಗಿ ಅನೇಕ ಹೊಸಬರನ್ನು ಚಿತ್ರರಂಗಕ್ಕೆ ಕರೆತಂದಿದ್ದಾರೆ. ನಟ-ನಟಿಯರಷ್ಟೇ ಅಲ್ಲ ಹೊಸ ನಿರ್ದೇಶಕರು ಮತ್ತು ಇತರ ತಂತ್ರಜ್ಞರಿಗೂ ಅವಕಾಶ ಕೊಟ್ಟಿದ್ದಾರೆ. 2004 ರಲ್ಲಿ ದ್ವಾರಕೀಶ್ ಅವರ ಆಪ್ತಮಿತ್ರ ಸಿನಿಮಾ ಅದ್ಭುತ ಯಶಸ್ಸು ಗಳಿಸಿತು.
ಮಮತೆಯ ಬಂಧನ, ಮೇಯರ್ ಮುತ್ತಣ್ಣ, ಕುಳ್ಳ ಏಜೆಂಟ್, ಕೌಬಾಯ್ ಕುಳ್ಳ, ಭಾಗ್ಯವಂತರು, ಕಿಟ್ಟು ಪುಟ್ಟು, ಸಿಂಗಾಪುರದಲ್ಲಿ ರಾಜ ಕುಳ್ಳ, ಪ್ರೀತಿ ಮಾಡು ತಮಾಷೆ, ಕುಳ್ಳ ಕುಳ್ಳಿ, ಮಂಕು ತಿಮ್ಮ, ಗುರು ಶಿಷ್ಯರು, ಮನೆ ಮನೆ ಕಥೆ, ಪೆದ್ದ ಗೆದ್ದ, ಅದೃಷ್ಟವಂತ, ನ್ಯಾಯ ಎಲ್ಲಿದೆ?, ಗೆದ್ದ ಮಗ, ಆನಂದ ಭೈರವಿ, ಪ್ರಚಂಡ ಕುಳ್ಳ, ಪೊಲೀಸ್ ಪಾಪಣ್ಣ, ಇಂದಿನ ರಾಮಾಯಣ, ನೀ ಬರೆದ ಕಾದಂಬರಿ, ನೀ ತಂದ ಕಾಣಿಕೆ ,ಮದುವೆ ಮಾಡು ತಮಾಷೆ ನೋಡು, ಬ್ರಹ್ಮ ಗಂಟು, ಆಫ್ರಿಕಾದಲ್ಲಿ ಶೀಲಾ, ಡ್ಯಾನ್ಸ್ ರಾಜ ಡಾನ್ಸ್ , ಒಂದೆ ಗೂಡಿನ ಹಕ್ಕಿಗಳು, ರಾವಣ ರಾಜ್ಯ, ಮಜ್ನು, ಆಪ್ತಮಿತ್ರ, ವಿಷ್ಣುವರ್ಧನ, ಚಾರುಲತಾ, ಆಟಗಾರ, ಚೌಕಾ, ಅಮ್ಮಾ ಐ ಲವ್ ಯು, ಆಯುಷ್ಮಾನ್ಭವ ಸೇರಿ ಹಲವು ಸಿನಿಮಾಗಳಿಗೆ ಬಂಡವಾಳ ಹಾಕಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications