Get Updates
Get notified of breaking news, exclusive insights, and must-see stories!

ಡಾ.ವಿಷ್ಣುವರ್ಧನ್‌ ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ: ಕಾರಣ ಏನು?

ಈಗಾಗಲೇ ಕಾವೇರಿ ವಿಚಾರಕ್ಕೆ ಪ್ರತಿಭಟನೆ ಬಿಸಿ ಕಂಡಿರುವ ಕನ್ನಡಿಗರಿಗೆ ಈಗ ಮತ್ತೊಂದು ಪ್ರತಿಭಟನೆಯ ಶಾಕ್ ಎದುರಾಗಲಿದೆ. ಅದೂ ಕನ್ನಡದ ಮೇರು ನಟ, ಡಾ.ವಿಷ್ಣುವರ್ಧನ್‌ ಅವರ ಅಭಿಮಾನಿಗಳಿಂದ. ಹಾಗಾದ್ರೆ ವಿಷ್ಣುದಾದ ಅವರ ಅಭಿಮಾನಿಗಳು ಈಗ ಪ್ರತಿಭಟನೆ ನಡೆಸಲು ರಣಕಹಳೆ ಮೊಳಗಿಸಿದ್ದು ಏಕೆ ಗೊತ್ತಾ?

ಅಂದಹಾಗೆ ನಟ ಡಾ.ವಿಷ್ಣುವರ್ಧನ್‌ ಅವರು ಅಭಿಮಾನಿಗಳನ್ನ ಅಗಲಿ 14 ವರ್ಷಗಳಾದವು. ಆದ್ರೆ ಇಂದಿಗೂ ಅವರ ಅಂತ್ಯ ಸಂಸ್ಕಾರವಾದ ಜಾಗವನ್ನು, ಅಭಿವೃದ್ಧಿ ಮಾಡುವ ಕೆಲಸವನ್ನ ಯಾವುದೇ ಸರ್ಕಾರ ಮಾಡಿಲ್ಲ ಎಂದು ವಿಷ್ಣುದಾದ ಫ್ಯಾನ್ಸ್ ಕೋಪಗೊಂಡಿದ್ದಾರೆ. ಹೀಗಾಗಿ ಬೃಹತ್ ಪ್ರತಿಭಟನೆಗೆ ಮುಂದಾಗದಿದ್ದಾರೆ.

Explore Why Dr. Vishnuvardhan Fans Decided To Protest

ಹಲವು ಗೊಂದಲ ಮಧ್ಯೆ, ಡಾ.ವಿಷ್ಣುವರ್ಧನ್‌ ಅವರ ಸ್ಮಾರಕ ಮೈಸೂರಿಗೆ ಸ್ಥಳಾಂತರ ಆಗಿತ್ತು. ಆದರೆ ಅಭಿಮಾನಿಗಳು ಸ್ಮಾರಕ ಅಭಿಮಾನ್ ಸ್ಟುಡಿಯೋದಲ್ಲೇ ಆಗಬೇಕು ಎಂದು ಹಠ ಹಿಡಿದಿದ್ದಾರೆ. ನಟ ಡಾ. ವಿಷ್ಣುವರ್ಧನ್ ಅವರ ಅಂತ್ಯ ಸಂಸ್ಕಾರ ನೆರವೇರಿದ ಜಾಗದಲ್ಲೇ ಪುಣ್ಯಭೂಮಿ ಇರಬೇಕು ಎಂದು ಹಠ ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಕೂಡ ನಿರ್ಧರಿಸಿದ್ದಾರೆ.

ಅಭಿಮಾನಿಗಳ ಆರೋಪ ಏನು?

ಅಂದಹಾಗೆ ಈಗ ಅಭಿಮಾನ್‌ ಸ್ಟುಡಿಯೋದ ಮಾಲೀಕರು ಅಭಿಮಾನಿಗಳಿಗೆ ಒಳ ಪ್ರವೇಶಿಸಲು ನಿರ್ಬಂಧ ವಿಧಿಸುವುದರ ಜೊತೆಗೆ, ಪ್ರತಿವರ್ಷವೂ ಹುಟ್ಟುಹಬ್ಬ & ಪುಣ್ಯಸ್ಮರಣೆಗೆ ಹಲವಾರು ತೊಂದರೆ ನೀಡುತ್ತಿದ್ದಾರೆ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ. ಈ ಎಲ್ಲಾ ಕಾರಣಕ್ಕೆ & ಬೆಂಗಳೂರಿನಲ್ಲೇ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ಇದೀಗ ಡಿಸೆಂಬರ್‌ 17ಕ್ಕೆ ವಿಷ್ಣು ದಾದಾ ಫ್ಯಾನ್ಸ್ ಹೋರಾಟಕ್ಕೆ ಮುಂದಾಗಿದ್ದಾರೆ.

Explore Why Dr. Vishnuvardhan Fans Decided To Protest

ಹೇಗಿರಲಿದೆ ವಿಷ್ಣುವರ್ಧನ್‌ ಫ್ಯಾನ್ಸ್ ಹೋರಾಟ?

ಇನ್ನು ಡಾ.ವಿಷ್ಣುವರ್ಧನ್‌ ಅಭಿಮಾನಿ ಸಂಘಗಳ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆಯನ್ನು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜನೆ ಮಾಡಿರುವ ಬಗ್ಗೆ ತಿಳಿಸಲಾಗಿದೆ. ಹೀಗೆ ಡಿಸೆಂಬರ್‌ 17ರ ಬೆಳಗ್ಗೆ 10ರಿಂದ ಸಂಜೆ 6 ಗಂಟೆ ತನಕ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿದೆ. ಈ ಸಂದರ್ಭದಲ್ಲಿ, ನಾಡಿನ ಎಲ್ಲಾ ಕನ್ನಡಪರ ಸಂಘಟನೆಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕಲಾವಿದರ ಸಂಘ ಸೇರಿದಂತೆ ಡಾ.ವಿಷ್ಣುವರ್ಧನ್‌ ಅವರ ಒಡನಾಡಿಗಳೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಅಭಿಮಾನಿಗಳು ತಿಳಿಸಿದ್ದಾರೆ.

ಕಪ್ಪು ಬಾವುಟ ಪ್ರದರ್ಶನ ಎಚ್ಚರಿಕೆ

ಒಟ್ನಲ್ಲಿ ವಿಷ್ಣುವರ್ಧನ್‌ ಅವರ ಅಭಿಮಾನಿಗಳು, ಸ್ಮಾರಕ ನಿರ್ಮಾಣಕ್ಕಾಗಿ ಇದೀಗ ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಅಕಸ್ಮಾತ್ ಈ ಪ್ರತಿಭಟನೆಗೂ ಸರ್ಕಾರ ಸ್ಪಂದಿಸದೇ ಹೋದಲ್ಲಿ ದೆಹಲಿಯಲ್ಲಿ ನಾವು ಹೋರಾಟವನ್ನು ಮುಂದುವರಿಸಲಿದ್ದೇವೆ ಎಂದಿದ್ದಾರೆ ವಿಷ್ಣುವರ್ಧನ್‌ರ ಫ್ಯಾನ್ಸ್. ಹಾಗೇ ಸರ್ಕಾರದ ಮಂತ್ರಿಗಳು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕೂಡ, ಕಪ್ಪು ಬಾವುಟ ಪ್ರದರ್ಶನ ಮಾಡುವ ಎಚ್ಚರಿಕೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+