Shilpa Shetty: ನಟಿ ಶಿಲ್ಪಾ ಶೆಟ್ಟಿಗೆ ಬಿಗ್ ಶಾಕ್, 98ಕೋಟಿ ರೂ ಆಸ್ತಿ ED ವಶ
ಮುಂಬೈ, ಏಪ್ರಿಲ್ 18: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿಗೆ ಜಾರಿ ನಿರ್ದೇಶನಾಲಯ ಅತಿದೊಡ್ಡ ಶಾಕ್ ನೀಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಿಲ್ಪಾ ಶೆಟ್ಟಿ ದಂಪತಿಗೆ ಸೇರಿದ ಬರೋಬ್ಬರಿ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಫ್ಲಾಟ್ ಅನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಉದ್ಯಮಿ ರಾಜ್ ಕುಂದ್ರಾ ಅವರನ್ನು ಬಿಟ್ಕಾಯಿನ್ ಸೇರಿದಂತೆ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಅವರಿಗೆ ಸಂಬಂಧಪಟ್ಟ ಸ್ಥಿರ ಮತ್ತು ಚರ ಆಸ್ತಿಯ ಜೊತೆಗೆ ಪುಣೆಯಲ್ಲಿರುವ ಬಂಗ್ಲೆ ಮತ್ತು ಷೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

2017ರಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್ ಕುಂದ್ರಾ ಅವರನ್ನು 6,600 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬಿಟ್ಕಾಯಿನ್ ಮೂಲಕ ಹಲವರಿಗೆ ಶೇಕಡಾ 10 ರಷ್ಟು ಹಣ ರಿಟರ್ನ್ ಮಾಡುವ ಭರವಸೆ ನೀಡಿ ಮೋಸ ಮಾಡಿದ ಆರೋಪ ಕೂಡ ಕೇಳಿ ಬಂದಿತ್ತು. ಇದೇ ಹಗರಣದಲ್ಲಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಇದೀಗ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ರಾಜ್ ಕುಂದ್ರಾ ಅವರಿಗೆ ಸಂಬಂಧ ಪಟ್ಟ 97.79 ಕೋಟಿ ರೂಪಾಯಿ ಆಸ್ತಿಯನ್ನು ವಶಕ್ಕೆ ಪಡೆದಿದೆ. ಇದರ ಜೊತೆಗೆ ಮುಂಬೈನ ಜುಹುನಲ್ಲಿರುವ ಫ್ಲಾಟ್ ಅನ್ನು ತನ್ನ ಸುಪರ್ದಿಗೆ ಪಡೆದುಕೊಂಡಿದೆ. ಜುಹುನಲ್ಲಿರುವ ಫ್ಲಾಟ್ ನಟಿ ಶಿಲ್ಪಾ ಶೆಟ್ಟಿ ಅವರ ಹೆಸರಿನಲ್ಲಿತ್ತು. ಒಟ್ಟಾರೆ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿಯ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿದೆ.
ED, Mumbai has provisionally attached immovable and movable properties worth Rs. 97.79 Crore belonging to Ripu Sudan Kundra aka Raj Kundra under the provisions of PMLA, 2002. The attached properties include Residential flat situated in Juhu presently in the name of Smt. Shilpa…
— ED (@dir_ed) April 18, 2024
ಜಾರಿ ನಿರ್ದೇನಾಲಯದ ಅಧಿಕಾರಿಗಳು ಈ ಬಗ್ಗೆ ಟ್ವೀಟ್((ಎಕ್ಸ್)ನಲ್ಲಿ ಹಂಚಿಕೊಂಡಿದ್ದು, 'ರಾಜ್ ಕುಂದ್ರಾಗೆ ಸೇರಿದ 97.7 ಕೋಟಿ ರೂಪಾಯಿ ಆಸ್ತಿಯನ್ನು ತಾತ್ಕಲಿಕವಾಗಿ. ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಇರುವ ಜುಹು ಮನೆ, ಪುಣೆಯಲ್ಲಿರುವ ನಿವಾಸ, ರಾಜ್ ಕುಂದ್ರಾ ಹೆಸರಲ್ಲಿರುವ ಇಕ್ವಿಟಿ ಷೇರುಗಳನ್ನು ಸೀಜ್ ಮಾಡಲಾಗಿದೆ' ಎಂದು ಮಾಹಿತಿ ನೀಡಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications